• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸಹಾಯ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಎದುರು ಬೆತ್ತಲೆ ನಿಂತ ಉಳ್ಳಾಲ ಎಸ್ಡಿಪಿಐ ಮುಖಂಡ ಅರೆಸ್ಟ್!

tnn Posted On January 19, 2021
0


0
Shares
  • Share On Facebook
  • Tweet It

ಉಳ್ಳಾಲ: ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಎಸ್‌ ಡಿಪಿಐ ಪಕ್ಷದ ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ಧಿಕ್‌ ಉಳ್ಳಾಲ್‌ (35) ಪ್ರಕರಣದ ಆರೋಪಿ.

ಕೊಣಾಜೆ ನಡುಪದವಿನ ಎಂಜಿನಿಯರಿಂಗ್‌ ಓದುತ್ತಿದ್ದ ಯುವತಿಯೊಬ್ಬಳನ್ನು ಕೇರಳದ ಯುವಕ 15ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗುತ್ತಾನೆ. ಬಳಿಕ ಯುವತಿ ಮತಾಂತರವಾಗಿದ್ದು, ತನ್ನ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಳ್ಳುತ್ತಾಳೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಆ ಬಳಿಕ ಗಂಡ ನಾಪತ್ತೆಯಾಗುತ್ತಾನೆ.

ಫಾತಿಮಾ ಇಬ್ಬರು ಮಕ್ಕಳೊಂದಿಗೆ ಉಳ್ಳಾಲ ಒಂಬತ್ತು ಕೆರೆಯಲ್ಲಿ ವಾಸವಾಗಿದ್ದರು. ಈ ಸಮಯದಲ್ಲಿ ಸಂಘಟನೆಯ ಮುಖಂಡ ಸಿದ್ಧಿಕ್‌ ಉಳ್ಳಾಲ್‌ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಇದೇ ಸಲುಗೆಯಿಂದ ಆಕೆಯ ಇಬ್ಬರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತುಕೊಂಡ ಮಹಿಳೆ ಜ.16ರಂದು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅಲ್ಲದೆ ಸಹಾಯಮಾಡುವ ನೆಪದಲ್ಲಿ ಮನೆಗೆ ಬರುತ್ತಿದ್ದ ಎಸ್ ಡಿ ಪಿಐ ಮುಖಂಡ ಸಿದ್ದಿಕ್ ಮಹಿಳೆಯ ಎರಡು ಹೆಣ್ಣುಮಕ್ಕಳ ಮುಂದೆ ಬೆತ್ತಲಾಗಿ ನಿಲ್ಲುತ್ತಿದ್ದನಂತೆ , ಇದರಿಂದ ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದರು, ಕಳೆದ ಡಿಸೆಂಬರ್ ನಲ್ಲಿ ಈ ಬೆಳವಣಿಗೆ ನಡೆದಿದ್ದು ಎಸ್ ಡಿಪೀಐ ಮುಖಂಡರು ಸೇರಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ, ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ ಇದೀಗ ಮತ್ತೆ ಸಿದ್ದಿಕಿನ ಕಾಮದಾಟ ಜಾಸ್ತಿಯಾಗುತ್ತಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಅತ್ಯಾಚಾರ, ಬೆದರಿಕೆ, ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
tnn January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
tnn January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search