• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ವಿದೇಶದಿಂದ ಬರುವವರು ಇಲ್ಲಿ ಪೂರ್ಣಕುಂಭ ಸ್ವಾಗತ ಅಪೇಕ್ಷಿಸಬೇಡಿ!!

Tulunadu News Posted On May 17, 2020
0


0
Shares
  • Share On Facebook
  • Tweet It

ನೀವು ದುಬೈಯಿಂದ ಭಾರತಕ್ಕೆ ಬೇಕಾದರೆ ಬನ್ನಿ, ಅಮೇರಿಕಾದಿಂದ ಬೇಕಾದರೆ ಬನ್ನಿ ಅಥವಾ ವಿಶ್ವದ ಯಾವುದೇ ರಾಷ್ಟ್ರದಿಂದ ಬೇಕಾದರೆ ಬನ್ನಿ. ನೀವು ಇಲ್ಲಿ ಬರುತ್ತಿರುವುದು ನಿಮ್ಮ ತಾಯ್ನಾಡಿಗೆ. ನೀವು ಇಲ್ಲಿ ಅತಿಥಿಗಳಲ್ಲ. ನೀವು ನಮ್ಮವರೇ. ನಿಮ್ಮದೇ ಮನೆಗೆ ಬರುತ್ತಿದ್ದೀರಿ. ಹಾಗಾದರೆ ಅದರಲ್ಲಿ ವಿವಾದವನ್ನು ಎಬ್ಬಿಸುತ್ತಿರುವುದು ಯಾಕೆ? ಅಷ್ಟಕ್ಕೂ ಅನೇಕರದ್ದು ಮುಖ್ಯ ಸಮಸ್ಯೆ ಏನೆಂಬುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು.  ಒಮ್ಮೆ ಮಂಗಳೂರಿಗೆ ಹೋಗಿ ಬಿದ್ದರೆ ಸಾಕಪ್ಪ ಎಂದು ಕಳೆದ ಎರಡು ತಿಂಗಳಿನಿಂದ ನೂರಾರು ಸಲ ವಿದೇಶಿ ಮಣ್ಣಿನಲ್ಲಿ ಕುಳಿತು ಹೇಳಿಕೊಂಡವರಿಗೆ ಸರಕಾರ ಎಲ್ಲಾ ವ್ಯವಸ್ಥೆ ಮಾಡಿ ಏರ್ ಲಿಫ್ಟ್ ಮಾಡಿ ತಂದದ್ದೇ ದೊಡ್ಡ ಉಪಕಾರ. ಹಾಗಿರುವಾಗ ಇಲ್ಲಿ ಬಂದ ಕೂಡಲೇ ಪ್ರತಿಯೊಬ್ಬರು ವಿಮಾನ ನಿಲ್ದಾಣದ ಹೊರಗೆ ಈ ನೆಲಕ್ಕೆ ಅಡ್ಡಬಿದ್ದು ನಮಸ್ಕರಿಸಬೇಕಿತ್ತು.
ಹಾಗಂತ ನಾನು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಾಡಿದ್ದು ಎಲ್ಲವೂ ಸರಿ ಎಂದು ಹೇಳುತ್ತಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಸ್ವಲ್ಪ ಜಾಸ್ತಿಯೇ ಮಾಡಬಹುದಿತ್ತು. ಆದರೆ ಅದನ್ನು ಬಿಟ್ಟು ಅಂತಹ ತೊಂದರೆ ಬೇರೆ ಏನೂ ಆಗಿದೆ. ಮೊದಲನೇಯದಾಗಿ ನಿಮಗೆ ವಿಮಾನ ನಿಲ್ದಾಣದಿಂದ ಹೊರಗೆ ಬರಲು ತುಂಬಾ ಸಮಯದ ವಿಳಂಬ ಆಯಿತು ಎಂದು ಹೇಳುತ್ತಿದ್ದೀರಿ. ಈಗ ನೀವು ಬರುತ್ತಿರುವುದು ಸಾಮಾನ್ಯ ದಿನಗಳಲ್ಲಿ ಅಲ್ಲ. ಇಡೀ ದೇಶವೇ ಹತ್ತು ಗಂಟೆಗೆ ಬಾಗಿಲು ಹಾಕಿ ಮಲಗಿಕೊಂಡಿದೆ. ಹಾಗಿರುವಾಗ ನಿಮಗಾಗಿ ಬಂದು ಥರ್ಮಲ್ ಚೆಕ್ ಅದು ಇದು ಮಾಡುತ್ತಾರಲ್ಲ, ಅವರ ಶ್ರಮವನ್ನು ನಾವು ಮೊದಲು ಮೆಚ್ಚಬೇಕು. ಆ ಆರೋಗ್ಯ ಯೋಧರಿಗೆ ಮೊದಲ ಸಲಾಂ. ಇನ್ನು ನಿಮ್ಮ ಬ್ಯಾಗ್ ಎತ್ತಿ ಹಾಕಲು ಯಾರು ಮುಂದೆ ಬಂದಿಲ್ಲ ಎನ್ನುವ ದೂರು. ಇಡೀ ವಿಮಾನದಲ್ಲಿದ್ದ 177 ರಲ್ಲಿ 37 ಜನ ಗರ್ಭಿಣಿಯರು. 37 ಗರ್ಭಿಣಿಯರು ಮಾತ್ರವಲ್ಲ, ಕೆಲವು ವೃದ್ಧರು ಕೂಡ ಅದರಲ್ಲಿ ಇದ್ದರು. ಜಿಲ್ಲಾಡಳಿತದಿಂದ 40 ಜನ ಅಧಿಕಾರಿಗಳು ಅಲ್ಲಿ ಇದ್ದರು. ಎಲ್ಲ ವ್ಯವಸ್ಥೆಗಳನ್ನು ಮಾಡುತ್ತಿದ್ದರು. ಆದರೆ ಅವರು ನಿಮ್ಮ ಕೂಲಿಯಾಳುಗಳಾಗಿ ಅಲ್ಲಿಗೆ ಬಂದಿರಲಿಲ್ಲ. ದುಬೈಯಿಂದ ಭಾರತಕ್ಕೆ ಬಂದ ಕೂಡಲೇ ಕೆಲವರಿಗೆ ಇಲ್ಲಿನವರ ಬಗ್ಗೆ ಒಂದಿಷ್ಟು ಕೀಳರಿಮೆ ಬಂದಿರುತ್ತದೆ. ಅದು ನೀವು ವಿದೇಶದಿಂದ ರಜೆಯ ಮೇಲೆ ಭಾರತಕ್ಕೆ ಬರುವ ಹಲವರಲ್ಲಿ ಒಂದಿಷ್ಟು ಗಮನಿಸಿರಬಹುದು. ಇಲ್ಲಿಯೇ ಹುಟ್ಟಿರುತ್ತಾರೆ. ಇಲ್ಲಿಯೇ ಸರಕಾರಿ ಶಾಲೆಗಳಲ್ಲಿ ಕಲಿತಿರುತ್ತಾರೆ. ಸೈಕಲಿನಲ್ಲಿ ಶಾಲೆಗೆ ಹೋಗಿ ಲಾಲಿಪಾಪ್ ತಿಂದು ರಾತ್ರಿ ಗಂಜಿ ಉಂಡು ಮಲಗಿರುತ್ತಾರೆ. ಕೊನೆಗೆ ಇಲ್ಲಿ ಹೋಟೇಲಿನಲ್ಲಿ ಕೆಲಸ ಮಾಡುವುದಕ್ಕಿಂತ ಅದೇ ವಿದೇಶದಲ್ಲಿ ರೂಂಬಾಯ್ ಆಗಿ ಕೆಲಸ ಮಾಡಿದರೆ ಕೆಲವೇ ವರ್ಷಗಳಲ್ಲಿ ತುಂಬಾ ದುಡಿಯಬಹುದು ಎಂದು ಅಲ್ಲಿಗೆ ಹೋಗಿರುತ್ತಾರೆ. ರಜೆಗೆ ಬಂದರೆ ಅವರ ಹಾವಭಾವವೇ ಬದಲಾಗಿರುತ್ತದೆ. ನಾನು ಎಲ್ಲರೂ ಎಂದು ಹೇಳುವುದಿಲ್ಲ.
ಇನ್ನೊಂದು ವಿಷಯ ನಮ್ಮ ಹಿತೈಷಿ ಓದುಗ ಮಿತ್ರರಿಗೆ ಗೊತ್ತಿರಬಹುದು. ದುಬೈಯಿಂದ ಹೊರಡುವ ಮೊದಲು ಈ ಎಲ್ಲಾ 177 ಜನರು ಭಾರತ ಸರಕಾರದ ಎಲ್ಲಾ ಷರತ್ತುಗಳಿಗೆ ಬದ್ಧರಿದ್ದೆವೆ ಎಂದು ಲಿಖಿತವಾಗಿ ಸಹಿ ಮಾಡಿಯೇ ವಿಮಾನ ಹತ್ತಿದ್ದರು. ಅದರ ಮೊದಲನೇ ಷರತ್ತು “ನನ್ನ ಸ್ವಂತ ರಿಸ್ಕಿನಲ್ಲಿಯೇ ಪ್ರಯಾಣಿಸುತ್ತಿದ್ದೇನೆ”. ಇನ್ನು ಸ್ವಂತ ಖರ್ಚಿನಲ್ಲಿ ಕ್ವಾರಂಟೈನ್, ಸ್ವಂತ ಖರ್ಚಿನಲ್ಲಿ ಊಟ, ತಿಂಡಿ ಮಾಡುತ್ತೇನೆ ಎಂದು ಬರೆದು ಸಹಿ ಹಾಕಿ ಇಲ್ಲಿಗೆ ಬಂದ ಕೂಡಲೇ ನಮ್ಮವರೇ ನಮಗೆ ಉಲ್ಟಾ. ಹೊಟೇಲ್ ಊಟದ ವ್ಯವಸ್ಥೆ ಮಾಡಿದರೂ ತಮಗೆ ಇಂತಹುದೇ ಊಟ ಬೇಕೆಂದು ಹಟ, ಹೊಟೇಲಿಗೆ ಹಣ ಜಾಸ್ತಿಯಾಯಿತು ಎಂದು ಹಟ, ಕಮೀಷನ್ ಏಜೆಂಟುಗಳು ಎಂದು ಎಲ್ಲರ ಮುಂದೆ ಅಧಿಕಾರಿಗಳಿಗೆ ಲೇವಡಿ ಎಲ್ಲವೂ ನಡೆದಿದೆ. ಎಲ್ಲರೂ ಮಾಡಿದ್ದಾರೆ ಎಂದಲ್ಲ. ಆದರೆ ಕೆಲವರಿಂದ ಇಡೀ ಅಧಿಕಾರಿ ಸಮೂಹಕ್ಕೆ ಬೇಸರವಾಗಿದೆ. ಇನ್ನು ಒಂದು ವೇಳೆ ಗರ್ಭಿಣಿಯರಿಗೆ ಬ್ಯಾಗ್ ಎತ್ತಲು ಆಗಿಲ್ಲ, ಪತಿಗೆ ದೈಹಿಕವಾಗಿ ಬೇರೆ ತೊಂದರೆ ಇತ್ತು ಎಂದಾದರೆ ಅವರು ತಮ್ಮ ಜೊತೆ ಬಂದವರಿಗೆ ವಿನಂತಿ ಮಾಡಬಹುದಿತ್ತು. ಎಲ್ಲವೂ ಇಲ್ಲಿಯವರೇ. ಸ್ವಲ್ಪ ಸಹಾಯ ಮಾಡಬಹುದೇ ಎಂದರೆ ಆಗಲ್ಲ, ಹೋಗ್ರಿ ಎಂದು ಯಾರೂ ಹೇಳಲ್ಲ. ಆದರೆ ವಿನಂತಿ ಮಾಡುವ ರೀತಿಯಲ್ಲಿ ಇರುತ್ತೆ. ಇನ್ನು ಇಂತಹ ಸಂದರ್ಭದಲ್ಲಿ ಕೂಲಿಗಳು ಸಿಗುವುದು ಕಷ್ಟ. ಅವರಿಗೂ ಜೀವದ ಹೆದರಿಕೆ ಇಲ್ಲವೇ. ಬಂದವರಲ್ಲಿ 16 ಮಂದಿಗೆ ಕೋವಿಡ್ 19 ಸೊಂಕು ಇದೆ ಎಂದು ಪತ್ತೆಯಾಗಿರುವಾಗ ಯಾರು ತಾನೆ ಧೈರ್ಯ ಮಾಡಿ ಆ ರಾತ್ರಿಯಲ್ಲಿ ಕೆಲಸಕ್ಕೆ ಬರುತ್ತಾರೆ. ಇಷ್ಟೆಲ್ಲದರ ನಡುವೆಯೂ ಸೇವೆ ಸಲ್ಲಿಸಿದ ಎಲ್ಲಾ ಅಧಿಕಾರಿಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ, ವಿಮಾನ ನಿಲ್ದಾಣದ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ಪ್ರಯಾಣಿಕರನ್ನು ಹೋಟೆಲಿಗೆ ತಲುಪಿಸಿದ ಬಸ್ಸುಗಳ ಚಾಲಕರಿಗೆ ದೊಡ್ಡ ಥ್ಯಾಂಕ್ಸ್!
0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search