• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿವಿಯಲ್ಲಿ ಖಾನ್ ಕೊನೆಯ ಹೈಡ್ರಾಮಾ!!

Hanumantha Kamath Posted On April 27, 2020
0


0
Shares
  • Share On Facebook
  • Tweet It

ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿದ್ದ ಪ್ರೋ.ಎ.ಎಂ.ಖಾನ್ ತಾವು ಅಧಿಕಾರದಲ್ಲಿದಷ್ಟು ದಿನ ಇಡೀ ವಿಶ್ವವಿದ್ಯಾನಿಲಯಕ್ಕೆ ತಲೆನೋವಾಗಿದ್ದು ನಮಗೆ ಗೊತ್ತೆ ಇದೆ. ಭ್ರಷ್ಟಾಚಾರದ ಆರೋಪ ಅವರನ್ನು ಸುತ್ತುವರೆದು ಅದು ವಿಧಾನಸೌಧದ ಮೆಟ್ಟಿಲು ಹತ್ತಿರುವುದು ವಿದ್ಯಾರ್ಥಿ ಸಂಘಟನೆಗಳ ಯಶಸ್ಸು.
ಸಿಂಡಿಕೇಟ್ ಸದಸ್ಯರಿಂದಲೇ ಇವರ ವಿರುದ್ಧ ಸಿಂಡಿಕೇಟ್ ನಿರ್ಣಯವನ್ನು ತಿರುಚಿದ ಆರೋಪ ಕೂಡ ಇರುವುದು ಎಲ್ಲರಿಗೂ ಗೊತ್ತೆ ಇದೆ. ತಮ್ಮ ಅಧಿಕಾರ ಚಲಾಯಿಸಿ ಮಡದಿ ವಾಜಿದ ಬಾನು ಅವರ ಹುದ್ದೆ ಸಹಿತ ವರ್ಗಾವಣೆ ನಡೆಸಿದ್ದು, ವಿವಿ ಸಿಂಡಿಕೇಟ್ ಸಭೆಯಲ್ಲಿ ತನಿಖೆಗೆ ಆದೇಶವಾಗಿತ್ತು. ಆದರೆ ಆ ನಿರ್ಣಯವನ್ನು ಖಾನ್ ತಿರುಚಿದ್ದರು ಎನ್ನುವ ಆರೋಪ ಇದೆ. ರಾಜ್ಯದಲ್ಲಿ ಸರಕಾರ ಬದಲಾಗುತ್ತಿದ್ದಂತೆ ಖಾನ್ ಅದೃಷ್ಟವೂ ಕೊನೆಗೊಂಡಿತ್ತು. ಕೊನೆಗೂ ಅವರನ್ನು ಉಳಿಸಲು ಕಾಂಗ್ರೆಸ್ಸಿನ ಶಾಸಕರುಗಳಿಗೆ ಸಾಧ್ಯವಾಗಿಲ್ಲ. ಖಾನ್ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಹುದ್ದೆಯಿಂದ ಎತ್ತಂಗಡಿಯಾಗುವ ಮುಹೂರ್ತ ಕೊನೆಗೂ ಬಂದಿದೆ. ಆದರೆ ಬಂಗಾರದ ಗಣಿಯಿಂದ ಎದ್ದು ಹೋಗಲು ಖಾನ್ ಅವರಿಗೆ ಮನಸ್ಸಿಲ್ಲ. ಅದಕ್ಕಾಗಿ ಅವರು ಆಡಿದ ಕೊನೆಯಾಟ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಸ್ಥಾನಕ್ಕೆ ತಕ್ಕುದ್ದಲ್ಲ.
ಖಾನ್ ಅವರ ಸ್ಥಾನಕ್ಕೆ ಕೆಎಎಸ್ ಅಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಕಮೀಷನರ್ ಆಗಿದ್ದ ರಾಜು ಮೊಗವೀರ ಅವರು ನೇಮಕವಾಗಿದ್ದಾರೆ. ಅವರು ಇವತ್ತು ಬೆಳಿಗ್ಗೆ 11 ಗಂಟೆಗೆ ಅಧಿಕಾರ ವಹಿಸಿಕೊಳ್ಳಲು ಕಚೇರಿಗೆ ಹೋಗಿದ್ದಾಗ ಖಾನ್ ಅಲ್ಲಿಂದ ಓಡಿಹೋಗಿದ್ದಾರೆ. ಸೀದಾ ಆಸ್ಪತ್ರೆಗೆ ಹೋಗಿ ಹುಶಾರಿಲ್ಲದ ನಾಟಕ ಆಡಿದ್ದಾರೆ. ಆದಷ್ಟು ದಿನದೂಡಿ ತಮ್ಮ ಸ್ಥಾನ ಉಳಿಸಿಕೊಳ್ಳುವ ಕೊನೆಯ ಪ್ರಯತ್ನ ಮಾಡಿದ್ದಾರೆ. ನಂತರ ಖಾನ್ ಅವರ ಈ ಹೈಡ್ರಾಮದಿಂದ ಬೇಸತ್ತ ಕುಲಪತಿ ಎಡಪಡಿತ್ತಾಯ ಅವರು ತಮ್ಮ ಪರಮಾಧಿಕಾರವನ್ನು ಬಳಸಿ ಸುಗ್ರೀವಾಜ್ಞೆಯ ಮೂಲಕ ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಈ ಮೂಲಕ ಖಾನ್ ಅವರು ಅಧಿಕಾರದಿಂದ ನಿರ್ಗಮಿಸುವಾಗಲೂ ತಮ್ಮ ವರ್ಚಸ್ಸಿಗೆ ಕಪ್ಪುಚುಕ್ಕೆ ಉಳಿಸಿ ಹೋಗಬೇಕಾಗಿದೆ. ಈ ಪರಿಸ್ಥಿತಿ ಮಂಗಳೂರು ವಿವಿಯಲ್ಲಿ ಯಾರಿಗೂ ಬರಬಾರದು. ಅಸಹ್ಯದ ಪರಾಕಾಷ್ಟೆ ಇದು!
0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Hanumantha Kamath July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Hanumantha Kamath July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search