• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಣಚೂರು ಮೆಡಿಕಲ್ ಕಾಲೇಜಿಗೆ ಮೂಲ್ಕಿಯಿಂದ ಮಹಿಳೆಯರ ರವಾನೆ ಸ್ಥಳೀಯರ ತಡೆ, ಹೊರಬಿದ್ದ ಬೆಡ್ ಭರ್ತಿ ದಂದೆ

Tulunadu News Posted On June 30, 2021
0


0
Shares
  • Share On Facebook
  • Tweet It

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜ್ ಗೆಂದು ಮುಲ್ಕಿ ಬಳಿಯ ಕಾರ್ನಾಡು ಲಿಂಗಪ್ಪಯ್ಯಕಾಡು ಎಂಬಲ್ಲಿಂದ ಐವತ್ತಕ್ಕೂ ಹೆಚ್ಚು ಮಹಿಳೆಯರನ್ನು ಬಸ್ಸಿನಲ್ಲಿ ತುಂಬಿಸಿಕೊಂಡು ತೆರಳುತ್ತಿದ್ದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಕಣಚೂರು ಮೆಡಿಕಲ್ ಕಾಲೇಜಿನ ಬಸ್ಸಿನಲ್ಲಿ ಐವತ್ತು ಕ್ಕೂ ಹೆಚ್ಚು ಮಹಿಳೆಯರನ್ನು ತುಂಬಿಸಿ ಒಯ್ಯುತ್ತಿರುವುದನ್ನು ತಿಳಿದು ಸ್ಥಳೀಯರು ಆಕೆ ಆಕ್ಷೇಪಿಸಿದ್ದಾರೆ , ಬಸ್ಸಿನಲ್ಲಿ ಕಣಚೂರು ಮೆಡಿಕಲ್ ಕಾಲೇಜಿನ ಚಾಲಕ ಮತ್ತು ಓರ್ವ ನರ್ಸ್ ಮಾತ್ರ ಇದ್ದು ಅವರು ಕೂರೋಣ ಲಸಿಕೆ ಹಾಕಿಸುವುದಕ್ಕಾಗಿ ಒಯ್ಯುತ್ತಿರುವುದಾಗಿ ತಿಳಿಸಿದ್ದಾರೆ .

ಕಣಚೂರು ಮೆಡಿಕಲ್ ಕಾಲೇಜಿನ ಮ್ಯಾನೇಜರ್ ನವಾಜ್ ಇವರನ್ನು ಕರೆತರುವಂತೆ ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ .ಆದರೆ ರಾತ್ರಿ ವೇಳೆಗೆ ಇಷ್ಟೊಂದು ಮಂದಿಯನ್ನು ಲಸಿಕೆ ಹಾಕಿಸಲು ಒಯ್ಯುವ ಅಗತ್ಯವಿಲ್ಲ ಅದರಲ್ಲೂ ಮೂಲ್ಕಿಯ ಜನರನ್ನು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯುವಾಗ ಏನಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ . ಬಳಿಕ ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಲಸಿಕೆಯ ನೆಪದಲ್ಲಿ ಯಾವುದೇ ಅಂತರ ಇಲ್ಲದೆ ಲೊಕ್ಡೌನ್ ಸಂದರ್ಭದಲ್ಲಿ ಜನರನ್ನ ಒಯ್ಯುತ್ತಿದ್ದಾರೆ ಎಂದು ದೂರಿದ್ದಾರೆ . ಈ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಸೃಷ್ಟಿಯಾಗಿದ್ದು ಮುಲ್ಕಿ ಪೊಲೀಸರಿಗೆ ಮಾಹಿತಿ ದೊರೆತು ಸ್ಥಳಕ್ಕೆ ತೆರಳಿದ್ದಾರೆ ಕಾಲೇಜಿನ ಪರವಾಗಿ ಬಸ್ಸಿನಲ್ಲಿ ಇಬ್ಬರು ಸಿಬ್ಬಂದಿ ಸರಿಯಾಗಿ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಜನರನ್ನು ಬಸ್ಸಿನಿಂದ ಇರಿಸಲಾಗಿದೆ ಈ ಬಗ್ಗೆ ನಿಯಮ ಉಲ್ಲಂಘನೆ ಮತ್ತು ಲಸಿಕೆ ನೆಪದಲ್ಲಿ ಜನರನ್ನು ಇನ್ನಿತರ ಉದ್ದೇಶಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ .

ಮೆಡಿಕಲ್ ಕಾಲೇಜುಗಳಿಗೆ ಆಯಾ ಸಂದರ್ಭಗಳಲ್ಲಿ ಉನ್ನತಮಟ್ಟದ ಅಧಿಕಾರಿಗಳ ಪರಿಶೀಲನೆ ಬರುತ್ತಾರೆ ಈ ವೇಳೆ ಬೆಡ್ ನಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದ್ದರೆ ಗ್ರೇಡ್ , ನಾಕ್ ಶ್ರೇಯಾಂಕ ಲಭಿಸುವುದಿಲ್ಲ , ಅಲ್ಲದೆ ರೋಗಿಗಳ ಇಲ್ಲದಿದ್ದರೆ ಮೆಡಿಕಲ್ ಕಾಲೇಜಿಗೆ ಆಸ್ಪತ್ರೆ ನಡೆಸುವ ಅರ್ಹತೆ ತಪ್ಪಿಹೋಗುವ ಸಾಧ್ಯತೆ ಇರುತ್ತದೆ ಇದಕ್ಕಾಗಿ ಕೆಲವು ಮೆಡಿಕಲ್ ಕಾಲೇಜುಗಳು ಇಲಾಖಾಧಿಕಾರಿಗಳು ಪರಿಶೀಲನೆಗೆ ಬರುವ ಸಂದರ್ಭದಲ್ಲಿ ಬೆಡ್ ಭರ್ತಿಯಾಗಿರುವುದನ್ನು ತೋರಿಸಲು ಕೃತಕವಾಗಿ ಬೆಡ್ ತುಂಬುವ ಕೆಲಸ ಮಾಡುತ್ತಾರೆಂಬ ಆರೋಪಗಳಿವೆ . ಕಣಚೂರು ಮೆಡಿಕಲ್ ಕಾಲೇಜಿಗೆ ಈ ರೀತಿ ಕೂಲಿಯಾಳು ಮಹಿಳೆಯರನ್ನು ಒಟ್ಟು ಸೇರಿಸಿ ಕೊಂಡೊಯ್ಯುತ್ತಿದ್ದ ಹುನ್ನಾರದ ಹಿಂದೆ ಇದೇ ರೀತಿಯ ಬೆಡ್ ಭರ್ತಿ ಮಾಡುವ ಉದ್ದೇಶ ಇತ್ತೇ ಎನ್ನುವ ಸಂಶಯ ಎದ್ದಿದೆ . ಲಸಿಕೆ ನೀಡುವ ನೆಪದಲ್ಲಿ ಮಹಿಳೆಯರನ್ನು ಒಯ್ದು ಬೆಡ್ಡಿನಲ್ಲಿ ಮಲಗಿಸಿ ಇನ್ಸ್ ಪೆಕ್ಷನ್ ಮಾಡುವ ಅಧಿಕಾರಿಗಳ ಕಣ್ಣಿಗೆ ಮಣ್ಣೆರೆಚುವ ಹಿಡನ್ ಅಜೆಂಡಾ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search