• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ಹಾಗೂ ಶೋಭಾ ಆಸ್ತಿ ತುಲನೆಯಾಗಲಿ-ರಮಾನಾಥ ರೈ

TNN Correspondent Posted On August 18, 2017
0


0
Shares
  • Share On Facebook
  • Tweet It

ಕಲ್ಲಡ್ಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ರ್ಯ ಮುಖಂಡ ಡಾ|ಪ್ರಭಾಕರ್ ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಎರಡು ಶಾಲೆಗಳಿಗೆ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದಿಂದ ಮಧ್ಯಾಹ್ನ ಬಿಸಿಯೂಟಕ್ಕೆ ಬರುತ್ತಿದ್ದ ಅನುದಾನವನ್ನು ರಾಜ್ಯ ಸರಕಾರ ಸ್ಥಗಿತಗೊಳಿಸಿದ ನಂತರ ಕರಾವಳಿಯಲ್ಲಿ ಈ ವಿಷಯದ ಪರವಾಗಿ ವಾದ-ಪ್ರತಿವಾದಗಳು ಕೇಳಿಬರುತ್ತಿವೆ.

ಈ ಬಗ್ಗೆ ಭಾರತೀಯ ಜನತಾ ಪಾರ್ಟಿಯ ಕಡೆಯಿಂದ ದೊಡ್ಡ ಸಣ್ಣ ಎಲ್ಲಾ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿ ನಾಯಕರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈಯವರನ್ನು ಟೀಕಿಸಿ ಹೇಳಿಕೆ ನೀಡುತ್ತಿದ್ದರೆ, ಅತ್ತ ಕಾಂಗ್ರೆಸ್ ಕಡೆಯಿಂದ ರಾಜ್ಯ ಸರಕಾರದ ನಡೆಯನ್ನು ಸಮರ್ಥಿಸುವ ಹೇಳಿಕೆಯನ್ನು ವಿರಳವಾಗಿ ಕೇಳಿಬರುತ್ತಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಈ ಕ್ರಮವನ್ನು ಸಾಕ್ಷ್ಯಾಧಾರಗಳೊಂದಿಗೆ ಸಮರ್ಥಿಸಬೇಕಿದ್ದ ಕಾಂಗ್ರೆಸ್ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ನಾವು ಇದನ್ನು ಪ್ರತಿಪಾದಿಸಿ ಹೇಳಿಕೆ ಕೊಟ್ಟರೆ ಹಿಂದೂಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹೆದರಿರುವ ಕಾಂಗ್ರೆಸ್ ಮುಖಂಡರು ಮಾಧ್ಯಮಗಳಿಂದ ನುಣುಚಿಕೊಳ್ಳುತ್ತಿದ್ದಾರೆ. ಇದೇ ಕಾಲಕ್ಕೆ ರಾಜ್ಯ ಸರಕಾರದ ವಿರುದ್ಧ ಪ್ರಬಲ ಅಸ್ತ್ರ ಸಿಕ್ಕಂತೆ ವರ್ತಿಸಿರುವ ಬಿಜೆಪಿ ನಾಯಕರು ಈ ವಿಷಯವನ್ನು ಜೀವಂತವಾಗಿಡಲು ಶ್ರಮಿಸುತ್ತಿದ್ದಾರೆ. ಇದರ ಒಂದು ಅಂಗವಾಗಿ ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರು ಮಂಗಳೂರಿನ ಮಣ್ಣಗುಡ್ಡೆಯಲ್ಲಿ ಮನೆಮನೆ ಭೇಟಿಕೊಟ್ಟು ಭಿಕ್ಷಾಟನೆ ಮಾಡಿ ಅಕ್ಕಿಯನ್ನು ಸಂಗ್ರಹಿಸಿದ್ದಾರೆ. ಅವರೊಂದಿಗೆ ಉಡುಪಿ ಜಿಲ್ಲಾ ಬಿಜೆಪಿ ಮುಖಂಡರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮುಖಂಡರು ಕೂಡ ಇದ್ದರು.

ನಂತರ ಸ್ಥಳೀಯ ಮುಖಂಡರ ನಿವಾಸದಲ್ಲಿ ಸುದ್ದಿಗೋಷ್ಟಿ ಮಾಡಿದ ಶೋಭಾ ಕರಂದ್ಲಾಜೆ, ರಾಜ್ಯ ಸರಕಾರ, ರಮಾನಾಥ ರೈ, ಸಿದ್ಧರಾಮಯ್ಯನವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೋಭಾ ಅವರ ಮುಷ್ಟಿ ಅಕ್ಕಿ- ಭವತೀ ಭಿಕ್ಷಾಂ ದೇಹಿ ಅಭಿಯಾನಕ್ಕೆ ವ್ಯಾಪಕ ಪ್ರಚಾರ ಸಿಕ್ಕಿದ ನಂತರ ಮಧ್ಯಮದವರು ಈ ವಿಷಯವನ್ನು ರಮಾನಾಥ ರೈ ಅವರ ಗಮನಕ್ಕೆ ತಂದು ಪ್ರತಿಕ್ರಿಯೆ ಕೇಳಿದಾಗ ಕೆಂಡಾಮಂಡಲರಾದ ರೈಗಳು ” ಇಲ್ಲಿ ಭಿಕ್ಷಾಟನೆಯ ನಾಟಕ ಮಾಡುವುದು ಬಿಟ್ಟು ಮಡಿಕೇರಿಯಲ್ಲಿ ಶೋಭಾ ಕರಂದ್ಲಾಜೆ ಮಾಡಿಟ್ಟಿರುವ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿಯಲ್ಲಿ ಒಂದಿಷ್ಟನ್ನು ದಾನ ಮಾಡಿದರೂ ಆ ಶಾಲೆಯ ಮಕ್ಕಳಿಗೆ ಎಷ್ಟೋ ವರ್ಷಗಳ ವರೆಗೆ ಊಟ ಆರಾಮವಾಗಿ ಸಿಗುತ್ತಿತ್ತು ಎಂದು ಹೇಳಿದ್ದಾರೆ. ತಾನು ಮಾಡಿರುವ ಆಸ್ತಿ, ತನ್ನ ತಂದೆಯಿಂದ ಬಂದ ಆಸ್ತಿ ಮತ್ತು ಶೋಭಾ ಕರಂದ್ಲಾಜೆಯವರು ಮಾಡಿರುವ ಆಸ್ತಿ ಮತ್ತು ಶೋಭಾ ತಂದೆಯವರಲ್ಲಿ ಇದ್ದ ಆಸ್ತಿ ಎಲ್ಲಾ ತುಲನೆಯಾಗಲಿ ಎಂದ ರೈಗಳು ತಾವು ರಾಜಕೀಯಕ್ಕೆ ಬಂದ ಬಳಿಕ ಹಣವನ್ನು ಕಳೆದುಕೊಂಡಿದ್ದೇನೆ, ಆದರೆ ಏನೂ ಇಲ್ಲದೆ ರಾಜಕೀಯಕ್ಕೆ ಬಂದ ಶೋಭಾ ಎಷ್ಟು ಕೋಟಿ ಬೆಲೆ ಬಾಳುವ ಆಸ್ತಿ ಮಾಡಿದ್ದಾರೆ ಎಂದು ತನಿಖೆಯಾಗಲಿ ಎಂದಿದ್ದಾರೆ. ಆ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search