• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎರಡನೇ ಬಾರಿಯೂ ಪಾಕಿಸ್ಥಾನವನ್ನು ಎಡಮುರಿ ಕಟ್ಟಿದ ಭಾರತ..!!

TNN Correspondent Posted On September 24, 2018
0


0
Shares
  • Share On Facebook
  • Tweet It

ದುಬೈ: ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಏಷ್ಯಾಕಪ್​ನಲ್ಲಿ ಪಾಕಿಸ್ತಾನ ವಿರುದ್ಧ 9 ವಿಕೆಟ್​ಗಳ ಭಾರೀ ಗೆಲುವು ದಾಖಲಿಸಿದೆ.ಭಾನುವಾರ ನಡೆದ ಸೂಪರ್​-4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವನ್ನು 7 ವಿಕೆಟ್​ಗೆ 238 ರನ್‍ಗಳಿಗೆ ನಿಯಂತ್ರಿಸಿದ ಭಾರತ ತಂಡ 39.3 ಓವರ್​ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.ಸ್ಪರ್ಧಾತ್ಮಕ ಮೊತ್ತ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಮತ್ತು ಶಿಖರ್ ಧವನ್ ಮೊದಲ ವಿಕೆಟ್​ಗೆ 210 ರನ್​ ಜೊತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ನಂತರ ಬಂದ ಅಂಬಟಿ ರಾಯುಡು ಮತ್ತು ರೋಹಿತ್ ಗೆಲುವಿನ ದಡ ಸೇರಿಸಿದರು.ನಾಯಕ ರೋಹಿತ್119 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 111 ರನ್ ಬಾರಿಸಿ ಔಟಾಗದೇ ಉಳಿದರು. ಇದು ರೋಹಿತ್​ಗೆ 19ನೇ ಏಕದಿನ ಶತಕವಾಗಿದೆ. ಮತ್ತೊಬ್ಬ ಬ್ಯಾಟ್ಸ್ ಮನ್ ಶಿಖರ್ ಧವನ್ 100 ಎಸೆತಗಳಲ್ಲಿ 16 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದಂತೆ 114 ರನ್ ಸಿಡಿಸಿ ಔಟಾದರು. ಇದು ಧವನ್​ಗೆ 15ನೇ ಶತಕವಾಗಿದೆ.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೂ ಮಧ್ಯಮ ಕ್ರಮಾಂಕದಲ್ಲಿ ನಾಯಕ ಸರ್ಫಾರಾಜ್ ಅಹ್ಮದ್ (44) ಮತ್ತು ಶೋಯೆಬ್ ಮಲಿಕ್ (78) 4ನೇ ವಿಕೆಟ್​ಗೆ 107 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು.ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಜಸ್ ಪ್ರೀತ್ ಬುಮ್ರಾ, ಯಜುರ್ವೆಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ಪಾಕಿಸ್ತಾನ 50 ಓವರ್ 7 ವಿಕೆಟ್​ಗೆ 237 (ಮಲಿಕ್ 78, ಸರ್ಫರಾಜ್ 44, ಜಮಾನ್ 31, ಆಸೀಫ್ 30, ಬುಮ್ರಾ 29/2, ಚಾಹಲ್ 46/2, ಕುಲದೀಪ್ 41/2).
ಭಾರತ 39.3 ಓವರ್ 1 ವಿಕೆಟ್ 237 (ರೋಹಿತ್ ಅಜೇಯ 111, ಧವನ್ 114, ರಾಯುಡು ಅಜೇಯ 12).
ಪಂದ್ಯಶ್ರೇಷ್ಠ: ಶಿಖರ್ ಧವನ್

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search