• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಚಿವರ ಮಾಧ್ಯಮ ಸಂಯೋಜಕನಿಂದ ಸೂಲಿಬೆಲೆಯವರಿಗೆ ಬೆದರಿಕೆ!

Tulunadu News Posted On July 12, 2023
0


0
Shares
  • Share On Facebook
  • Tweet It

ಇತ್ತೀಚಿಗೆ ತಿ ನರಸೀಪುರದಲ್ಲಿ ಹಿಂದೂ ಯುವಕ ವೇಣುಗೋಪಾಲನ ಹತ್ಯೆಯ ಆರೋಪಿಗಳು ಸಚಿವ ಮಹದೇವಪ್ಪನವರ ಮಗನ ಒಡನಾಡಿಗಳು ಎಂಬ ಮಾತು ಕೇಳಿಬಂದಿತ್ತು. ಈಗ ಸಚಿವ ಮಹದೇವಪ್ಪ ತಮ್ಮ ಮಾಧ್ಯಮ ಸಂಯೋಜಕ ನೇಮಕಾತಿಯಲ್ಲಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.

ಸಚಿವರ ಮಾಧ್ಯಮ ಸಂಯೋಜಕನಾಗಿ ನೇಮಕವಾಗಿರುವ ರಮೇಶ ಎಚ್ ಕೆ ಎಂಬಾತ ತನ್ನ ಫೇಸ್‌ಬುಕ್‌ ಮತ್ತು ಟ್ವಿಟರ್ ಖಾತೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಚಿಂತಕ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆದಿಯಾಗಿ ಸಮಾಜದ ಅನೇಕ ಗಣ್ಯವ್ಯಕ್ತಿಗಳ ಮೇಲೆ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಹಾಕಿದ್ದಾನೆ.

ಮಾಧ್ಯಮ ಸಂಯೋಜಕನಾಗಿ ಸರ್ಕಾರಿ ವೆಚ್ಚದಲ್ಲಿ ಸಂಬಳ ಪಡೆಯುವ ಈತ ಹಿರಿಯ ಮುತ್ಸದ್ದಿ ದೇವೇಗೌಡರ ಕುರಿತು ” ಈತನಿಗೆ ವಯಸ್ಸಾಗಿದೆ, ತಲೆಯಲ್ಲಿ ಕೂದಲೂ ಬುದ್ಧಿಯೂ ಇಲ್ಲ” ಎಂದು ತುಚ್ಛವಾಗಿ ಬರೆದಿದ್ದಾನೆ. ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಕುರಿತು ಅವಾಚ್ಯವಾಗಿ ನಿಂದಿಸಿದ್ದಲ್ಲದೇ “ನಿನಗೂ ಖಾರದ ಪುಡಿ ಫಿಕ್ಸ್” ಎಂದೆಲ್ಲಾ ಜೀವ ಬೆದರಿಕೆ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆಯವರ ಅಭಿಮಾನಿಯೊಬ್ಬ ಬೆಂಗಳೂರಿನಲ್ಲಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ಇಂತಹ ಸಮಾಜ ಘಾತುಕ ಕಿಡಿಗೇಡಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಅಷ್ಟೇಅಲ್ಲ ಪಬ್ಲಿಕ್ ಟಿವಿಯ ರಂಗನಾಥ್ ಅವರ ಕುರಿತಂತೆಯೂ ಈತ ಕೆಟ್ಟದಾಗಿ ಪೋಸ್ಟ್ ಹಾಕಿದ್ದಾನೆ.

ಸಚಿವರ ಮಾಧ್ಯಮ ಸಂಯೋಜಕನೊಬ್ಬನಿಗೆ ಇರಬೇಕಾದ ಯಾವ ಯೋಗ್ಯತೆಯೂ ಇಲ್ಲದ ಈ ರಮೇಶನನ್ನು ಕೂಡಲೇ ಕೆಲಸದಿಂದ ಉಚ್ಚಾಟಿಸಿ ಬಂಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಜನ ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಇಂತಹ ಅಯೋಗ್ಯರಿಗೇ ಅದು ಹೇಗೆ ಸರ್ಕಾರದ ಆಯಕಟ್ಟಿನ ಸ್ಥಳಗಳಲ್ಲಿ ಕೆಲಸ ಸಿಗುತ್ತವೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ. ಮಹದೇವಪ್ಪನವರು ಇಂತಹ ಬಾಯಿ ಹರುಕನನ್ನು ಹುದ್ದೆಯಿಂದ ಕೆಳಗಿಳಿಸಿ ತಮ್ಮ ಮರ್ಯಾದೆಯನ್ನು ಉಳಿಸಿಕೊಳ್ಳುತ್ತಾರಾ? ನೋಡಬೇಕು.

0
Shares
  • Share On Facebook
  • Tweet It




Trending Now
ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
Tulunadu News September 10, 2025
ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
Tulunadu News September 10, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
  • Popular Posts

    • 1
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • 2
      ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • 3
      ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • 4
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 5
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!

  • Privacy Policy
  • Contact
© Tulunadu Infomedia.

Press enter/return to begin your search