• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!

Tulunadu News Posted On June 8, 2023
0


0
Shares
  • Share On Facebook
  • Tweet It

ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.

ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ.ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿಯೆ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.

ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ.ಅಶ್ವಿನಿಯ ತಾಯಿ ಮಗಳನ್ನ ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.

ಹಲವು ಸಂಕಷ್ಟಗೊಳಗಾದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
Tulunadu News September 10, 2025
ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
Tulunadu News September 10, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
  • Popular Posts

    • 1
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • 2
      ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • 3
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 4
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 5
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!

  • Privacy Policy
  • Contact
© Tulunadu Infomedia.

Press enter/return to begin your search