• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಾದಕ ವ್ಯಸನಿಯಿಂದ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ಮನವಿ

Tulunadu News Posted On December 27, 2021
0


0
Shares
  • Share On Facebook
  • Tweet It

ಕ್ರಿಶ್ಚಿಯನ್ ಯುವತಿಯೊಬ್ಬಳಿಗೆ ಮಾದಕ ದೃವ್ಯ ನೀಡಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಶ್ವಹಿಂದೂಪರಿಷತ್ ಗೆ ದೂರು ನೀಡಿದ್ದು, ತನ್ನ ಮಗಳನ್ನು ರಕ್ಷಣೆ ಮಾಡಿ ಎಂದು ತಾಯಿ ಮನವಿ ಮಾಡಿದ್ದಾರೆ.

ಯುವತಿ ಬಿಜೈ ನ ನಿವಾಸಿಯಾಗಿದ್ದು, ಕಾಲೇಜು ಓದುತ್ತಿರುವ ಸಂದರ್ಭ ಮಾದಕ ವಸ್ತುಗಳ ಚಟ ಅಂಟಿಸಿಕೊಂಡಿದ್ದಳು ಎಂದು ಹೇಳಲಾಗಿದ್ದು, ಕಳೆದ ಮೂರು ವರ್ಷಗಳಿಂದ ಆರೋಪಿ ಕೃಷ್ಣಾಪುರದ ಮೊಹಮ್ಮದ್ ಷರೀಫ್ ಸಿದ್ದಿಕ್ ಎಂಬಾತ ಯುವತಿಗೆ ಮಾದಕ ದ್ರವ್ಯ ನೀಡಿ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಯುವತಿ ತಾಯಿ ಆರೋಪಿಸಿದ್ದಾರೆ.ಅಲ್ಲದೆ ಇದೀಗ ತನ್ನ ಮಗಳ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ವಿಎಚ್ ಪಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆ ನೀಡಿರುವ ಮನವಿ ಪತ್ರದಲ್ಲಿ ಸಿದ್ದಿಕ್ ನನ್ನ ಮಗಳನ್ನು ತನ್ನ ಮನೆಯಿಂದ ಕರೆದುಕೊಂಡು ಹೋಗುತ್ತಿದ್ದ. ತನ್ನ ಸ್ನೇಹಿತರೊಂದಿಗೆ ಸೇರಿ ದಿನಗಟ್ಟಲೆ ಆಕೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದ. ನಾನು ಪೊಲೀಸರಿಗೆ ಹಾಗೂ ನಮ್ಮ ಧಾರ್ಮಿಕ ಮುಖಂಡರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನನ್ನ ಮಾಹಿತಿಯ ಪ್ರಕಾರ, ಸಿದ್ದಿಕ್ ಈಗಾಗಲೇ ಮೂರು ಮದುವೆಯಾಗಿದ್ದಾನೆ ಮತ್ತು ಅವನು ನನ್ನ ಮಗಳ ಜೀವನವನ್ನು ಹಾಳುಮಾಡಿದ್ದಾನೆ ಎಂದು ತಿಳಿಸಿದ್ದಾರೆ. ತನ್ನ ಮತ್ತು ಮಗಳನ್ನು ಸಿದ್ದಿಕ್‌ನಿಂದ ರಕ್ಷಿಸಲು ಮಹಿಳೆ ವಿಶ್ವ ಹಿಂದೂ ಪರಿಷತ್‌ನ ಸಹಾಯವನ್ನು ಕೋರಿದ್ದಾಳೆ.

ವಿಎಚ್ ಪಿಗೆ ಮನವಿ ಮಾಡಿದ ಹಿನ್ನಲೆ ವಿಎಚ್ ಪಿ ಮುಖಂಡರಾದ ಶರಣ್ ಪಂಪ್ ವೆಲ್ ಯುವತಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನಲೆ ಪ್ರಕರಣದ ಅರಿವು ಪಡೆದ ಉರ್ವಾ ಪೊಲೀಸರು ಸಿದ್ದಿಕ್ ನನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search