• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡ್ರಗ್ಸ್ ಅಮಲು ಇಳಿದಾಗ ಹೋದ ಮಾನ ಬಂದಿತೇ?

Hanumantha Kamath Posted On September 14, 2020


  • Share On Facebook
  • Tweet It

ಉಪ್ಪು ತಿಂದವರು ನೀರು ಕುಡಿಯಬೇಕು. ಡ್ರಗ್ಸ್ ಸೇವಿಸಿದವರು ಜೈಲಿಗೆ ಹೋಗಲೇಬೇಕು. ಸಿಸಿಬಿ ಪೊಲೀಸರು ಬಂಧಿಸಿರುವ ಎಂಟು ಜನರಲ್ಲಿ ರಾಗಿಣಿ, ರಾಹುಲ್, ಪ್ರಶಾಂತ್, ಲೂಮ್, ನಿಯಾಜ್ ನೇರಾ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದಾರೆ. ಸಂಜನಾ, ರವಿಶಂಕರ್, ವಿರೇನ್ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಸ್ಟಡಿಯಲ್ಲಿ ಇದ್ದಾರೆ. ನಮ್ಮ ಬಳಿ ಘಟಾನುಘಟಿ ರಾಜಕಾರಣಿಗಳ ಹೆಸರುಗಳು ಇವೆ ಎಂದು ನಟಿಮಣಿಯರು ಹೇಳಿರುವುದರಿಂದ ಅವರು ಯಾರು ಎಂದು ತಿಳಿಯುವ ಕುತೂಹಲ ಸದ್ಯ ಎಲ್ಲರಿಗೂ ಇರುತ್ತದೆ. ಅನೇಕರಿಗೆ ರಾಜಕಾರಣಿಗಳ ಬಗ್ಗೆ ದೂರದಿಂದ ಒಂದು ಕೋಪ ಇದ್ದೇ ಇರುತ್ತದೆ. ಈಗ ಇಂತಹ ಪ್ರಕರಣದಲ್ಲಿ ಅದು ಹೊರಗೆ ಬಂದರೆ “ಒಳ್ಳೆಯದಾಯಿತು, ಹಾಗೆ ಆಗಬೇಕು” ಎಂದು ಅಂದುಕೊಳ್ಳುವವರೇ ಹೆಚ್ಚು. ಅನೇಕ ಸಂದರ್ಭಗಳಲ್ಲಿ ಈ ರಾಜಕಾರಣಿಗಳು ಭಾಗವಹಿಸುವ ರಂಗೀನಾಟದ ಕಾರ್ಯಕ್ರಮಗಳಿಗೆ ಪೊಲೀಸರೇ ವಿನಂತಿಯ ಮೇರೆಗೆ ಭದ್ರತೆಯನ್ನು ಒದಗಿಸಿರುತ್ತಾರೆ. ಅಲ್ಲಿ ಕಾರ್ಯಕ್ರಮದಲ್ಲಿ ಯಾರು ಬಂದಿದ್ದಾರೆ, ಯಾರು ಏನು ಸೇವಿಸಿದ್ದಾರೆ, ಯಾರು ಪೂರೈಕೆ ಮಾಡಿರುವುದು ಎಂದು ಪೊಲೀಸರಿಗೆ ಗೊತ್ತಾಗದ ವಿಷಯವೇನು ಇದಾಗಿರಲಿಲ್ಲ. ಮಂಗಳೂರಿನಲ್ಲಿ ತೆಗೆದುಕೊಂಡರೆ ಬಂದರು ಪೊಲೀಸ್ ಠಾಣೆಯ ಹಿಂದಿನ ರಸ್ತೆಯಲ್ಲಿಯೇ ಡ್ರಗ್ಸ್ ಸೇವಿಸುವವರ ಪಟಾಲಾಂ ಹುಡುಕಿದರೆ ಸಿಗಲೂಬಹುದು. ಅವರಲ್ಲಿ ಒಬ್ಬನನ್ನು ಹಿಡಿದು ನಾಲ್ಕು ಬಾರಿಸಿದರೆ ಅವನು ಎಲ್ಲಿ ಖರೀದಿ ಮಾಡಿದ್ದು ಎಂದು ಹೇಳಿಯೇ ಹೇಳುತ್ತಾನೆ. ಇನ್ನು ಮಾರುವವನ ಬಳಿ ಹೋದರೆ ಅವನು ತಾನು ಎಲ್ಲಿ ಚಿಲ್ಲರೆ ಪೊಟ್ಟಣ ಖರೀದಿ ಮಾಡುವುದು ಎಂದು ಹೇಳಲು ತುಂಬಾ ಸಮಯ ತೆಗೆದುಕೊಳ್ಳುವುದಿಲ್ಲ. ಇನ್ನು ಅವನಿಂದ ರಖಂ, ರಖಂನಿಂದ ಪೂರೈಕೆ ಎಲ್ಲಿಂದ ಆಗುತ್ತದೆ ಎಂದು ಗೊತ್ತಾದರೆ ಇದರ ಜಾಲ ಪತ್ತೆಹಚ್ಚುವುದು ಮತ್ತು ಅಲ್ಲಿಗೆ ಮುಗಿಸುವುದು ಪೊಲೀಸ್ ಇಲಾಖೆಗೆ ಹಿಮಾಲಯ ಹತ್ತಿದ್ದಷ್ಟು ಕಷ್ಟವೇನಲ್ಲ.
ರಾಜ್ಯದಲ್ಲಿರುವ ಟಿವಿ ವಾಹಿನಿಗೆ ಕಳೆದ ಆರೇಳು ತಿಂಗಳಿನಿಂದ ಒಂದೇ ವಿಷಯ ತೋರಿಸಿ ಬೋರ್ ಆಗಿತ್ತು. ಕೊರೊನಾದಿಂದ ಎಪ್ರಿಲ್, ಮೇಯಲ್ಲಿ ಇದ್ದ ಟಿಆರ್ ಪಿ ಅಗಸ್ಟ್ ನಲ್ಲಿ ಇರಲೇ ಇಲ್ಲ. ಅವರಿಗೆ ಹೊಸ ವಿಷಯ ಬೇಕಿತ್ತು. ಇನ್ನು ಪೇಪರ್ ನವರಿಗೆ ಎಷ್ಟು ಎಂದು ಕೊರೊನಾ ವಿಷಯ ತುಂಬುವುದು ಎನ್ನುವುದೇ ಸವಾಲಾಗಿತ್ತು. ಈ ಹೊತ್ತಿನಲ್ಲಿ ಇವರಿಗೆ ಆಪತ್ಬಾಂಧವರಂತೆ ಬಂದದ್ದು ರಾಗಿಣಿ ಮತ್ತು ಸಂಜನಾ. ಇವರಿಬ್ಬರನ್ನು ತೋರಿಸುವಾಗ ಒಂದಿಷ್ಟು ರಂಗಿನ ಹಾಡುಗಳು, ಗ್ಲಾಮರ್ ಫೋಟೋ, ವಿಡಿಯೋ ಹಾಕಬಹುದು. ಜನರಿಗೆ ಇಷ್ಟವಾಗುತ್ತೆ ಎಂದು ತೋರಿಸಲು ಶುರು ಮಾಡಿದವು. ಈಗ ಅದು ಕೂಡ ಜನರಿಗೆ ಬೋರಾಗಿದೆ. ಮನಸ್ಸು ಒಂದೇ ವಿಷಯವನ್ನು ತುಂಬಾ ದಿನ ನೋಡಲು ಬಯಸುವುದಿಲ್ಲ. ಹಾಗಂತ ಡ್ರಗ್ಸ್ ಈಗ ಮಾತ್ರ ಇಡೀ ದಿನ ಸುದ್ದಿಯಾಗುತ್ತಿದೆ ಎನ್ನುವುದು ಬಿಟ್ಟರೆ ಇಷ್ಟು ವರ್ಷಗಳಲ್ಲಿ ಅನೇಕ ಸಲ ಪೊಲೀಸರು ರಾಜ್ಯದ ವಿವಿಧ ಭಾಗಗಳಲ್ಲಿ ಡ್ರಗ್ಸ್ ಪೆಡ್ಲರ್ ಗಳನ್ನು ಹಿಡಿದಿದ್ದಾರೆ. ಆದರೆ ಅದು ವಾರ್ತೆಯ ಮೂಲೆಯಲ್ಲಿ ಒಂದು ಝಲಕ್ ಆಗಿ ಬರುತ್ತಿತ್ತು. ಹಾಗೇ ಪತ್ರಿಕೆಗಳ ಮಧ್ಯದ ಪೇಜಿನಲ್ಲಿ ಎಲ್ಲೋ ಒಂದು ಭಾಗದಲ್ಲಿ ಮುದ್ರಿತವಾಗುತ್ತಿತ್ತು. ಆದರೆ ಕಳೆದ 15 ದಿನಗಳಿಂದ ಇಡೀ ದಿನ ಟಿವಿಯಲ್ಲಿ, ಪತ್ರಿಕೆಗಳ ಇಡೀ ಪೇಜುಗಳಲ್ಲಿ ಬರುತ್ತಿದೆ. ಕಾರಣ ಸೆಲೆಬ್ರಿಟಿಗಳು ಸಿಕ್ಕಿ ಬಿದ್ದಿರುವುದು. ಶ್ರೀಮಂತರ ಮಕ್ಕಳು ಸಿಕ್ಕಿಬಿದ್ದಿರುವುದು. ನಮ್ಮಲ್ಲಿ ಕೋಟ್ಯಾಧೀಶೆ ಕಂಗನಾ ರಾಣಾವತ್ ಕಚೇರಿಯ ಒಂದು ಭಾಗ ಧ್ವಂಸವಾದದ್ದು ಇಡೀ ದೇಶದಲ್ಲಿ ಸುದ್ದಿಯಾಗುತ್ತದೆ. ಅದೇ ಪಾಪದ ಬಡವ ಹೊಟ್ಟೆಪಾಡಿಗೆ ಒಂದು ಗೂಡಂಗಡಿ ಇಟ್ಟಿದ್ದು, ಅದನ್ನು ಕ್ಲೀನ್ ಡ್ರೈವ್ ಹೆಸರಿನಲ್ಲಿ ಪಾಲಿಕೆ ಒಡೆದರೆ ಸುದ್ದಿಯಾಗಲ್ಲ. ಕಂಗನಾರಿಗೆ ಅಂತಹ ನಾಲ್ಕು ಆಫೀಸು ಕಟಟುವ ತಾಕತ್ತು ಇದೆ. ಬಡವನಿಗೆ ಮತ್ತೊಮ್ಮೆ ಅದೇ ಗೂಡಂಗಡಿ ಮಾಡಲು ಸಾಧ್ಯವೇ? ಹಾಗಾದರೆ ನಿಜಕ್ಕೂ ನಾವು ಮಾನವೀಯತೆ ಮತ್ತು ಸುದ್ದಿರಸವತ್ತಿನ ನಡುವೆ ಎಲ್ಲಿ ಹೋಗುತ್ತಿದ್ದೇವೆ ಎನ್ನುವುದು ಈಗ ಉಳಿದಿರುವ ಪ್ರಶ್ನೆ.
ಇನ್ನು ಈಗ ಪೊಲೀಸರು ಕೂಡ ಸ್ಪರ್ಧೆಗೆ ಬಿದ್ದವರಂತೆ ತಮ್ಮ ಠಾಣಾ ವ್ಯಾಪ್ತಿಯಲ್ಲಿರುವ ಗಾಂಜಾ ಸಹಿತ ಡ್ರಗ್ಸ್ ಜಾಲವನ್ನು ಬಯಲಿಗೆ ಎಳೆಯಬೇಕು. ಇದು ಕೇವಲ ರಾಗಿಣಿ ಅಥವಾ ಸಂಜನಾ ವಿಷಯವಲ್ಲ. ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗಿಯೂ ಇಲ್ಲ. ಸಿನೆಮಾ ತಾರೆಯರು ತಮ್ಮ ನಟನೆಯಿಂದ ಜನರ ಪ್ರೀತಿಯನ್ನು ಪಡೆದುಕೊಂಡಿರುತ್ತಾರೆ. ಅದನ್ನು ಕಾಪಾಡುವ ಜವಾಬ್ದಾರಿ ಕೂಡ ಅವರ ಮೇಲಿದೆ. ಮೊನ್ನೆ ಯಶ್ ಎನ್ನುವ ಸಿನೆಮಾ ನಟ ಹೇಳಿದಂತೆ “ನಿಮ್ಮ ದೇಹ ತಂದೆ, ತಾಯಿ ಕೊಟ್ಟ ಭೀಕ್ಷೆ” ಆದರೆ ಈ ನಟಿಮಣಿಗಳಿಗೆ ಯಾರೋ ಕೊಟ್ಟ ಡ್ರಗ್ಸ್ ಎಂಬ ಭೀಕ್ಷೆಯ ಎದುರು ಏನೂ ಕಾಣಿಸಲಿಲ್ಲ. ಅದಕ್ಕಾಗಿ ಈಗ ಅನುಭವಿಸುತ್ತಿದ್ದಾರೆ. ಡ್ರಗ್ಸ್ ಇಲ್ಲದೆಯೂ ಮನುಷ್ಯ ಬದುಕಬಹುದು. ಆದರೆ ಡ್ರಗ್ಸ್ ನಿಂದ ಹೋದ ಮಾನ ಮತ್ತೆ ಬರುತ್ತದೆಯಾ ?
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Hanumantha Kamath May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Hanumantha Kamath May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search