• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಿಯುಗದ ಶ್ರವಣಕುಮಾರ..!

TNN Correspondent Posted On December 3, 2018
0


0
Shares
  • Share On Facebook
  • Tweet It

ಮಂಗಳೂರು_ ರಾಮಾಯಣದಲ್ಲಿ ಬರುವ ಶ್ರವಣ ಕುಮಾರನ ಕಥೆ ಬಹುತೇಕ ಎಲ್ಲರಿಗೂ ಗೊತ್ತಿರುವ ವಿಚಾರ. ಕುರುಡರಾಗಿದ್ದ ತಂದೆ-ತಾಯಿಯ ಆಸೆ ತೀರಿಸಲು ಅವರನ್ನು ತಕ್ಕಡಿಯಲ್ಲಿ ಕುಳ್ಳಿರಿಸಿ ಹೆಗಲಲ್ಲಿ ಹೊತ್ತೊಯ್ದು ತೀರ್ಥಯಾತ್ರೆ ಮಾಡಿಸುವ ಮೂಲಕ ಆದರ್ಶ ಪುತ್ರ ಎನಿಸಿಕೊಂಡವ ಶ್ರವಣಕುಮಾರ. ಅಂತೆಯೇ ಆಧುನಿಕ ಕಾಲದಲ್ಲೂ ಒಬ್ಬ ಶ್ರವಣಕುಮಾರ ಮಂಗಳೂರಿನಲ್ಲಿದ್ದಾನೆ..ಆತ ತಾಯಿಗಾಗಿ ಮಾಡಿದ ಶ್ರಮ ನೋಡಿದ್ರೆ ಎಲ್ರೂ ಭೇಷ್ ಎನ್ನುವಂತಿದೆ…

ಇಂದಿನ ಈ ಆಧುನಿಕ ಕಾಲದಲ್ಲೂ ಶ್ರವಣಕುಮಾರನಂತಹ ಪುತ್ರರು ಇದ್ದಾರೆ ಎಂದರೆ ಅದು ನಂಬೋದು ಸ್ವಲ್ಪ ಕಷ್ಟವಾಗುತ್ತೆ. ಆದ್ರೆ ಈ ಮಾತಿಗೆ ಪೂರಕವಾಗಿ ಮಂಗಳೂರಿನಲ್ಲಿ ಒಬ್ಬ ವ್ಯಕ್ತಿ ಕಾಣಸಿಕ್ಕಿದ್ದಾರೆ. ಆಧುನಿಕ ಶ್ರವಣಕುಮಾರನೆಂದು ಗುರುತಿಸಿಕೊಂಡಿರುವ ಅವರು ತಮ್ಮ ತಾಯಿಯನ್ನು ತೀರ್ಥಯಾತ್ರೆಗೆ ಕರೆದೊಯ್ಯುತ್ತಿದ್ದಾರೆ. ಯಸ್ ಮೂಲತಃ ಮೈಸೂರಿನವರಾಗಿರುವ ಡಿ.ಕೃಷ್ಣಕುಮಾರ್ ಅವರೇ ಆಧುನಿಕ ಶ್ರವಣ ಕುಮಾರ. ಇವರು ತನ್ನ ತಾಯಿ ಚೂಡಾರತ್ನ ಅವರೊಂದಿಗೆ ಭಾರತ ಯಾತ್ರೆ ಮಾಡುತ್ತಿದ್ದಾರೆ. ಆ ಕಾಲದ ಶ್ರವಣಕುಮಾರ ತಂದೆ-ತಾಯಿಯನ್ನು ಹೊತ್ತು ತೀರ್ಥಯಾತ್ರೆ ಮಾಡಿಸಿದಂತೆ ಈ ಆಧುನಿಕ ಶ್ರವಣಕುಮಾರ ಬಜಾಜ್ ಚೇತಕ್ ಸ್ಕೂಟರ್ ನಲ್ಲಿ 70ರ ಹರೆಯದ ತನ್ನ ತಾಯಿಯನ್ನು ಕುಳ್ಳಿರಿಸಿ ಭಾರತ ದರ್ಶನ ಮಾಡಿಸುತ್ತಿದ್ದಾರೆ. ಚೂಡಾರತ್ನ ಅವರ ಪತಿ ದಕ್ಷಿಣಾಮೂರ್ತಿ ಅವರು ನಾಲ್ಕು ವರ್ಷಗಳ ಹಿಂದೆಯಷ್ಟೇ ಸ್ವರ್ಗಾಸ್ತರಾಗಿದ್ದು, ಅದುವರೆಗೆ ಪತಿ, ಮನೆ ಕುಟುಂಬವೆಂದಷ್ಟಕ್ಕೆ ಸೀಮಿತವಾಗಿದ್ದ ಅವರು ಇತ್ತೀಚೆಗೆ ಮಗನೊಂದಿಗೆ ಮಾತನಾಡುವ ವೇಳೆ ತಾನು ಬೇಲೂರು, ಹಳೆಬೀಡು ಕ್ಷೇತ್ರಗಳನ್ನು ನೋಡಿಲ್ಲ ಎಂದಿದ್ದರು. ಈ ಮಾತಿನಿಂದ ಬೇಸರಗೊಂಡ ಕೃಷ್ಣಕುಮಾರ್ ಆ ಕ್ಷಣವೇ ಮಾತೃ ಸೇವಾ ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ತಮ್ಮ ಕೆಲಸ ತೊರೆದು ಬಂದು ಸ್ಕೂಟರ್ ನಲ್ಲೆ ತನ್ನ ತಾಯಿಯನ್ನು ಕುಳ್ಳಿರಿಸಿ ಯಾತ್ರೆ ಆರಂಭಿಸಿದ್ದಾರೆ.

 

ಮೈಸೂರಿನಿಂದ ಆರಂಭಿಸಿ ಇದೀಗ  ಹನ್ನೊಂದು ತಿಂಗಳಲ್ಲಿ 7 ರಾಜ್ಯಗಳಲ್ಲಿ ಸುತ್ತಾಡಿ 29 ಸಾವಿರಕ್ಕೂ ಅಧಿಕ ಕಿ.ಮೀ. ಪ್ರಯಾಣಿಸುವ ಮೂಲಕ ದಾಖಲೆ ಮಾಡಿದ್ದಾರೆ. ಇದೀಗ ಕರಾವಳಿ ಭಾಗಕ್ಕೆ ಆಗಮಿಸಿರುವ ಈ ತಾಯಿ-ಮಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಜೊತೆಗೆ ಕೇವಲ ತೀರ್ಥಕ್ಷೇತ್ರಗಳಷ್ಟೇ ಅಲ್ಲದೇ ಪ್ರತಿ ಊರುಗಳಲ್ಲಿ ತಾಯಿಯನ್ನು ಕರೆದೊಯ್ದು ತಾಣಗಳನ್ನು ತೋರಿಸುತ್ತಿದ್ದಾರೆ ಕೃಷ್ಣಕುಮಾರ್. ಇನ್ನು ತನ್ನ ಮಗನ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಚೂಡಾರತ್ನ, ‘ತನ್ನ ಮನದ ಇಂಗಿತವನ್ನು ಅರಿತು ತನಗೆ ಭಾರತಯಾತ್ರೆ ಮಾಡಿಸುತ್ತಿದ್ದಾನೆ. ಇಂತಹ ಮಗನನ್ನು ಪಡೆದಿರುವುದು ನನಗೆ ಹೆಮ್ಮೆಯ ಸಂಗತಿ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ…

ಒಟ್ಟಿನಲ್ಲಿ ಈ ಆಧುನಿಕ ಕಾಲದಲ್ಲೂ ಇಂತಹ ಪುತ್ರಂದಿರು ಇದ್ದಾರೆ ಅನ್ನೋದಕ್ಕೆ ಇವರು ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಕೃಷ್ಣಕುಮಾರ್ ಪ್ರತಿಯೊಬ್ಬ ಮಕ್ಕಳಿಗೂ ಮಾದರಿಯಾಗಿದ್ದಾರೆ. ತನ್ನ ತಾಯಿಗಾಗಿ, ತಾಯಿಯ ಖುಷಿಗಾಗಿ ಹಂಬಲಿಸುತ್ತಿರುವ ಇವರು ನಿಜಕ್ಕೂ ಆಧುನಿಕ ಶ್ರವಣಕುಮಾರ. ಇಂತಹ ಮಗನನ್ನು ಪಡೆದ ಈ ತಾಯಿ ನಿಜಕ್ಕೂ ಧನ್ಯಳು.

0
Shares
  • Share On Facebook
  • Tweet It


- Advertisement -
mangalore


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಚೀನಾ ಗೂಡು ದೀಪಕ್ಕೆ‌ ಹೇಳಿ ಗುಡ್ ಬೈ…!! ನಮ್ಮಲ್ಲಿ ಇದೆ ಸ್ವದೇಶಿ ಗೂಡು ದೀಪ..!!
November 5, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search