• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಾಹನ ಸವಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್…!!!

TNN Correspondent Posted On October 4, 2018


  • Share On Facebook
  • Tweet It

ನವದೆಹಲಿ: ತೈಲ ಬೆಲೆ ಏರಿಕೆ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಸುಂಕ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ 2.50 ರೂ. ಇಳಿಕೆಯಾಗಲಿದೆ.

ತೈಲ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹಣಕಾಸು ಇಲಾಖೆಯ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಸರ್ಕಾರಕ್ಕೆ 10,500 ಕೋಟಿ ರೂ. ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳು ವ್ಯಾಟ್ ತೆರಿಗೆಯನ್ನು ಕಡಿತಗೊಳಿಸಲಿ ಎಂದು ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ತೈಲ 76 ಡಾಲರ್ ನಲ್ಲಿ ಮಾರಾಟವಾಗುತ್ತಿದೆ. ಇದರ ಜೊತೆಯಲ್ಲಿ ಅಮೆರಿಕ ಚೀನಾ ವಾಣಿಜ್ಯ ಸಮರ, ಇರಾನ್ ನಿಂದ ತೈಲ ಖರೀದಿಗೆ ನಿರ್ಬಂಧ ಹೇರಿದ ಪರಿಣಾಮ ಡಾಲರ್ ಮುಂದೆ ರೂಪಾಯಿ ದುರ್ಬಲವಾಗುತ್ತಿದ್ದು 73 ರೂ. ಗಡಿ ದಾಟಿದೆ. ಹೀಗಾಗಿ ತೈಲ ಬೆಲೆ ಭಾರತದಲ್ಲಿ ಏರಿಕೆಯಾಗುತ್ತಿದೆ.

ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

2014 ರಿಂದ 2016 ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ. ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು.

ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ. ನಿಂದ 21.48 ರೂ., ಡೀಸೆಲ್ ಮೇಲೆ 3.56 ರೂ.ನಿಂದ 17.33 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿತ್ತು. 2016 ರ ವರೆಗೆ ಈ ಏರಿಕೆ ಮಾಡಿದ್ದು, 2017 ರ ಅಕ್ಟೋಬರ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಅಬಕಾರಿ ಸುಂಕದಿಂದ ಸಂಗ್ರಹವಾದ ಹಣವನ್ನು ಜನರ ಕಲ್ಯಾಣ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ತಿಳಿಸಿತ್ತು.

  • Share On Facebook
  • Tweet It


- Advertisement -
#PMMODI


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ…!!!!!!
November 3, 2018
ಮತ್ತೆ ಮೇಲಕ್ಕೇರಿದ ಮೋದಿ ಸರ್ಕಾರ….!!! ಹೇಗೆ..?
November 1, 2018
ಮುಂದಿನ ಲೋಕಸಭೆಯಲ್ಲಿ ಎಂಎಸ್ ಧೋನಿ , ಗಂಭೀರ್ ಬಿ.ಜೆ.ಪಿ ಯಿಂದ ಸ್ಪರ್ಧೆ…!!!
October 23, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search