• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಭೂ ಪರಿವರ್ತನೆ ಇನ್ನು ಎಷ್ಟು ಸುಲಭ ಗೊತ್ತಾ!!

Hanumantha Kamath Posted On September 20, 2018
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯ ಸರಕಾರವು ಕೃಷಿ ಭೂಮಿಯನ್ನು ಪರಿಭಾವಿತ ಭೂ ಪರಿವರ್ತನೆಗೆ (ಡೀಮ್ಡ್ ಕನ್ವರ್ಶನ್) ಪರಿವರ್ತನಾ ವಿಧಾನವನ್ನು ಸರಳೀಕರಣಗೊಳಿಸಿರುವ ಬಗ್ಗೆ ಸೆಪ್ಟೆಂಬರ್ 17 ರಂದು ಸುತ್ತೋಲೆ ಹೊರಡಿಸಿದೆ. ಈ ಮೂಲಕ ಬರುವ ದಿನಗಳಲ್ಲಿ ಭೂ ಪರಿವರ್ತನೆ ಸರಳೀಕೃತವಾಗುವ ಸೂಚನೆಗಳು ಸಿಕ್ಕಿವೆ. ಮಂಗಳೂರಿನಲ್ಲಿ ಕಳೆದ ಕೆಲವು ಸಮಯದಿಂದ ಯಾವುದೇ ಕೃಷಿ ಜಮೀನು ಬೇರೆ ಉದ್ದೇಶಗಳಾದ ವಾಸ್ತವ್ಯ ಅಥವಾ ವಾಣಿಜ್ಯ ಕಟ್ಟಡಗಳನ್ನು ಕಟ್ಟಲು ಪರಿವರ್ತನೆಯಾಗುವ ವ್ಯವಸ್ಥೆಯಲ್ಲಿ ಸಮಸ್ಯೆ ಇತ್ತು. ಭೂ ಪರಿವರ್ತನೆ ಆಗುತ್ತಿರಲಿಲ್ಲ. ಆದರೆ ಹೊಸ ಸುತ್ತೋಲೆಯ ಪ್ರಕಾರ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ರಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಬೋಗದಾರನು ಆ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಇತರೆ ಉದ್ದೇಶಕ್ಕಾಗಿ ಬದಲಿಸಲು ಇಚ್ಚಿಸಿದರೆ, ಅಂತಹ ಅಧಿಭೋಗದಾರನು ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಸತಾವಿತ ಕಲಂ 95(2) ರ ಮೊದಲನೇ ಪರಂತುಕದ ಪ್ರಕಾರ ಸಲ್ಲಿಸಿದ ಅರ್ಜಿಯಲ್ಲಿನ ಭೂ ಉಪಯೋಗದ ಉದ್ದೇಶವು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 ರಡಿ ರಾಜ್ಯ ಸರಕಾರವು ಪ್ರಕಟಿಸುವ ಮಹಾ ಯೋಜನೆಯಲ್ಲಿರುವ (ಮಾಸ್ಟರ್ ಪ್ಲಾನ್) ಉದ್ದೇಶದಂತೆ ಇದ್ದರೆ, ಅರ್ಜಿದಾರನ ಕೋರಿಕೆಯನ್ನು ಜಿಲ್ಲಾಧಿಕಾರಿಯು ತಿರಸ್ಕರಿಸುವಂತಿಲ್ಲ. ಅಲ್ಲದೇ, ಒಂದು ವೇಳೆ ಜಿಲ್ಲಾಧಿಕಾರಿಯು ಸದರಿ ಅರ್ಜಿ ತಲುಪಿದ ದಿನಾಂಕದಿಂದ ನಾಲ್ಕು ತಿಂಗಳ ಅವಧಿಯೊಳಗೆ ತನ್ನ ತೀರ್ಮಾನವನ್ನು ಅರ್ಜಿದಾರನಿಗೆ ತಿಳಿಸದೇ ಇದ್ದಂತಹ ಸಂದರ್ಭದಲ್ಲಿ ಅದು “ಪರಿಭಾವಿತ ಭೂ ಪರಿವರ್ತನೆ” (ಡೀಮ್ಡ್ ಕನ್ವರ್ಷನ್) ಎಂದು ಭಾವಿಸಲು ಕಲಂ 95 (5) ರಲ್ಲಿ ಅವಕಾಶವಿರುತ್ತದೆ.
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ, 1)ರ ಅಡಿಯಲ್ಲಿ ಪ್ರಕಟಿಸಲಾದ ಮಹಾಯೋಜನೆ (ಮಾಸ್ಟರ್ ಪ್ಲಾನ್) ಯಡಿಯಲ್ಲಿ ಬರುವ ಜಮೀನುಗಳ ಪರಿವರ್ತನೆಯನ್ನು ಸರಳೀಕೃತಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 95 (2) ಗೆ ಉಲ್ಲೇಖಿತ ಅಧಿಸೂಚನೆಯ ದಿನಾಂಕ: 17-03-2018 ರಲ್ಲಿ ಹೇಳಲಾಗಿದೆ.
ಇಲ್ಲಿ ಇರುವ ವಿಷಯ ಏನೆಂದರೆ ಈ ನಿಯಮ ನೀವು ಮಂಗಳೂರಿನವರಾದರೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮೂಡಾದ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಮಾತ್ರ ಉಪಯೋಗವಾಗಲಿದೆ. ಹಾಗಾದರೆ ಮೂಡಾದ ಹೊರಗೆ ವಾಸಿಸುವ ಜನರಿಗೆ ಇದರಿಂದ ಏನೂ ಪ್ರಯೋಜನವಿಲ್ಲ. ಆದ್ದರಿಂದ ಒಂದು ಯೋಜನೆ ಕೇವಲ ನಗರವಾಸಿಗಳಿಗೆ ಮಾತ್ರ ಮಾಡಿರುವುದು ಸರಿನಾ ಎನ್ನುವುದು ಸದ್ಯದ ಪ್ರಶ್ನೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Hanumantha Kamath July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Hanumantha Kamath July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search