• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉರ್ವ ಠಾಣೆಯಲ್ಲಿ ದುರ್ನಡತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಇಬ್ಬರ ಬಂಧನ!

Tulunadu News Posted On July 14, 2021


  • Share On Facebook
  • Tweet It

ಮಂಗಳೂರು: ಉರ್ವ ಠಾಣೆಗೆ ಬಂದಿದ್ದ ವ್ಯಕ್ತಿಗಳಿಬ್ಬರು ಪೊಲೀಸರ ಜತೆ ದುರ್ನಡತೆ ತೋರಿದ ಘಟನೆ ನಡೆದಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ .ನೋಯೆಲ್ ಸಿಕ್ವೇರಾ ಮತ್ತು ಜಾನ್ ಸಿಕ್ವೇರ ಬಂಧಿತರು ನೋಯೆಲ್ ಸಿಕ್ವೇರಾ ಉರ್ವ ಸ್ಟೋರ್ ಬಳಿಯ ಚಿಲಿಂಬಿ ನಿವಾಸಿಯಾಗಿದ್ದು ಕಳೆದ ಮೇ ತಿಂಗಳಲ್ಲಿ ತನ್ನ ಅಪಾರ್ಟ್ಮೆಂಟ್ ವಿಚಾರದಲ್ಲಿ ಪೊಲೀಸ್ ದೂರು ನೀಡಿದ್ದರೂ . ಅಪಾರ್ಟ್ ಮೆಂಟ್ ಅಸೋಸಿಯೇಷನ್ ಕಡೆಯಿಂದ ನೀರು ಕಡಿತ ಮಾಡಿದ ವಿಚಾರದಲ್ಲಿ ಜಟಾಪಟಿ ನಡೆದು ಬಳಿಕ ಎರಡೂ ಕಡೆಯಿಂದ ದೂರು ಪ್ರತಿ ದೂರು ಸಲ್ಲಿಕೆಯಾಗಿತ್ತು .ಇದೀಗ 2ತಿಂಗಳ ನಂತರ ಅಪಾರ್ಟ್ ಮೆಂಟ್ ಜಟಾಪಟಿ ವಿಚಾರ ಇತ್ಯರ್ಥ ಆಗಿವೆ ಎನ್ನಲಾಗುತ್ತಿದ್ದು ಇಂದು ನೋಯೆಲ್ ಸಿಕ್ವೇರಾ ಉರ್ವಾಠಾಣೆಯ ದೂರು ಹಿಂಪಡೆಯುವುದಕ್ಕಾಗಿ ತೆರಳಿದ್ದರು ಈ ವೇಳೆ ಸಾಮಾಜಿಕ ಕಾರ್ಯಕರ್ತರೆಂದು ಗುರುತಿಸಿಕೊಂಡಿರುವ ಜಾನ್ ಸೆಕ್ವೇರಾ ಕೂಡ ಠಾಣೆಗೆ ತೆರಳಿದ್ದರು ಎನ್ನಲಾಗಿದೆ . ಠಾಣೆಯಲ್ಲಿ ಇದೇ ವಿಚಾರದಲ್ಲಿ ಮಾತುಕತೆ ನಡೆದಿದ್ದು ಪೋಲಿಸರ ಜೊತೆ ಮಾತನಾಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾನೆ , ಇದನ್ನು ಗಮನಿಸಿದ ಪೊಲೀಸರು ಮೊಬೈಲ್ ಕಿತ್ತುಕೊಂಡಿದ್ದಾರೆ .ಈ ವೇಳೆ ಜಾನ್ ಸಿಕ್ವೇರ ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ ಪೊಲೀಸರು ಹೇಳುವ ಪ್ರಕಾರ ಜಾನ್ ಮತ್ತು ನೋಯಲ್ ಇಬ್ಬರು ಅಲ್ಲಿನ ಸಿಬ್ಬಂದಿ ಜೊತೆ ದುರ್ನಡತೆ ತೋರಿದ್ದಾರೆ ಈ ವೇಳೆ ಇಬ್ಬರು ಮಹಿಳಾ ಸಿಬ್ಬಂದಿ ಪೂಜಾ ಹಿರೇಮಠ ಮತ್ತು ಇನ್ನೊಬ್ಬ ಹೆಡ್ಕಾನ್ಸ್ಟೇಬಲ್ ನಾರಾಯಣ ಎಂಬುವರಿಗೆ ಗಾಯಗಳಾಗಿದ್ದು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಘಟನೆಗೆ ಸಂಬಂಧಿಸಿ ಪೊಲೀಸರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ನೋಯೆಲ್ ಮತ್ತು ಜಾನ್ ಸೆಕ್ವೇರಾರನ್ನು ಬಂಧಿಸಿದ್ದಾರೆ ಹೀಗಾಗಿ ಕೇಸ್ ಹಿಂಪಡೆಯಲು ಹೋದವರು ಜೈಲು ಸೇರುವಂತಾಗಿದೆ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search