• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1991 ರಲ್ಲಿ ಅಯೋಧ್ಯೆಗೆ ಬಂದಿದ್ದ ಮೋದಿ ಪತ್ರಕರ್ತರಿಗೆ ಹೇಳಿದ್ದ ಮಾತು ಉಳಿಸಿಕೊಂಡ್ರಾ?

Hanumantha Kamath Posted On August 5, 2020
0


0
Shares
  • Share On Facebook
  • Tweet It

ಅದು 1991 ರ ಸಮಯವಿರಬಹುದು. ಆವತ್ತಿನ ಒಂದು ಅಪರೂಪವಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ನಾಯಕರುಗಳಲ್ಲಿ ಪ್ರಮುಖರಾಗಿದ್ದ ಮುರಳಿ ಮನೋಹರ್ ಜೋಷಿಯವರೊಂದಿಗೆ ಇರುವಂತಹ ಒಂದು ಫೋಟೋ. ಅಯೋಧ್ಯೆಯ ರಾಮಜನ್ಮ ಭೂಮಿಯ ವಿವಾದ ತಾರಕಕ್ಕೆ ಏರುತ್ತಿದ್ದಾಗ ತೆಗೆದಿರುವಂತಹ ಫೋಟೋ ಎಂದು ಹೇಳಲಾಗಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯ ಸಮೀಪದಲ್ಲಿಯೇ ಸ್ಟುಡಿಯೋ ಇಟ್ಟುಕೊಂಡಿದ್ದ ಮಹೇಂದ್ರ ತ್ರಿಪಾಠಿ ಎನ್ನುವವರು ಈ ಫೋಟೋ ತೆಗೆದಿದ್ದಾರೆ ಎಂದು ಹೇಳಲಾಗುತ್ತದೆ.

ಈ ಬಗ್ಗೆ ತಮ್ಮ ಹಳೆ ಅನುಭವಗಳನ್ನು ಹಂಚಿಕೊಂಡಿರುವ ಮಹೇಂದ್ರ ತ್ರಿಪಾಠಿಯವರು ಈಗಿನ ಪ್ರಧಾನಿ ನರೇಂದ್ರ ಮೋದಿಜಿಯವರು ಆಗ 1991, ಎಪ್ರಿಲ್ ತಿಂಗಳಲ್ಲಿ ರಾಮಜನ್ಮಭೂಮಿಗೆ ಭೇಟಿ ನೀಡಿದ್ದರು. ಆಗ ಅವರೊಂದಿಗೆ ಮುರಳಿ ಮನೋಹರ ಜೋಷಿಯವರು ಕೂಡ ಇದ್ದರು. ಆ ದಿನ ನಾನೊಬ್ಬನೇ ಛಾಯಾಗ್ರಾಹಕ ಅಲ್ಲಿ ಹಾಜರಿದ್ದೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ನನಗೆ ಅಧಿಕೃತ ಆಹ್ವಾನವಿತ್ತು. ನನಗೆ ಇಬ್ಬರು ಘಟಾನುಘಟಿ ನಾಯಕರು ಒಟ್ಟಿಗೆ ಇರುವ ಫೋಟೋ ಕ್ಲಿಕ್ಕಿಸುವ ಅವಕಾಶ ದೊರಕಿತು ಎಂದು ಹೇಳಿಕೊಂಡಿದ್ದಾರೆ.

ನಂತರ ಒಂದಿಷ್ಟು ಪತ್ರಕರ್ತರು ಆಗಮಿಸಿದ ಬಳಿಕ ಮುರಳಿ ಮನೋಹರ ಜೋಷಿಯವರು ನರೇಂದ್ರ ಮೋದಿಯವರನ್ನು ಪತ್ರಕರ್ತರಿಗೆ ಪರಿಚಯಿಸುತ್ತಾ ಗುಜರಾತಿನಲ್ಲಿ ನಮ್ಮ ಪಕ್ಷದ ಮುಖಂಡರು ಎಂದು ಪರಿಚಯಿಸಿದ್ದರು. ಆಗ ಪತ್ರಕರ್ತರು ಮಾತನಾಡುತ್ತಾ ನಿಮ್ಮ ಮುಂದಿನ ಭೇಟಿ ಅಯೋಧ್ಯೆಗೆ ಯಾವಾಗ ಎಂದು ಮೋದಿಯವರನ್ನು ಕೇಳಿದ್ದರು. ಆಗ ನರೇಂದ್ರ ಮೋದಿಜಿಯವರು ಖಡಕ್ಕಾಗಿ ಏನು ಹೇಳಿದ್ದರೆಂದರೆ _” ಇದೇ ಸ್ಥಳದಲ್ಲಿ ರಾಮ ದೇವರಿಗೆ ಭವ್ಯ ಮಂದಿರ ನಿರ್ಮಾಣವಾಗುವ ದಿನ ನಾನು ಮತ್ತೆ ಅಯೋಧ್ಯೆಗೆ ಬರುತ್ತೇನೆ”

ಮೋದಿಜಿಯವರು ಅಂದು ಹೇಳಿದ ಮಾತು ಇಂದು ನಿಜವಾಗಿದೆ. ಆವತ್ತು ಅಯೋಧ್ಯೆಯಿಂದ ಗುಜರಾತಿಗೆ ಮರಳಿದ ಮೋದಿಜಿಯವರು ಪ್ರಧಾನಿಯಾಗಿ ಮೊದಲ ಬಾರಿ ಅಯೋಧ್ಯೆಗೆ ಆಗಮಿಸಿ ಭವ್ಯ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Hanumantha Kamath May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Hanumantha Kamath May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search