• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀ ವನದುರ್ಗಾ ದೇವಿ ಸಾನ್ನಿಧ್ಯ ಪುನಃ ನಿರ್ಮಾಣ ಅಷ್ಟಭುಜದ ಶಿಲಾಕಟ್ಟೆ!

Ravi Varma Posted On May 25, 2019
0


0
Shares
  • Share On Facebook
  • Tweet It

ಸುಬ್ರಹ್ಮಣ್ಯ: ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನ್ನಿಧ್ಯದಲ್ಲಿ ಪ್ರತಿಷ್ಠಾಪನಾ ಬ್ರಹ್ಮಕಲಶಾಭಿಷೇಕ ಮೇ 25 ಮತ್ತು 26ರಂದು ನಡೆಯಲಿದೆ. ಕುಂಟಾರು ವಾಸುದೇವ ತಂತ್ರಿ ಮತ್ತು ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿ ವಿಧಾನಗಳು ನೆರವೇರಲಿವೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ನಡುಬೈಲು ತಿಳಿಸಿದ್ದಾರೆ.

ಕ್ಷೇತ್ರವನ್ನು ಸುಮಾರು 40 ಲಕ್ಷ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಪುನಃನಿರ್ಮಾಣಗೊಳಿಸಲಾಗಿದೆ. ಅಷ್ಟಭುಜ ಶಿಲಾ ಕಟ್ಟೆಯ ನಿರ್ಮಾಣವಾಗಿದೆ. 25ರಂದು ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಮತ್ತು ಭಜನಾ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಧಾರ್ಮಿಕ ಸಭೆ ನಡೆಯಲಿದ್ದು, ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದಯಾನಂದ ಕತ್ತಲ್ ಸಾರ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕೆ.ಎಸ್ . ಹೆಗ್ಡೆ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಮಹಾಬಲೇಶ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಗಳೂರು ವಿಭಾಗದ ನಿರ್ದೇಶಕ ಚಂದ್ರಶೇಖರ, ಮಿಲ್ಕ್ ಮಾಸ್ಟರ್ ರಾಘವ್ ಗೌಡ ಪಲ್ಲತ್ತಡ್ಕ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳಿಕ ಮಂಗಳೂರಿನ ಕಲಾಕುಂಭ ಸಾಂಸ್ಕೃತಿಕ ವೇದಿಕೆ ಸದಸ್ಯರಿಂದ ತುಳುನಾಡ ಸಂಸ್ಕೃತಿ ಪ್ರದರ್ಶಿತವಾಗಲಿದೆ.

ಕಾರಣಿಕ ತಾಣ

800 ವರ್ಷಗಳ ಇತಿಹಾಸವಿರುವ ನಿಂತಿಕಲ್ಲು ಶ್ರೀ ವನದುರ್ಗಾ ಉಮಾಮಹೇಶ್ವರ ಶಕ್ತಿಯು ನಿಂತಿರುವ ಕಲ್ಲಿನಲ್ಲಿ ಇತ್ತು ಎಂಬುದಾಗಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಿದೆ. ಹಿಂದಿನ ರಾಜರ ಕಾಲದಲ್ಲಿ ಶಕ್ತಿ ಇರುವ ನಿಂತ ಕಲ್ಲನ್ನು ಆನೆಯಿಂದ ಹಗ್ಗ ಕಟ್ಟಿ ಎಳೆಯಲು ನೋಡಿದಾಗ ದೇವಿ ದುಂಬಿ ರೂಪದಲ್ಲಿ ಬಂದು ಆನೆಯ ಮೇಲೆ ದಾಳಿ ಮಾಡಿತು. ದಾಳಿಯಿಂದ ಆನೆ ಛಿದ್ರವಾಗಿ ಬೇರೆ ಬೇರೆ ಜಾಗಕ್ಕೆ ಬಿಟ್ಟು. ಬಾಲ ಬಿದ್ದ ಜಾಗ ಬೀರಾಳ, ಕಿವಿ ಬಿದ್ದ ಜಾಗ ಕೆರೆಕ್ಕೋಡಿ, ಹೊಟ್ಟೆಯ ಭಾಗ ಬಿದ್ದ ಸ್ಥಳ ಅಂಬೋಜಿಕೆರೆ ಆಗಿದೆ. ಈಗಲೂ ಈ ಸ್ಥಳಗಳು ಗ್ರಾಮದಲ್ಲಿದೆ. ಈ ಶಕ್ತಿ ಕಲ್ಲಿನ ಕಾರಣದಿಂದ ನಿಂತಿಕಲ್ಲು ಎಂಬ ಹೆಸರು ಈ ಊರಿಗೆ ಬಂದಿದೆ. ಆರೋಗ್ಯ, ಉದ್ಯೋಗ, ಸಂತಾನ ಭಾಗ್ಯ, ವ್ಯವಹಾರ, ಕಂಕಣ ಭಾಗ್ಯಕ್ಕಾಗಿ ನಿಂತಿಕಲ್ಲು ಸಾನ್ನಿಧ್ಯದಲ್ಲಿ ಪ್ರಾರ್ಥನೆ ನೆರವೇರಿಸಿ ಪ್ರತಿಫಲ ಪಡೆಯುತ್ತಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Ravi Varma September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Ravi Varma September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search