• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎರಡನೇ ಬಾರಿಯೂ ಪಾಕಿಸ್ಥಾನವನ್ನು ಎಡಮುರಿ ಕಟ್ಟಿದ ಭಾರತ..!!

TNN Correspondent Posted On September 24, 2018
0


0
Shares
  • Share On Facebook
  • Tweet It

ದುಬೈ: ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಏಷ್ಯಾಕಪ್​ನಲ್ಲಿ ಪಾಕಿಸ್ತಾನ ವಿರುದ್ಧ 9 ವಿಕೆಟ್​ಗಳ ಭಾರೀ ಗೆಲುವು ದಾಖಲಿಸಿದೆ.ಭಾನುವಾರ ನಡೆದ ಸೂಪರ್​-4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವನ್ನು 7 ವಿಕೆಟ್​ಗೆ 238 ರನ್‍ಗಳಿಗೆ ನಿಯಂತ್ರಿಸಿದ ಭಾರತ ತಂಡ 39.3 ಓವರ್​ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.ಸ್ಪರ್ಧಾತ್ಮಕ ಮೊತ್ತ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಮತ್ತು ಶಿಖರ್ ಧವನ್ ಮೊದಲ ವಿಕೆಟ್​ಗೆ 210 ರನ್​ ಜೊತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ನಂತರ ಬಂದ ಅಂಬಟಿ ರಾಯುಡು ಮತ್ತು ರೋಹಿತ್ ಗೆಲುವಿನ ದಡ ಸೇರಿಸಿದರು.ನಾಯಕ ರೋಹಿತ್119 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 111 ರನ್ ಬಾರಿಸಿ ಔಟಾಗದೇ ಉಳಿದರು. ಇದು ರೋಹಿತ್​ಗೆ 19ನೇ ಏಕದಿನ ಶತಕವಾಗಿದೆ. ಮತ್ತೊಬ್ಬ ಬ್ಯಾಟ್ಸ್ ಮನ್ ಶಿಖರ್ ಧವನ್ 100 ಎಸೆತಗಳಲ್ಲಿ 16 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದಂತೆ 114 ರನ್ ಸಿಡಿಸಿ ಔಟಾದರು. ಇದು ಧವನ್​ಗೆ 15ನೇ ಶತಕವಾಗಿದೆ.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೂ ಮಧ್ಯಮ ಕ್ರಮಾಂಕದಲ್ಲಿ ನಾಯಕ ಸರ್ಫಾರಾಜ್ ಅಹ್ಮದ್ (44) ಮತ್ತು ಶೋಯೆಬ್ ಮಲಿಕ್ (78) 4ನೇ ವಿಕೆಟ್​ಗೆ 107 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು.ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಜಸ್ ಪ್ರೀತ್ ಬುಮ್ರಾ, ಯಜುರ್ವೆಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ಪಾಕಿಸ್ತಾನ 50 ಓವರ್ 7 ವಿಕೆಟ್​ಗೆ 237 (ಮಲಿಕ್ 78, ಸರ್ಫರಾಜ್ 44, ಜಮಾನ್ 31, ಆಸೀಫ್ 30, ಬುಮ್ರಾ 29/2, ಚಾಹಲ್ 46/2, ಕುಲದೀಪ್ 41/2).
ಭಾರತ 39.3 ಓವರ್ 1 ವಿಕೆಟ್ 237 (ರೋಹಿತ್ ಅಜೇಯ 111, ಧವನ್ 114, ರಾಯುಡು ಅಜೇಯ 12).
ಪಂದ್ಯಶ್ರೇಷ್ಠ: ಶಿಖರ್ ಧವನ್

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search