• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರನ್ನು ಮಾಹಿತಿ, ತಂತ್ರಜ್ಞಾನದ ಪರ್ಯಾಯ ನೆಲೆಯನ್ನಾಗಿ ಮಾಡಲು ನಳಿನ್ ಮನವಿ.

TNN Correspondent Posted On July 27, 2017


  • Share On Facebook
  • Tweet It

ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲು ಅವರು ಭಾರತದ ಸನ್ಮಾನ್ಯ ಕಾನೂನು ರಾಜ್ಯ ಸಚಿವ ಪಿ ಪಿ ಚೌಧರಿಯವರನ್ನು ಭೇಟಿಯಾಗಿ ಮಂಗಳೂರನ್ನು ಮಾಹಿತಿ ತಂತ್ರಜ್ಞಾನದ ಹಬ್ ಆಗಿ ಮಾಡಲು ಮನವಿ ಸಲ್ಲಿಸಿದರು. ಕೇಂದ್ರ ಸಚಿವರಿಗೆ ಮಂಗಳೂರಿನ ಬಗ್ಗೆ ಸಮಗ್ರ ಮಾಹಿತಿ, ಇಲ್ಲಿನ ಭೌಗೋಳಿಕ ಪ್ರದೇಶದ ಬಗ್ಗೆ ವಿವರ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನದ ಶಿಕ್ಷಣ ಸಂಸ್ಥೆಯನ್ನು ಮಂಗಳೂರಿನಲ್ಲಿ ಪ್ರಾರಂಭಿಸಿಲು ಒತ್ತಾಯಿಸಿದರು.

ಈಗಾಗಲೇ ಅನೇಕ ಮಾಹಿತಿ ಮತ್ತು ತಂತ್ರಜ್ಞಾನದ ದಿಗ್ಗಜ ಸಂಸ್ಥೆಗಳು ಬೆಂಗಳೂರಿನಲ್ಲಿ ಬೇರು ಬಿಟ್ಟಿದ್ದು ಇದರಿಂದ ಮಂಗಳೂರು ಸೇರಿ ಕರಾವಳಿ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ಯುವಕ, ಯುವತಿಯರು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದ ರಾಜಧಾನಿಯಲ್ಲಿ ಸಹಜವಾಗಿ ಒತ್ತಡ ಬಿದ್ದಿದೆ. ಇದರ ಬದಲಾಗಿ ರಾಜ್ಯದಲ್ಲಿ ವಿಮಾನ, ರೈಲು, ರಾಷ್ಟ್ರೀಯ ಹೆದ್ದಾರಿ, ಬಂದರನ್ನು ಒಳಗೊಂಡ ಏಕೈಕ ನಗರವಾಗಿರುವ ಮಂಗಳೂರನ್ನು ಮಾಹಿತಿ, ತಂತ್ರಜ್ಞಾನದ ಪರ್ಯಾಯ ಕೇಂದ್ರವನ್ನಾಗಿ ಮಾಡಿದರೆ ಇಲ್ಲಿನ ಪ್ರತಿಭಾವಂತರಿಗೆ ಊರಿನಲ್ಲಿಯೇ ಸೇವೆ ಸಲ್ಲಿಸುವ ಅವಕಾಶ ಸಿಗುತ್ತದೆ. ಇಷ್ಟೇ ಇಲ್ಲದೆ ಮಂಗಳೂರು ಕೇಂದ್ರ ಸರಕಾರದ ಮಹೋನ್ನತ ಯೋಜನೆಯಾದ ಸ್ಮಾರ್ಟ್ ಸಿಟಿಯ ಪಟ್ಟಿಯಲ್ಲಿ ಕೂಡ ಗುರುತಿಸಿಕೊಂಡಿರುವುದರಿಂದ ಇಲ್ಲಿ ತಂತ್ರಜ್ಞಾನ ಸಂಬಂಧಿತ ಸಂಸ್ಥೆಗಳು ನೆಲೆ ಕಾಣಲು ಪೂರಕ ವ್ಯವಸ್ಥೆಗಳನ್ನು ರಾಜ್ಯ ಮತ್ತು ಕೇಂದ್ರದ ಸಹಭಾಗಿತ್ವದಲ್ಲಿ ಮಾಡಲು ಸಾಧ್ಯವಿದೆ. ನಮ್ಮ ಕೇಂದ್ರದ ಯೋಜನೆಯಾದ ಸ್ಟಾರ್ಟ್ ಅಪ್ ಯೋಜನೆ ಉತ್ತಮ ಗತಿಯಲ್ಲಿ ಸಾಗುತ್ತಿದ್ದು ಅದಕ್ಕೆ ಮಂಗಳೂರಿನಲ್ಲಿ ಆಶಾದಾಯಕ ಪ್ರಗತಿ ಕಾಣಿಸುತ್ತಿದೆ. ಅಷ್ಟೇ ಅಲ್ಲದೆ ಇಂತಹ ತಂತ್ರಜ್ಞಾನ ಸಂಬಂಧಿತ ಕೈಗಾರಿಕೆಗಳು ಬಂದರೆ ಅದರಿಂದ ಪರಿಸರ ನಾಶ ಕೂಡ ಆಗುವುದಿಲ್ಲ ಮತ್ತು ಇಲ್ಲಿನ ಪರಿಸರ ಸೂಕ್ಷ್ಮ ಪ್ರಭೇದಗಳಿಗೂ ಹಾನಿಯಾಗುವುದಿಲ್ಲ ಎಂದು ಕಟೀಲ್ ಅವರು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈಗಾಗಲೇ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಂಗಳೂರು ವಿಶ್ವಮಟ್ಟದಲ್ಲಿ ತನ್ನ ಸ್ಥಾನವನ್ನು ಗುರುತಿಸಿಕೊಂಡಿದೆ. ಅದಕ್ಕೆ ಕಾರಣ ಇಲ್ಲಿನ ಜನರ ದೂರದೃಷ್ಟಿ ಮತ್ತು ಅಗಾಧ ಪರಿಶ್ರಮ. ಹಾಗಿರುವಾಗ ಇನ್ನು ಮುಂದಿನ ಜನಾಂಗ ಮಾಹಿತಿ, ತಂತ್ರಜ್ಞಾನದಲ್ಲಿ ಭವಿಷ್ಯ ಹುಡುಕುವ ಕೆಲಸಕ್ಕೆ ಮುಂದಾಗುವಾಗ ಕೇಂದ್ರ ಸರಕಾರದ ಇದರ ಅಗತ್ಯತೆಯನ್ನು ಮನಗಂಡು ಸಕಲ ಸೌಲಭ್ಯವನ್ನು ಮಂಗಳೂರಿಗೆ ನೀಡುವ ಕೆಲಸ ನಡೆಯಬೇಕಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿವರವಾಗಿ ಕೇಂದ್ರ ಸಚಿವರಿಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ ಬೆಂಗಳೂರಿನ ಮೇಲೆನೆ ತಂತ್ರಜ್ಞಾನ ದಿಗ್ಗಜರು ಒತ್ತಡ ಹಾಕುವುದಕ್ಕಿಂತ ಟೈಯರ್-2 ಸಿಟಿಯಾಗಿರುವ ಮಂಗಳೂರನ್ನು ಪರಿಗಣಿಸಬೇಕು. ಅದಕ್ಕೆ ತಳಹದಿಯಾಗಿ ನ್ಯಾಶನಲ್ ಇನ್ಸಟಿಟ್ಯೂಟ್ ಫಾರ್ ಇಲೆಕ್ಟ್ರಾನಿಕ್ ಎಂಡ್ ಐಟಿ ಅನ್ನು ಆದಷ್ಟು ಶೀಘ್ರವಾಗಿ ಸ್ಥಾಪಿಸಲು ಮುಂದಾಗಬೇಕು ಎಂದು ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.

ನಳಿನ್ ಕುಮಾರ್ ಕಟೀಲ್ ಅವರ ಈ ಪ್ರಯತ್ನ ಶೀಘ್ರದಲ್ಲಿ ಫಲ ಕಂಡರೆ ಭವಿಷ್ಯದಲ್ಲಿ ಮಂಗಳೂರು ಮಾಹಿತಿ, ತಂತ್ರಜ್ಞಾನದ ಪರ್ಯಾಯ ಕೇಂದ್ರವಾಗಿ ಬೆಳೆದು ಬೆಂಗಳೂರಿಗೆ ಸ್ಪರ್ಧೆ ಕೊಡುವುದರಲ್ಲಿ ಆಶ್ಚರ್ಯವಿಲ್ಲ. ಹಾಗೇ ಆಗಲಿ ಎನ್ನುವುದು ಅಸಂಖ್ಯಾತ ಪ್ರತಿಭಾವಂತರ ಆಶಯ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search