• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೆನಪಿಡಿ ಪ್ರಾಪರ್ಟಿ ಕಾರ್ಡ್ ರದ್ದಾಗಿಲ್ಲ, ಮುಂದೂಡಲಾಗಿದೆ ಅಷ್ಟೇ!!

Hanumantha Kamath Posted On October 12, 2019
0


0
Shares
  • Share On Facebook
  • Tweet It

ಆಸ್ತಿ ನೊಂದಾವಣೆ ಮಾಡುವಾಗ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಎನ್ನುವ ನಿರ್ಬಂಧ ಕನಿಷ್ಟ ಆರು ತಿಂಗಳಿಗೆ ಮುಂದೂಡಲಾಗಿದೆ. ಈ ಮೂಲಕ ಅದರ ದುರ್ಲಾಭ ಪಡೆಯುತ್ತಿದ್ದವರಿಗೆ ತಲೆ ಮೇಲೆ ಆಕಾಶ ಕಳಚಿ ಬಿದ್ದಂತೆ ಆಗಿದೆ. ಇಷ್ಟು ದಿನ ಏನು ನಡೆಯುತ್ತಿತ್ತು ಎಂದರೆ ನೀವು ಹಣ ಬಿಚ್ಚಿದರೆ ನಿಮಗೆ ಯಾವಾಗ ಬೇಕೋ ಆವಾಗ ತಕ್ಷಣ ಪ್ರಾಪರ್ಟಿ ಕೊಡುವ ವ್ಯವಸ್ಥೆ ಆಗುತ್ತಿತ್ತು. ಉದಾಹರಣೆಗೆ ನೀವು ಹದಿನೈದು ಸಾವಿರ ಕೊಟ್ಟರೆ ನಿಮಗೆ ಎರಡೇ ದಿನಗಳಲ್ಲಿ ಯಾವುದೇ ಕಿರಿಕಿರಿ ಇಲ್ಲದೆ ಪ್ರಾಪರ್ಟಿ ಕಾರ್ಡ್ ನಿಮ್ಮ ಕೈಯಲ್ಲಿ ಇರುತ್ತಿತ್ತು. ಅದೇ ನೀವು ಐದಾರು ಸಾವಿರ ಕೊಡುವವರಾದರೆ ಒಂದು ವಾರದೊಳಗೆ ಪ್ರಾಪರ್ಟಿ ಕಾರ್ಡ್ ರೆಡಿ. ಅದೇ ಏನು ಕೊಡದೇ ನ್ಯಾಯ ಮಾರ್ಗದಿಂದ ನಾನು ಹೋದಾಗ ನನಗೆ ಒಂದು ತಿಂಗಳು ಮತ್ತು ಒಂದು ವಾರ ಹಿಡಿದಿದೆ.

ಇನ್ನು ಅನೇಕ ಜನಸಾಮಾನ್ಯರಿಗೆ ಪ್ರಾಪರ್ಟಿ ಕಾರ್ಡ್ ಮಾಡಿಸಲು ಅದೆಷ್ಟು ಸಮಯ ಹಿಡಿದಿದೆ ಎನ್ನುವುದು ಅವರಿಗೆ ಮಾತ್ರ ಗೊತ್ತು. ಅಷ್ಟಕ್ಕೂ ಪ್ರಾಪರ್ಟಿ ಕಾರ್ಡ್ ಮಾಡಿಸುವ ಪ್ರಕ್ರಿಯೆ ಹೇಗಿರುತ್ತೆ ಎನ್ನುವುದನ್ನು ನಿಮಗೆ ವಿವರಿಸುತ್ತೇನೆ. ನೀವು ಪ್ರಾಪರ್ಟಿ ಕಾರ್ಡ್ ಮಾಡಿಸಲು ಅಗತ್ಯವಿರುವ ದಾಖಲೆಗಳನ್ನು ಪ್ರಾಪರ್ಟಿ ಕಾರ್ಡ್ ಕಚೇರಿಯಲ್ಲಿ ಕೊಡಬೇಕು. ಅಲ್ಲಿ ಅದನ್ನು ಪಡೆದು ಸ್ವೀಕೃತಿ ಪತ್ರ ನೀಡುತ್ತಾರೆ. ಅದರ ನಂತರ ಸರ್ವೆಯರ್ ನಿಮ್ಮ ಜಾಗಕ್ಕೆ ಬಂದು ಸರ್ವೆ ಮಾಡಿ ಸರ್ವೆ ನಂಬರ್, ಯಾರೆಲ್ಲ ಹೆಸರಿನಲ್ಲಿ ಮಾಲೀಕತ್ವ ಇದೆ ಎಂದು ಮಾಹಿತಿಯನ್ನು ಬರೆದು ಅದರ ಡ್ರಾಫ್ಟ್ ಬರೆದು ನಿಮಗೆ ಕೊಡುತ್ತಾರೆ. ಅದರಲ್ಲಿ ನೀವು ಯಾವುದೇ ಸಂಖ್ಯೆ, ಹೆಸರಿನ ಸ್ಪೆಲ್ಲಿಂಗ್ ಎಲ್ಲವೂ ಸರಿ ಇದೆಯಾ ಎಂದು ಚೆಕ್ ಮಾಡಿ ಒಕೆ ಮಾಡಿದರೆ ಪ್ರಾಪರ್ಟಿ ಕಾರ್ಡ್ ತಯಾರಾಗುತ್ತದೆ. ಇದು ನೋಡುವಾಗ ನಿಮಗೆ ಸುಲಭ ಎನಿಸಬಹುದು. ಆದರೆ ಮಾಡಿಸಿಕೊಡುವಷ್ಟರಲ್ಲಿ ನಿಮ್ಮನ್ನು ಹೈರಾಣು ಮಾಡಿಬಿಡುತ್ತಾರೆ. ಅದಕ್ಕಾಗಿ ಅನೇಕರು ಸರ್ವೆಯರ್ ಗಳನ್ನು, ತಹಶೀಲ್ದಾರರನ್ನು ಸೆಟ್ ಮಾಡಿ ಸುಲಭದಲ್ಲಿ ಪ್ರಾಪರ್ಟಿ ಕಾರ್ಡ್ ಮಾಡಿಸಿಬಿಡುತ್ತಾರೆ. ಆದರೆ ಮಧ್ಯಮ ವರ್ಗದವರಿಗೆ ಲಂಚ ಕೊಟ್ಟು ಮಾಡಿಸುವುದು ಅಥವಾ ಬ್ರೋಕರ್ ಗಳನ್ನು ಹಿಡಿದು ಮಾಡುವುದೆಂದರೆ ಪುನ: ಖರ್ಚೆ ಸರಿ. ಈಗ ಅದಕ್ಕೆಲ್ಲಾ ಅಂಕುಶ ಬಿದ್ದಿದೆ. ಮಗಳ ಮದುವೆ, ಮಗನ ಉನ್ನತ ಶಿಕ್ಷಣಕ್ಕೆ, ತಂದೆ, ತಾಯಿಯರ ಆರೋಗ್ಯದ ಚಿಕಿತ್ಸೆಗೆ ಅಗತ್ಯವಾಗಿ ಜಾಗ ಮಾರಬೇಕಾಗಿದ್ದವರು ಈ ವಿನಾಯಿತಿಯಿಂದ ಖಂಡಿತ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸರಿಯಾಗಿ ನೋಡಿದರೆ ಈ ವಿನಾಯಿತಿ ಮೊದಲು ಮಂಗಳೂರಿಗೆ ಸಿಗಬೇಕಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಕರ್ಮಭೂಮಿ ಶಿವಮೊಗ್ಗಕ್ಕೆ ಆ ಅವಕಾಶ ಮಾಡಿಕೊಟ್ಟಿದ್ದರು. ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಶಾಸಕರಾಗಿ ಆಯ್ಕೆಯಾದ ಬಳಿಕದಿಂದ ಆಸ್ತಿ ನೊಂದಾವಣಿಗೆ ಪ್ರಾಪರ್ಟಿ ಕಾರ್ಡ್ ಕಡ್ಡಾಯವನ್ನು ವಿನಾಯಿತಿಗೊಳಿಸಿ ಎಲ್ಲರದ್ದು ಪ್ರಾಪರ್ಟಿ ಕಾರ್ಡ್ ಆಗುವ ತನಕ ರಾಜ್ಯ ಸರಕಾರ ಮುಂದೂಡುವಂತೆ ಮಾಡಲು ಪ್ರಯತ್ನ ಮಾಡುತ್ತಲೇ ಇದ್ದರು. ಅಂತಿಮವಾಗಿ ದಕ್ಷಿಣ ಮತ್ತು ಉತ್ತರ ಶಾಸಕ ಇಬ್ಬರ ಪ್ರಯತ್ನದ ಫಲವಾಗಿ ಮಂಗಳೂರಿಗೆ ಮುಂದಿನ ಆದೇಶದ ತನಕದ ವಿನಾಯಿತಿ ಸಿಕ್ಕಿದೆ. ಹಾಗಂತ ಪ್ರಾಪರ್ಟಿ ಕಾರ್ಡ್ ರದ್ದಾಗಿಲ್ಲ. ಇನ್ನು ಮುಂದೆ ನೂಕುನುಗ್ಗಲು ಮಾಡಿ ಪ್ರಾಪರ್ಟಿ ಕಾರ್ಡ್ ಗೆ ಹೋರಾಡುವುದು ತಪ್ಪುತ್ತದೆ. ಜನ ಸಾವಾಕಾಶವಾಗಿ ಮುಂದಿನ ಆರು ತಿಂಗಳ ಒಳಗೆ ತಮ್ಮ ಅನುಕೂಲದ ಸಮಯ ನೋಡಿ ಪ್ರಾಪರ್ಟಿ ಕಾರ್ಡ್ ಮಾಡಿಸಲು ಹೋಗುವುದು ಒಳ್ಳೆಯದು. ಯಾಕೆಂದರೆ ನನ್ನ ಪ್ರಕಾರ ಇದು ಕೊನೆಯ ವಿನಾಯಿತಿ. ನಮ್ಮ ಜನ ಕೂಡ ಕೊನೆಯ ದಿನದ ತನಕ ಕಾಯುವುದು ಬಿಟ್ಟು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡುವುದು ಬೆಸ್ಟ್ !

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Hanumantha Kamath January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Hanumantha Kamath January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search