• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಗಸ್ಟ್ ನಲ್ಲಿ ಮಂಗಳೂರು ಸೆಂಟ್ರಲ್ ನಲ್ಲಿ ಫ್ಲಾಟ್ ಫಾರಂ ನಿರ್ಮಾಣಕ್ಕೆ ಶಿಲಾನ್ಯಾಸ!!

Hanumantha Kamath Posted On July 19, 2019
0


0
Shares
  • Share On Facebook
  • Tweet It

  • ನಾನು ನಮ್ಮ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ರೈಲ್ವೆ ಸಹಾಯಕ ಸಚಿವರಾಗಿರುವ ನಮ್ಮದೇ ರಾಜ್ಯದವರಾದ ಸುರೇಶ್ ಅಂಗಡಿಯವರನ್ನು ಭೇಟಿಯಾದ ವಿಚಾರ ನಿಮಗೆ ನಿನ್ನೆ ತಿಳಿಸಿದ್ದೆ. ನಾನು ಕೊಟ್ಟ ಮನವಿ ಪತ್ರದಲ್ಲಿ ಬರೆದಿರುವ ಪ್ರಮುಖ ವಿಚಾರಗಳಲ್ಲಿ ಒನ್ ಬೈ ಒನ್ ಇವತ್ತು ನಿಮ್ಮ ಮುಂದೆ ಇಡುತ್ತಿದ್ದೇನೆ. ನಮಗೆ ಮಂಗಳೂರು-ಬೆಂಗಳೂರು ರೈಲು ಶುರುವಾದಾಗ ಸಹಜವಾಗಿ ತುಂಬಾ ಖುಷಿಯಾಗಿತ್ತು. ಆದರೆ ಅದು ಮೈಸೂರು ಮಾರ್ಗವಾಗಿ ಹೋಗುತ್ತೆ ಎಂದಾಗ ಆ ರೈಲು ತೆಗೆದುಕೊಳ್ಳುವ ಅವಧಿಯ ಬಗ್ಗೆ ಒಂದಿಷ್ಟು ಅಸಮಾಧಾನ ಇತ್ತು. ಅದರ ನಂತರ ಮತ್ತೊಂದು ರೈಲು ಪ್ರಾರಂಭವಾಗಿ ಅದು ಶ್ರವಣಬೆಳಗೊಳದ ಮೂಲಕ ಬೆಂಗಳೂರಿಗೆ ಹೋಗಿ ಬರುತ್ತದೆ ಎಂದು ಗೊತ್ತಾದಾಗ ಅದು ಹೊಸ ಉತ್ಸಾಹವನ್ನು ನೀಡಿತ್ತು. ಯಾಕೆಂದರೆ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುವ ರಾತ್ರಿ ರೈಲು ತೆಗೆದುಕೊಳ್ಳುವುದಕ್ಕಿಂತ ಕಡಿಮೆ ಅವಧಿಯನ್ನು ಸುಮಾರು ಒಂದೂವರೆ ಗಂಟೆಯಷ್ಟು ಕಡಿಮೆ ಅವಧಿಯನ್ನು ಶ್ರವಣಬೆಳಗೊಳ ಮಾರ್ಗವಾಗಿ ಹೋಗುವ ರೈಲು ತೆಗೆದುಕೊಳ್ಳುತ್ತದೆ. ಇದರಿಂದ ಜನರ ಸಮಯ ಉಳಿತಾಯವಾಗಲಿದೆ. ಜನರು ಈ ರೈಲು ಅಂದರೆ 16511\16513 ಇದರ ಮೇಲೆ ಹೆಚ್ಚು ಅವಲಂಬಿತರಾಗಿದ್ದರು. ಆದರೆ ವಿಚಾರ ಏನೆಂದರೆ ಈ ಶ್ರವಣಬೆಳಗೊಳ ಮಾರ್ಗದ ಬೆಂಗಳೂರು-ಮಂಗಳೂರು ರೈಲು ವಾರದಲ್ಲಿ ಮೂರು ದಿನ ಮಾತ್ರ ಸಂಚಾರ ಮಾಡುತ್ತದೆ. ಉಳಿದ ಮೂರು ದಿನ ಮೈಸೂರು ಮಾರ್ಗದಿಂದ ಬೆಂಗಳೂರಿಗೆ ಹೋಗುವ ರೈಲಿನಲ್ಲಿ ಜನ ಬೆಂಗಳೂರಿಗೆ ಹೋಗಬೇಕು. ನಾನು ಸುರೇಶ್ ಅಂಗಡಿಯವರ ಬಳಿ ವಿನಂತಿ ಮಾಡಿದ್ದು ಏನೆಂದರೆ ಪ್ರತಿನಿತ್ಯ ಮಂಗಳೂರಿನಿಂದ ಬೆಂಗಳೂರಿಗೆ ಶ್ರವಣಬೆಳಗೊಳ ಮಾರ್ಗವಾಗಿಯೇ ರೈಲು ಸಂಚರಿಸಲಿ. ಇದರಿಂದ ಜನರ ಸಮಯ ಉಳಿತಾಯ ಮಾತ್ರವಲ್ಲ, ರೈಲ್ವೆ ಇಲಾಖೆಗೆ ಕೂಡ ಇಂಧನ ಉಳಿತಾಯವಾಗಲಿದೆ ಎಂದೆ.

ನಂತರ ನಾನು ವಿನಂತಿ ಮಾಡಿದ್ದು ಮಂಗಳೂರಿನಿಂದ ಬೆಂಗಳೂರಿಗೆ ಕಾರವಾರದ ತನಕ ಬಂದು ಹೋಗುವ ಹಗಲು ರೈಲಿನ ಬಗ್ಗೆ. ಅದು ಪ್ರತಿನಿತ್ಯ ಹೋಗಬೇಕಾಗಿದ್ದದ್ದು ಈಗ ವಾರದಲ್ಲಿ ಮೂರು ದಿನ ಮಾತ್ರ ಓಡುತ್ತಿದೆ. ಹಿಂದೆ ಅದೇ ರೈಲು ಹಗಲಿನ ಹೊತ್ತಿನಲ್ಲಿ ಮಂಗಳೂರು-ಬೆಂಗಳೂರು ನಡುವೆ ನಿತ್ಯ ಓಡಾಡಿಕೊಂಡಿತ್ತು. ಈಗ ಯಾಕೆ ಇಳಿಸಲಾಗಿದೆಯೋ?
ಅದರ ನಂತರ ನನ್ನ ಕಳಕಳಿ ಇದ್ದದ್ದು ನಮ್ಮ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಗ್ಗೆ. ನನ್ನ ಹಿತೈಷಿಗಳಿಗೆ ಒಂದು ವಿಷಯ ಗೊತ್ತಿರುತ್ತೆ, ಅದೇನೆಂದರೆ ನೀವು ಗೋವಾದಿಂದ ಮಂಗಳೂರಿಗೆ ಬರುವವರಾಗಿದ್ದರೆ ನೀವು ಪ್ರಯಾಣಿಸುವ ರೈಲು ಮಂಗಳೂರು ಹೊರವಲಯದ ತೋಕೂರಿನಲ್ಲಿ ಇಳಿಸಂಜೆ ಸುಮಾರು ಏಳು-ಏಳುವರೆ ಗಂಟೆಗೆ ಬಂದು ಮುಟ್ಟಿದರೂ ಅದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಬಂದು ನಿಲ್ಲುವಾಗ ಒಂಭತ್ತೂವರೆಯೋ ಹತ್ತು ಗಂಟೆಯೋ ಆಗುತ್ತದೆ. ಇದು ಯಾಕೆಂದರೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಫ್ಲಾಟ್ ಫಾರಂ ಕೊರತೆ ಎನ್ನುವ ಉತ್ತರ. ಹಾಗಾದರೆ ಈ ಸಮಸ್ಯೆಯನ್ನು ನಮ್ಮ ನಾಗರಿಕರು ಯಾವತ್ತೂ ಅನುಭವಿಸಲೇಬೇಕಾ ಎನ್ನುವ ಪ್ರಶ್ನೆಗೆ ಇಲ್ಲ ಎನ್ನುವ ಉತ್ತರ ಯಾವತ್ತೋ ಬಂದಾಗಿದೆ. ಮೂರು ವರ್ಷಗಳ ಹಿಂದೆನೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ 4 ನೇ ಮತ್ತು 5 ನೇ ಫ್ಲಾಟ್ ಫಾರಂ ನಿರ್ಮಾಣಕ್ಕೆ 14 ಕೋಟಿ ಅನುದಾನ ಬಿಡುಗಡೆಯಾಗಿದೆ. ಅದಕ್ಕೆ ನಾನೇ ಸಾಕ್ಷಿ. ನಾನು ಆಗ ರೈಲ್ವೆಯ ಡಿಆರ್ ಸಿಸಿ ಸದಸ್ಯನಾಗಿದ್ದೇನೆ. ಅನುದಾನ ಸ್ಯಾಂಕ್ಷನ್ ಆಗಿ ಮೂರು ವರ್ಷವಾದರೂ ಒಂದು ಇಟ್ಟಿಗೆ ಇಲ್ಲಿ ಸರಿಸುವ ಕೆಲಸ ರೈಲ್ವೆ ಬೋರ್ಡ್ ನವರು ಮಾಡಿಲ್ಲ. ನಾನು ಈ ವಿಷಯವನ್ನು ಸುರೇಶ್ ಅಂಗಡಿಯವರಿಗೆ ಮನವರಿಕೆ ಮಾಡಿದ ತಕ್ಷಣ ಅವರು ಮೊದಲು ಮಾಡಿದ್ದೇನು ಗೊತ್ತೆ?

ತಮ್ಮ ಪಿಎಯವರನ್ನು ಕರೆದರು. ಶ್ರವಣಬೆಳಗೊಳ ಮಾರ್ಗದ ರೈಲು ನಿತ್ಯ ಸಂಚರಿಸಬೇಕು ಎಂದರು. ಮಂಗಳೂರು-ಬೆಂಗಳೂರು ಕಾರವಾರ ತನಕದ ರೈಲು ಕೂಡ ನಿತ್ಯ ಬೆಳಿಗ್ಗೆ ಓಡಾಡಬೇಕು ಎಂದರು. ಇನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ 4 ಮತ್ತು 5 ನೇ ಫ್ಲಾಟ್ ಫಾರಂ ನಿರ್ಮಾಣಕ್ಕೆ ಶಿಲಾನ್ಯಾಸವನ್ನು ಅಗಸ್ಟ್ 20 ರ ಒಳಗೆ ನಿಗದಿಪಡಿಸಿ ಎಂದರು. ಅಲ್ಲಿಗೆ ನನ್ನ ಊರಿನ ನಾಗರಿಕರ ಬಹುದಿನಗಳ ಕನಸು ಈಡೇರುವ ಲಕ್ಷಣ ಕಾಣಿಸಿದೆ. ಇಷ್ಟು ಶೀಘ್ರದಲ್ಲಿ ಒಬ್ಬ ಜನಸಾಮಾನ್ಯನ ಮನವಿಗೆ ಓಗೊಟ್ಟ ಸರಕಾರವನ್ನು ನಾನು ನೋಡಿಲ್ಲ, ಇನ್ನೂ ಇದೆ. ನಾಳೆ ಸಿಗೋಣ!

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Hanumantha Kamath January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Hanumantha Kamath January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search