• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ದಿನ ಅಮಿತ್ ಶಾ ಮಾಡಲಿರುವ ಮ್ಯಾಜಿಕ್ ಏನು?

TNN Correspondent Posted On August 11, 2017
0


0
Shares
  • Share On Facebook
  • Tweet It

ಅಮಿತ್ ಶಾ ಬೆಂಗಳೂರಿಗೆ ಬರಲು ಕ್ಷಣಗಣನೆ ಆರಂಭವಾಗಿದೆ. ಭಾರತೀಯ ಜನತಾ ಪಾರ್ಟಿಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯದ ಅಷ್ಟೂ ನಾಯಕರು ಕೇಂದ್ರದ ನಾಯಕನೊಬ್ಬನ ಬರುವಿಕೆಯನ್ನು ಕಾತರದಿಂದ ಕಾಯುತ್ತಿದ್ದಾರೆ. ಒಂದು ಕಾಲದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ಸ್ ನಾಯಕರನ್ನು ಹೈಕಮಾಂಡ್ ಸಂಸ್ಕೃತಿಯವರು ಎಂದು ಟೀಕಿಸುತ್ತಿದ್ದರು. ಹೈಕಮಾಂಡ್ ಹೇಳಿದ್ದನ್ನು ಚಾಚು ತಪ್ಪದೆ ಪಾಲಿಸುವವರು, ಇಲ್ಲಿನವರು ಬರಿ ಆಟದ ಗೊಂಬೆಗಳು ಎಂದು ಹೀಯಾಳಿಸುತ್ತಿದ್ದರು. ಅಲ್ಲಿ ಏನು ನಿರ್ಧಾರವಾಗುತ್ತದೆಯೋ ಅದೇ ಅಂತಿಮವಾಗುವುದಾದರೆ ನೀವ್ಯಾಕೆ ಇಲ್ಲಿ ಇರುವುದು ಎಂದು ಕಿಚಾಯಿಸುತ್ತಿದ್ದರು. ನಮ್ಮದೇನಿದ್ದರೂ ನಾವು ಹೇಳಿದ್ದೇ ಕೇಂದ್ರದ ನಾಯಕರು ಒಪ್ಪುತ್ತಾರೆ ಎನ್ನುವ ಧೋರಣೆ ಬಿಜೆಪಿಯವರದ್ದಾಗಿತ್ತು. ಆದರೆ ಈ ಬಾರಿ ಎಲ್ಲವೂ ಉಲ್ಟಾ ಪಲ್ಟಾ ಆಗಿದೆ.

ಬಿಜೆಪಿಯ ಪರಿಸ್ಥಿತಿ ಬದಲಾಗಿದೆ. ಹೇಗೆ ಹಿಂದೆ ಕಾಂಗ್ರೆಸ್ ಎಲ್ಲಾ ನಿರ್ಧಾರಗಳಿಗೂ ಹೈಕಮಾಂಡ್ ಅತ್ತ ನೋಡುತ್ತಿತ್ತೊ ಈಗ ಆ ಪರಿಸ್ಥಿತಿ ಬಿಜೆಪಿಯಲ್ಲಿದೆ. ಅದೇ ಕಾಂಗ್ರೆಸ್ ಹೇಗೆ ಹಿಂದೆ ದೆಹಲಿ ನಾಯಕರ ಆದೇಶಗಳನ್ನು ಕಾದು ಕುಳಿತುಕೊಳ್ಳುತ್ತಿತ್ತೊ ಈಗ ದೆಹಲಿಯಲ್ಲಿ ಕೂಡ ರಾಜ್ಯ ನಾಯಕರ ಮಾತುಗಳು ನಡೆಯುವ ಪರಿಸ್ಥಿತಿ ಇದೆ. ಈ ಬದಲಾವಣೆ ಹೇಗೆ ಸಾಧ್ಯವಾಯಿತು?

ವಿಷಯ ಸಿಂಪಲ್. ಬಿಜೆಪಿಯನ್ನು ಮತ್ತೆ ಕರ್ನಾಟಕದಲ್ಲಿ ಅಧಿಕಾರಕ್ಕೆ ತರಬೇಕಾದರೆ ಯಡಿಯೂರಪ್ಪ, ಈಶ್ವರಪ್ಪ, ಸಿಟಿ ರವಿ, ಅಶೋಕ್, ಶೋಭಾ ಮುಖಗಳು ವರ್ಕೌಟ್ ಆಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಎಲ್ಲರೂ ಮೇಲ್ನೋಟಕ್ಕೆ ಒಂದೇ ವೇದಿಕೆಯಲ್ಲಿ ಅಪ್ಪಿತಪ್ಪಿ ಕಾಣಿಸುತ್ತಾರಾದರೂ ಆರು ನಾಯಕರಲ್ಲಿ ಮೂರು ಗಂಪುಗಳು ಎನ್ನುವ ವಾತಾವರಣ ಇದೆ. ಇನ್ನೊಂದೆಡೆ ಸಿದ್ಧರಾಮಯ್ಯ ಉರುಳಿಸುತ್ತಿರುವ ಲಿಂಗಾಯತ ಧರ್ಮ, ಕನ್ನಡ ಧ್ವಜ, ಮೆಟ್ರೋ ಹಿಂದಿ ವಿರೋಧಿ, ದಲಿತರ ಮತಸೆಳೆಯುವ ತಂತ್ರಗಳೆಲ್ಲಾ ಬಿಜೆಪಿಗೆ ಅರಗಿಸಲು ಕಷ್ಟಸಾಧ್ಯವಾಗುತ್ತಿದೆ. ಬಿಜೆಪಿ ಭತ್ತಳಿಕೆಯಲ್ಲಿರುವ ಕಾಂಗ್ರೆಸ್ ಹಿಂದೂ ವಿರೋಧಿ ಅಸ್ತ್ರವೊಂದೇ ಚುನಾವಣೆಯಲ್ಲಿ ದಡ ಮುಟ್ಟಿಸುತ್ತದೆ ಎನ್ನುವ ನಿರೀಕ್ಷೆ ಎಲ್ಲರಲ್ಲೂ ಇಲ್ಲ. ಈ ಹೊತ್ತಿನಲ್ಲಿ ಕಾಂಗ್ರೆಸ್ ಬಳಸುತ್ತಿರುವ ಬಾಣಗಳನ್ನು ಅವರದ್ದೇ ಅಡ್ಡೆಯಲ್ಲಿ ಹೊಸಕಿ ಹಾಕಲು ಬೇಕಾಗಿರುವುದು ಸ್ವಹಿತಾಸಕ್ತಿಗಿಂತ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಗುರಿ ಇರುವ ನಾಯಕ. ಅದು ಬಿಜೆಪಿಯಲ್ಲಿ ಯಾರೂ ಇದ್ದಂತೆ ಕಾಣುತ್ತಿಲ್ಲ. ಹೊರಗಿನ ವ್ಯಕ್ತಿಯನ್ನು ಈಗ ಪ್ರಾಜೆಕ್ಟ್ ಮಾಡಿದರೆ ಚುನಾವಣೆ ಒಳಗೆ ಬಿಜೆಪಿಯ ಒಳಗಿನವರೇ ಪರಸ್ಪರರ ಸಫಾರಿ ಹರಿದು ಚಿಂದಿ ಚಿತ್ರಾನ್ನ ಮಾಡಿಬಿಡುತ್ತಾರೆ. ಅದಕ್ಕಾಗಿ ಎಲ್ಲರನ್ನು ಚುನಾವಣೆಯ ತನಕ ಒಟ್ಟಿಗೆ ಕರೆದೊಯ್ಯುವ ನಾಯಕನಾಗಿ ಅಮಿತ್ ಶಾ ಕಾಣಿಸಿಕೊಂಡಿದ್ದಾರೆ.
ಅಮಿತಾ ಶಾ ಅವರೊಂದಿಗೆ ಸಲೀಸಾಗಿ ವ್ಯವಹರಿಸಬಲ್ಲ ಮುಖಂಡರು ನಾಳೆ ಮುಂದಿನ ಪಂಕ್ತಿಯಲ್ಲಿ ಕಾಣಿಸಲಿದ್ದಾರೆ. ಉಳಿದವರು ಕುಚ್ ಪ್ರಾಬ್ಲಂ ನಹಿ ಎಂದು ಹೇಳುವ ಮಟ್ಟಿಗೆ ತಮ್ಮ ನಡೆಯನ್ನು ಸೀಮಿತಗೊಳಿಸಲಿದ್ದಾರೆ. ಈ ನಡುವೆ ದಲಿತ ಸ್ವಾಮಿಗಳನ್ನು ಚುನಾವಣೆಗೆ ನಿಲ್ಲಿಸುವ ಪ್ರಕ್ರಿಯೆ ಅಮಿತ್ ಶಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಅದಕ್ಕೆ ಸರಿಯಾಗಿ ನಾವು ಏನು ಮಾಡುವುದು ಎಂದು ಕಾಂಗ್ರೆಸ್ಸಿಗರ ಚಿಂತನೆ ಶುರುವಾಗಿದೆ. ವಿಸ್ತಾರಕ್ ಯೋಜನೆಯನ್ನು ಕೆಲವರು ಮನಸ್ಸುಗೊಟ್ಟು ಮಾಡಿದರೆ ಮತ್ತಿಷ್ಟು ಜನ ಕಾಟಾಚಾರಕ್ಕೆ ಮುಗಿಸಿದ್ದಾರೆ. ಇಷ್ಟು ಬ್ಯಾಗೇಜ್ ಇಟ್ಟುಕೊಂಡು ಮೂರು ದಿನ ರಾಜ್ಯದಲ್ಲಿ ಸೂರ್ಯಾಸ್ತಮಾನ ನೋಡಲಿರುವ ಅಮಿತ್ ಶಾ ಕೆಸರಿನಲ್ಲಿ ಮುಳುಗಿರುವ ಕಮಲವನ್ನು ಅರಳಿಸುತ್ತಾರಾ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search