• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಮುಖಂಡ ಕೈ ಸವರಿದ್ದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಶಾಸಕಿ ದೂರು!

TNN Correspondent Posted On August 19, 2017
0


0
Shares
  • Share On Facebook
  • Tweet It

ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿಪಿ ರಮೇಶ್ ಅವರು ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ವೇದಿಕೆಯಲ್ಲಿ ಪಕ್ಕದಲ್ಲಿ ಕುಳಿತಿದ್ದ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯನವರ ಕೈಯನ್ನು ಸವರುತ್ತಿರುವ ದೃಶ್ಯವನ್ನು ಸಾಮಾಜಿಕ ತಾಣಗಳಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಅದಕ್ಕೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಮುಖಂಡರೂ ಆಗಿರುವ ರಮೇಶ್ ಅವರ ರಾಜೀನಾಮೆಗೆ ಬಿಜೆಪಿ ಆಗ್ರಹ ಪಡಿಸುತ್ತಿದೆ. ಇಲ್ಲಿರುವ ವಿಷಯ, ಸಾರ್ವಜನಿಕ ವೇದಿಕೆಗಳಲ್ಲಿ ಕುಳಿತುಕೊಳ್ಳುವ ಗಣ್ಯರು ತಮ್ಮ ನಡವಳಿಕೆಯ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕು ಎನ್ನುವುದು. ಹಿಂದಿನ ಕಾಲದಲ್ಲಿ ಮಾಧ್ಯಮಗಳು ಇಷ್ಟು ಬೆಳೆಯದೇ ಇದ್ದ ಸಮಯದಲ್ಲಿ ಗಣ್ಯರು ಬೋರಾಗಿ ಮಲಗಿದರೂ ನಡೆಯುತ್ತಿತ್ತು, ಆಕಳಿಸಿದರೂ ಆಗುತ್ತಿತ್ತು. ಕಾಲುಗಳನ್ನು ಅಲ್ಲಾಡಿಸುತ್ತಾ ಹಾರ್ಮೊನೀಯಂನಂತೆ ಬಾರಿಸಿದರೂ ಆಗುತ್ತಿತ್ತು. ಒಟ್ಟಿನಲ್ಲಿ ಏನು ಮಾಡಿದರೂ ಅದು ಪತ್ರಿಕೆಗಳಲ್ಲಿ ಬರುತ್ತಿರಲಿಲ್ಲ. ಕೇವಲ ವೇದಿಕೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಬಗ್ಗೆ ಮಾತ್ರ ವರದಿಗಾರರು ಬರೆದು ಹೋಗುತ್ತಿದ್ದರು.

ಆದರೆ ಈಗ ಕಾಲ ಬದಲಾಗಿದೆ. ಕ್ಯಾಮೆರಾಗಳು ಪತ್ರಕರ್ತರ ಹೆಚ್ಚಿನ ಕೆಲಸಗಳನ್ನು ಮಾಡುತ್ತವೆ. ಸುದ್ದಿಮನೆಗಳು ಏನಾದರೂ ಹೊಸತನ್ನು ತರಲು ವರದಿಗಾರರಿಗೆ ಪ್ರೇರೆಪಿಸುತ್ತವೆ. ಒಂದು ಪಕ್ಷದ ನಾಯಕರು ಮತ್ತೊಂದು ಪಕ್ಷದ ನಾಯಕರ ಹುಳಕನ್ನು ಎತ್ತಿ ತೋರಿಸಲು ಆಮಿಷ ಒಡ್ಡುವುದೂ ಇದೆ. ಆದ್ದರಿಂದ ಯಾವುದೇ ಪಕ್ಷದ ನಾಯಕನಾಗಿರಲಿ ಆತ ಬಹಿರಂಗ ವೇದಿಕೆಯಲ್ಲಿ ಕುಳಿತುಕೊಂಡಿರುವಾಗ ಎಷ್ಟು ಸಾಧ್ಯವೋ ಅಷ್ಟು ಸಭ್ಯತನ ತೋರಿಸಬೇಕು. ಅದರಲ್ಲಿಯೂ ಪಕ್ಕದಲ್ಲಿ ಹೆಣ್ಣೊಬ್ಬಳು ಕುಳಿತುಕೊಂಡಾಗ ಮೈಯೆಲ್ಲಾ ಕಣ್ಣಾಗಿರಬೇಕು. ಕಳೆದ ಬಾರಿ ಕೇರಳದಲ್ಲಿ ಸಿನೆಮಾ ನಟಿಯೊಬ್ಬಳು ಭಾಗವಹಿಸಿದ ರಾಜಕೀಯ ಸಮಾವೇಶವೊಂದರಲ್ಲಿ ಅಲ್ಲಿನ ರಾಜಕಾರಣಿಯೊಬ್ಬ ಆಕೆಯ ದೇಹದ ಭಾಗವನ್ನು ಸವರಿದ್ದು ಎಲ್ಲಾ ಕಡೆ ವಿಡಿಯೋ ವೈರಲ್ ಆಗಿತ್ತು.

ಇಲ್ಲಿ ಕೂಡ ಹಾಗೆ ಆಗಿದೆ, ವೀಣಾ ಅಚ್ಚಯ್ಯ, ವಿಡಿಯೋ ವೈರಲ್ ಆದ ನಂತರ ರಮೇಶ್ ಅವರೊಬ್ಬ ಸಂಸ್ಕೃತಿ ಮರೆತ ಮನುಷ್ಯ ಎನ್ನುವ ರೀತಿಯಲ್ಲಿ ನೋವು ತೋಡಿಕೊಂಡಿದ್ದಾರೆ. ಅದೇ ರಮೇಶ್ ಅವರು ವೀಣಾ ಮತ್ತು ತಾನು ಧರ್ಮಸ್ಥಳ ಪ್ರಕೃತಿ ಚಿಕಿತ್ಸಾಲಯದಲ್ಲಿ ಒಟ್ಟಿಗೆ ಚಿಕಿತ್ಸೆ ಪಡೆದುಕೊಂಡಿದ್ವಿ, ಅವರು ಸಣ್ಣವರಾಗಿದ್ದಾರಾ ಎಂದು ಮುಟ್ಟಿ ನೋಡಿದೆ ಎಂದಿದ್ದಾರೆ. ಅವರು ತನ್ನ ಸಹೋದರಿ ಸಮಾನ ಎಂದಿದ್ದಾರೆ. ಆದರೆ ಸತ್ಯ ಏನೇ ಇರಲಿ, ಟಿಪಿ ರಮೇಶ್ ಅವರು ತನ್ನ ಪಕ್ಕದಲ್ಲಿ ಕುಳಿತುಕೊಂಡದ್ದು ಓರ್ವ ವಿಧಾನ ಪರಿಷತ್ ಸದಸ್ಯೆ ಎನ್ನುವುದು ಮರೆಯಬಾರದಿತ್ತು. ಈಗ ಎಲ್ಲವೂ ಬಹಿರಂಗವಾದ ನಂತರ ಸಹೋದರಿ ಎನ್ನುವ ಅಸ್ತ್ರ ಪ್ರಯೋಗಿಸಿದರೆ ಆಗುತ್ತಾ? ನಮ್ಮ ರಾಜ್ಯದ ಜನರು ಭ್ರಷ್ಟಾಚಾರ ಮಾಡಿದ ರಾಜಕಾರಣಿಯನ್ನಾದರೂ ಕ್ಷಮಿಸುತ್ತಾರೆ, ಆದರೆ ಹೆಣ್ಣಿನ ಬಗ್ಗೆ ಈ ರೀತಿ ಮನಸ್ಥಿತಿ ಇರುವವರನ್ನಲ್ಲ ಎಂದು ಇತಿಹಾಸ ಹೇಳುತ್ತದೆ

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search