• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಶಕ್ತಿ ಕೇಂದ್ರದಲ್ಲಿ ಏಕದಂತನಿಗೆ ಪೂಜೆ ಸಲ್ಲಿಸಿದ ಕ್ರೈಸ್ತ ಧರ್ಮಗುರು, ಭಗಿನಿಯರು

Tulunadu News Posted On September 17, 2018
0


0
Shares
  • Share On Facebook
  • Tweet It

ಮಂಗಳೂರು: ಗಣೇಶ ಚತುರ್ಥಿ ಕೇವಲ ಹಿಂದೂಗಳ ಉತ್ಸವ ಮಾತ್ರವಾಗಿರದೇ ಸರ್ವ ಧರ್ಮಿಯರೂ ಸೇರಿ ವಿಜೃಂಭಣೆಯಿಂದ ಆಚರಿಸುವ ಹಲವಾರು ನಿದರ್ಶನಗಳ ನಮ್ಮ ಮುಂದಿದೆ. ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ. ಮಂಗಳೂರಿನ ಸಂಘನಿಕೇತನದಲ್ಲಿ ಪೂಜಿಸಲಾಗುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಭಾಗವಹಿಸಿದ್ದಾರೆ.

ಆರ್ ಎಸ್ ಎಸ್ ನ ಶಕ್ತಿ ಕೇಂದ್ರ ಎಂದೇ ಹೇಳಲಾಗುವ ಸಂಘನಿಕೇತನದ ಗಣೇಶೋತ್ಸವ ಸೌಹಾರ್ದತೆಗೆ ವೇದಿಕೆಯಾಗುತ್ತಿದೆ. ಈ ಬಾರಿ ಕ್ರೈಸ್ತ ಧರ್ಮಗುರುಗಳು ಹಾಗು ಕ್ರೈಸ್ತ ಭಗಿನಿಯರು ಈ ಗಣೇಶನ ಪಾದತಲಕ್ಕೆ ಹಣ್ಣುಹಂಪಲು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ಬಾರಿಯೂ ಬಾಲ ಏಸು ಕ್ಷೇತ್ರದ ಧರ್ಮಗುರುಗಳು ಬಂದು ಗಣಪತಿಗೆ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದರು.

ಸಂಘನಿಕೇತನದ ವತಿಯಿಂದ ಈ ಬಾರಿ 71ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘನಿಕೇತನ ಸಭಾಂಗಣದಲ್ಲಿ ಇರಿಸಲಾದ ಗಣೇಶನ ವಿಗ್ರಹಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಭಾ ಮತ್ತು ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರು ಬಂದು ಫಲಪುಷ್ಪ ಸಮರ್ಪಿಸಿ, ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ

ಮಂಗಳೂರು ಕ್ಯಾಥೊಲಿಕ್ ಸಭಾದ ಕಾರ್ಯದರ್ಶಿ ಸೆಲೆಸ್ಟೀನ್ ಡಿಸೋಜಾ, ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರಾದ ಸಿಸ್ಟರ್ ಜ್ಯೋತಿ, ಸಿಸ್ಟರ್ ಮರಿಯಾ, ಸಿಸ್ಟರ್ ಅನಿತ, ಸಿಸ್ಟರ್ ರೋಸಾ, ಸಿಸ್ಟರ್ ಸುಜಾತ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.

christian priests and Nuns offered pooja to Ganesha

ಹಲವು ವರ್ಷಗಳಿಂದ ಈ ಕ್ರೈಸ್ತ ಧರ್ಮಕೇಂದ್ರಗಳ ಧರ್ಮಗುರುಗಳು ಗಣೇಶೋತ್ಸವದಂದು ಸಂಘನಿಕೇತನಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಯಾವುದೇ ಜಾತಿ-ಧರ್ಮ ರಾಜಕೀಯವಿಲ್ಲದೆ ನಾವೆಲ್ಲರೂ ಒಂದಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇವೆ. ಮುಂದೆಯೂ ಇದೇ ರೀತಿ ಭಾಗಿಯಾಗಲು ದೇವರು ಅನುಗ್ರಹಿಸಲಿ ಎಂದು ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search