• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಎ ಮುಸ್ಲಿಂ ವಿರೋಧಿ ಅಲ್ಲ ಎಂದು ಮಸೀದಿಗಳಲ್ಲಿ ಅರ್ಥ ಮಾಡಿಸಲಿ!!

Hanumantha Kamath Posted On January 5, 2020
0


0
Shares
  • Share On Facebook
  • Tweet It

ನಾನು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವ ಕಾಂಗ್ರೆಸ್ಸಿಗರ ಬಳಿ ಕೇಳುವುದಿಷ್ಟು. ಒಂದೋ ನೀವು ನಿಮ್ಮ ಸರಕಾರದಲ್ಲಿ 10 ವರ್ಷ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಬಳಿ ಹೋಗಿ ಈ ಕಾಯ್ದೆ ಬಗ್ಗೆ ಕೇಳಿ. ಅವರು ಈ ಕಾಯ್ದೆಯನ್ನು ವಿರೋಧಿಸುವ ಒಂದು ವಿಡಿಯೋ ಕ್ಲಿಪ್ ಮಾಡಲಿ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ. ಅದನ್ನು ನೋಡೋಣ. ಅವರು ನಿಜಕ್ಕೂ ನಿಮ್ಮ ಒತ್ತಡಕ್ಕೆ ಮಣಿದು ಸಿಎಎ ಬಗ್ಗೆ ವಿರೋಧಿ ಹೇಳಿಕೆ ಕೊಟ್ಟರೆ ಅವರು ಪ್ರಧಾನಿಯಾಗಿದ್ದಾಗ ಇದನ್ನು ಜಾರಿ ತರುವ ಬಗ್ಗೆ ಮನಸ್ಸಿನಾಳದಿಂದ ಮಾತನಾಡಿದ್ದರಲ್ಲ, ಆ ವಿಡಿಯೋ ಕೂಡ ಸೇರಿಸಿ ಎರಡನ್ನು ಕೂಡ ನೋಡೋಣ. ಇನ್ನು ಚಿದಂಬರಂ ಈಗ ಮೋದಿ ಮೇಲಿನ ಕೋಪದಿಂದ ಸಿಎಎ ಬಗ್ಗೆ ಏನೇ ವಿರೋಧಿ ಹೇಳಿಕೆ ಕೊಡಲಿ. ಆದರೆ ಇದೇ ಚಿದಂಬರಂ ಇಂತಹ ಒಂದು ಕಾಯ್ದೆ ಬರಬೇಕು ಎಂದು ಸಂಸತ್ತಿನಲ್ಲಿ ಮಾತನಾಡಿದ ದಾಖಲೆ ಇದೆಯಲ್ಲ, ಅದಕ್ಕೆ ಕಾಂಗ್ರೆಸ್ಸಿಗರು ಏನು ಹೇಳ್ತಿರಿ, ಸ್ವಾಮಿ. ಇನ್ನು ಸಿಎಎ ವಿರೋಧಿಸುತ್ತಿರುವ ಇನ್ನೊಬ್ಬ ರಾಜಕಾರಣಿ ಮಮತಾ ಬ್ಯಾನರ್ಜಿ. ಇವರು ಸಿಎಎ ವಿರೋಧಿಸುತ್ತಿರುವುದು ಶುದ್ಧ ನಾಟಕ ಎಂದು ನಾನು ಈಕೆ ಮೊದಲ ಬಾರಿ ಧ್ವನಿ ಎತ್ತಿದ್ದಾಗಲೇ ಬರೆದಿದ್ದೆ. ಕಮ್ಯೂನಿಷ್ಟರು ಪಶ್ಚಿಮ ಬಂಗಾಲವನ್ನು ಆಳುವಾಗ ಇದೇ ಮಮತಾಗೆ ಸಿಎಎ ಬೇಕಿತ್ತು. ಈಗ ಇವರೇ ಅಧಿಕಾರ ನಡೆಸುವಾಗ ಸಿಎಎ ವಿರೋಧ. ಇವತ್ತಿಗೂ ಯಾರಾದರೂ ಮಮತಾಳಿಗೆ ನೀವು ಸಂಸದ ಸ್ಥಾನಕ್ಕೆ ಆವತ್ತು ರಾಜೀನಾಮೆ ಕೊಟ್ಟಿದ್ದು ಯಾಕೆ ಎಂದು ಕೇಳಿ ನೋಡಿ. ಒಟ್ಟಿನಲ್ಲಿ ಎಲ್ಲರಿಗೂ ಮೋದಿಯನ್ನೇ ವಿರೋಧಿಸಬೇಕು.
ಪಾಪ, ವಿಪಕ್ಷದವರಾದರೂ ಏನು ಮಾಡುತ್ತವೆ? ತ್ರಿವಳಿ ತಲಾಖ್ ವಿಷಯದಲ್ಲಿ ಕೇಂದ್ರ ಕಾನೂನು ರೂಪಿಸುವಾಗ ವಿರೋಧಿಗಳಿಗೆ ಏನು ಮಾತನಾಡಲು ಆಗಲಿಲ್ಲ. ಯಾಕೆಂದರೆ ಮಾತನಾಡಿದರೆ ಮುಸ್ಲಿಂ ಹೆಣ್ಣುಮಕ್ಕಳು, ನೊಂದ ಬಡ ಹೆಣ್ಣುಮಕ್ಕಳ ಮನೆಯವರು ಚಪ್ಪಲಿ ಹಿಡಿದು ವಿರೋಧಿಸಿದವರನ್ನು ಅಟ್ಟಿಸಿಕೊಂಡು ಬರುತ್ತಿದ್ದರು. ಅದರ ನಂತರ ಅಯೋಧ್ಯೆ ತೀರ್ಪು ಬಂದಾಗಲೂ ವಿರೋಧಿಸಲಾಗಲಿಲ್ಲ. ಯಾಕೆಂದರೆ ಇಡೀ ರಾಷ್ಟ್ರದಲ್ಲಿ ಅಷ್ಟು ಎಚ್ಚರಿಕೆಯನ್ನು ತೆಗೆದುಕೊಂಡಾಗಿತ್ತು. ಜಿಎಸ್ ಟಿ, ನೋಟ್ ಅಮಾನೀಕರಣದ ಬಗ್ಗೆ ಕಾಂಗ್ರೆಸ್ ಸಹಿತ ಎಡಚರರು ಕೆಮ್ಮಿದರೂ ಅದರಿಂದ ಮೋದಿ ಕೂದಲು ಕೊಂಕಲು ಆಗಲಿಲ್ಲ. ಇನ್ನು ಮೋದಿಯನ್ನು ಹೀಗೆ ಬಿಟ್ಟರೆ ಇವರು ಸಮಾನ ನೀತಿ ಸಂಹಿತೆ ತರುತ್ತಾರೆ ಎಂದು ಹೆದರಿ ಇಟಲಿ ಮೂಲದ ಚಿಂತನೆ ಕಾಂಗ್ರೆಸ್ಸ್ ಕೇಂದ್ರ ಕಚೇರಿಯಲ್ಲಿ ಹರಿದಾಡುತ್ತಿದೆ.
ಇಲ್ಲಿ ಪಂಜಾಬ್ ನಲ್ಲಿ ಸಿಎಂ ಅಮರೀಂದ್ರ ಸಿಂಗ್ ಸಿಎಎ ವಿರೋಧಿ ಹೇಳಿಕೆ ಕೊಡುತ್ತಿದ್ದಾರೆ. ಅದೇ ಪಾಕಿಸ್ತಾನದಲ್ಲಿ ಇತ್ತೀಚೆಗೆ ಒಂದು ಗುರುದ್ವಾರಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಕಲ್ಲು ಬಿಸಾಡಿ ಓಡೆದಿರುವ ದೃಶ್ಯವನ್ನು ಟಿವಿ ವಾಹಿನಿಯವರು ತೋರಿಸುತ್ತಿದ್ದರು. ಈಗ ಅಂತಹ ಎಷ್ಟೋ ಜನ ಸಿಖ್ಖರು ಪಾಕಿಸ್ತಾನದಲ್ಲಿ ಇದ್ದರೆ ಸತ್ತು ಹೋಗ್ತಿವಿ ಎಂದು ಹೆದರಿ ಭಾರತಕ್ಕೆ ಓಡಿ ಬಂದರೆ ಅವರಿಗೆ ಸುಲಭವಾಗಿ ಭಾರತದ ಪೌರತ್ವ ಕೊಡಬೇಕಾ? ಬೇಡ್ವಾ? ಹಾಗಾದರೆ ಅಮರಿಂದ್ರ ಸಿಂಗ್ ತಮ್ಮ ಸಮುದಾಯದವರು ಪಾಕ್ ನಲ್ಲಿ ಹುಚ್ಚು ನಾಯಿಯಂತೆ ಕಲ್ಲು ಹೊಡೆಸಿಕೊಂಡು ಸಾಯಲಿ, ನನಗೆ ಪಕ್ಷ ಮತ್ತು ರಾಜಕೀಯ ಮುಖ್ಯ ಎಂದು ಹೇಳುತ್ತಾರಾ? ಒಂದು ವೇಳೆ ಹೇಳುತ್ತಾರೆ ಎಂದರೆ ಅವರಿಗಿಂತ ಸಮುದಾಯ ವಿರೋಧಿ ಬೇರೆಯವರು ಇದ್ದಾರಾ? ಅಮರಿಂದ್ರ ಸಿಂಗ್ ಅವರೇ, ಅಧಿಕಾರ ಇವತ್ತು ಇರಬಹುದು, ಮುಂದಿನ ಚುನಾವಣೆಯಲ್ಲಿ ಹೋಗಬಹುದು. ಆದರೆ ನಿಮ್ಮ ಸಮುದಾಯದವರು ಪಾಕ್ ನಲ್ಲಿ ಜೀವ ಕೈಯಲ್ಲಿ ಹಿಡಿದು ಬದುಕುತ್ತಿರುವುದನ್ನು ತಾವು ನೋಡಿಯೂ ಅವರು ಇಲ್ಲಿ ಬರುವುದು ಬೇಡಾ ಎಂದು ಬಯಸುವಿರಾದರೆ ನಿಮಗೆ ಇದರ ಶಾಪ ಇವತ್ತಲ್ಲ, ನಾಳೆ ತಟ್ಟಿಯೇ ತಟ್ಟುತ್ತದೆ.
ಒಂದು ಕಾಲಕ್ಕೆ ಇಂಡಿಯಾ ಎಂದರೆ ಅದು ಪಾಕ್, ಬಾಂಗ್ಲಾ ಮತ್ತು ಅಪಘಾನಿಸ್ತಾನವೂ ಸೇರಿ ಅಖಂಡ ಭಾರತ ದೇಶವಾಗಿತ್ತು. ನಂತರ ಆ ದೇಶಗಳು ತಾವು ಇಸ್ಲಾಂ ರಾಷ್ಟ್ರಗಳು ಎಂದು ಘೋಷಿಸಿಕೊಂಡವು. ಅಷ್ಟೇ ಅಲ್ಲ ಅಲ್ಲಿ ವಾಸಿಸುವ ಮುಸ್ಲಿಂಯೇತರರಿಗೆ ಹಿಂಸೆ ಕೊಡಲು ಶುರು ಮಾಡಿದವು. ಹಾಗೇ ಹಿಂಸೆ ಅನುಭವಿಸಿ ಅವರು ಅಲ್ಲಿರುವುದಕ್ಕಿಂತ ಇಲ್ಲಿ ಬಂದರೆ ಅವರಿಗೆ ಒಂದು ಗೌರವ ಸ್ವಾಗತ ಕೊಡಲಾರದಷ್ಟು ನಾವು ದುಷ್ಟರಾ? ಯಾಕೋ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಮುಸ್ಲಿಂ ವಿರೋಧಿ ಎಂದು ಸಾಬೀತು ಪಡಿಸಲು ಹೆಣಗುತ್ತಿದೆ. ಪಾಪ, ಮುಸ್ಲಿಮರು ನಂಬುವಂತೆ ಕಾಣುತ್ತಿದೆ, ಕಾರಣ ಈ ಸೋಮಶೇಖರ್ ರೆಡ್ಡಿಯಂತಹ ಶಾಸಕರು ಸಿಎಎ ಪರ ಮಾತನಾಡುವ ಗಡಿಬಿಡಿಯಲ್ಲಿ ಸಾಧ್ವಿ ಪ್ರಜ್ಙಾ ಸಿಂಗ್ ಮೈಮೇಲೆ ಬಂದಂತೆ ಆಡುತ್ತಾರಲ್ಲ, ಅದೇ ಪ್ಲಾಬಂ!
0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Hanumantha Kamath June 16, 2026
Najlepsze bonusy i sloty w polskim kasynie online
Hanumantha Kamath May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search