• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಮಾಡಿದ್ದ ನಾಯಿ “ಲೀನಾ” ಸಾವು!

Tulunadu News Posted On November 22, 2021
0


0
Shares
  • Share On Facebook
  • Tweet It

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ.

ಮಂಗಳೂರು ಏರ್‌ಪೋರ್ಟ್‌ ಆವರಣದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ಶ್ವಾನ ಮೃತಪಟ್ಟಿದೆ.8 ವರ್ಷದಿಂದ ಸಿಐಎಸ್‌ಎಫ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೀನಾ ಹೆಸರಿನ ಲ್ಯಾಬ್ರಡಾರ್ ನಾಯಿ ಕಿಡ್ನಿ ವೈಫಲ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಗೌರವದೊಂದಿಗೆ ಮಂಗಳೂರು ಹಳೇ ಏರ್‌ರ್ಪೋರ್ಟ್ ಆವರಣದಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜೂನ್ 1 ರಿಂದ ಏರ್ಪೋರ್ಟ್ ಭದ್ರತಾ ಸೇವೆಯಿಂದ ಲೀನಾ ಮುಕ್ತಗೊಂಡು ಸಿಐಎಸ್‌ಎಫ್ ಪಡೆಯ ಆರೈಕೆಯಲ್ಲಿತ್ತು. ಲಿನಾಗೆ ಆಹಾರ ಮತ್ತು ಔಷಧಿಗಳ ವೆಚ್ಚದಂತಹ ಎಲ್ಲಾ ಅಗತ್ಯ ಸೌಕರ್ಯಗಳನ್ನು ವಿಮಾನ ನಿಲ್ದಾಣದ ನಿರ್ವಾಹಕರು ಒದಗಿಸಿದ್ದಾರೆ ಎಂದು ಪ್ರಕಟಣೆಯೊಂದರಲ್ಲಿ ತಿಳಿದು ಬಂದಿದೆ. ಲಿನಾ ನಿರಂತರವಾಗಿ ಪಶುವೈದ್ಯರ ನಿಗಾದಲ್ಲಿತ್ತು. ನವೆಂಬರ್ 16 ರಿಂದ ಲಿನಾ ಸಾಮಾನ್ಯ ಆಹಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ ಅದಕ್ಕೆ ಗ್ಲೂಕೋಸ್ ನೀಡಲಾಗುತಿತ್ತು. ಆದ್ರೆ ನವೆಂಬರ್ 21ರ ಸಂಜೆ ಕೊನೆಯುಸಿರೆಳೆದಿದೆ. ಸ್ಫೋಟಕ ಪತ್ತೆ ಬಗ್ಗೆ ತರಬೇತಿ ಪಡೆದಿದ್ದ ಲೀನಾ ಮಂಗಳೂರು ಏರ್‌ಪೋರ್ಟ್‌ ನಲ್ಲಿ 2020 ರ ಜನವರಿ 20ರಂದು ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆ ಮಾಡಿತ್ತು.

ಮಂಗಳೂರಿನ ಸಿಐಎಸ್‌ಎಫ್ ಕಚೇರಿ ಆವರಣದಲ್ಲಿ ಡಿಟೆಕ್ಟಿವ್ ಲೀನಾಗೆ ಅಧಿಕಾರಿಗಳಿಂದ ಅಂತಿಮ ನಮನ ಸಲ್ಲಿಸಲಾಗಿದ್ದು ಸಿಐಎಸ್‌ಎಫ್ ಸಕಲ ಗೌರವದೊಂದಿಗೆ ಮಂಗಳೂರು ಹಳೆ ಏರ್ಪೋರ್ಟ್ ಆವರಣದಲ್ಲಿ ಲೀನಾ ಅಂತ್ಯಕ್ರಿಯೆ ನೆರವೇರಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search