• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

Tulunadu News Posted On June 29, 2023


  • Share On Facebook
  • Tweet It

ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ ಬೀಚ್ ನಲ್ಲಿ ನಡೆದಿದೆ.
ಬೆಂಗಳೂರು ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಈತನನ್ನು ಮೊಗವೀರಪಟ್ನ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರಾವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಹಾಗೂ ಸ್ಥಳದಲ್ಲಿ ಕರ್ತವ್ಯ ನಿರತ ಗೃಹರಕ್ಷಕದಳ ಸಿಬ್ಬಂದಿ ಪ್ರಸಾದ್ ಸುವರ್ಣ ಸೇರಿ ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ಸಂದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಈ ನಡುವೆ ಸಮುದ್ರದ ನೀರಿನಲ್ಲಿ ಆಡಲು ತೊಡಗಿದ್ದ ಮೂವರ ಪೈಕಿ ನಿಝಾಂ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search