• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್…!!!

TNN Correspondent Posted On October 4, 2018
0


0
Shares
  • Share On Facebook
  • Tweet It

ನವದೆಹಲಿ: ತೈಲ ಬೆಲೆ ಏರಿಕೆ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಸುಂಕ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ 2.50 ರೂ. ಇಳಿಕೆಯಾಗಲಿದೆ.

ತೈಲ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹಣಕಾಸು ಇಲಾಖೆಯ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಸರ್ಕಾರಕ್ಕೆ 10,500 ಕೋಟಿ ರೂ. ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳು ವ್ಯಾಟ್ ತೆರಿಗೆಯನ್ನು ಕಡಿತಗೊಳಿಸಲಿ ಎಂದು ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ತೈಲ 76 ಡಾಲರ್ ನಲ್ಲಿ ಮಾರಾಟವಾಗುತ್ತಿದೆ. ಇದರ ಜೊತೆಯಲ್ಲಿ ಅಮೆರಿಕ ಚೀನಾ ವಾಣಿಜ್ಯ ಸಮರ, ಇರಾನ್ ನಿಂದ ತೈಲ ಖರೀದಿಗೆ ನಿರ್ಬಂಧ ಹೇರಿದ ಪರಿಣಾಮ ಡಾಲರ್ ಮುಂದೆ ರೂಪಾಯಿ ದುರ್ಬಲವಾಗುತ್ತಿದ್ದು 73 ರೂ. ಗಡಿ ದಾಟಿದೆ. ಹೀಗಾಗಿ ತೈಲ ಬೆಲೆ ಭಾರತದಲ್ಲಿ ಏರಿಕೆಯಾಗುತ್ತಿದೆ.

ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

2014 ರಿಂದ 2016 ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ. ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು.

ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ. ನಿಂದ 21.48 ರೂ., ಡೀಸೆಲ್ ಮೇಲೆ 3.56 ರೂ.ನಿಂದ 17.33 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿತ್ತು. 2016 ರ ವರೆಗೆ ಈ ಏರಿಕೆ ಮಾಡಿದ್ದು, 2017 ರ ಅಕ್ಟೋಬರ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಅಬಕಾರಿ ಸುಂಕದಿಂದ ಸಂಗ್ರಹವಾದ ಹಣವನ್ನು ಜನರ ಕಲ್ಯಾಣ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ತಿಳಿಸಿತ್ತು.

0
Shares
  • Share On Facebook
  • Tweet It


#PMMODI


Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
You may also like
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!
November 3, 2018
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!
October 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search