• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಧಾಮೂರ್ತಿಯವರ ಸ್ಪೂನ್ ಮತ್ತು ಚೇತನ್ ಟೀಕೆ!

Tulunadu News Posted On July 28, 2023
0


0
Shares
  • Share On Facebook
  • Tweet It

ಒಂದೆರಡು ಸಿನೆಮಾಗಳು ಹಿಟ್ ಆದ ಕೂಡಲೇ ಅದರಲ್ಲಿ ಅಭಿನಯಿಸಿದ ವ್ಯಕ್ತಿಗಳು ಹೇಳಿದ್ದು ವೇದವಾಕ್ಯವಾಗುವುದಿಲ್ಲ. ಕನ್ನಡದಲ್ಲಿ ಒಬ್ಬ ನಟ ಚೇತನ್ ಎನ್ನುವ ವ್ಯಕ್ತಿ ಇದ್ದಾರೆ. ಅವರಿಗೆ ಆಗಾಗ ಏನಾದರೂ ಹೇಳಿಕೆ ನೀಡದಿದ್ದರೆ ತಿಂದ ಅನ್ನ ಅರಗುವುದಿಲ್ಲ. ಅವರು ಈಗ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರೂ, ಸ್ನೇಹಮಯಿ ವ್ಯಕ್ತಿತ್ವದ ಸುಧಾಮೂರ್ತಿಯವರನ್ನು ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್ ನಿಂದ ಗುರುತಿಸ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಮುಖ್ಯ ಕಾರಣ ಸುಧಾಮೂರ್ತಿಯವರು ಯೂಟ್ಯೂಬ್ ಚಾನೆಲ್ ಒಂದರ ಸಂಚಿಕೆಯಲ್ಲಿ “ನಾನೊಬ್ಬಳು ಶುದ್ಧ ಸಸ್ಯಾಹಾರಿ, ಮೊಟ್ಟೆ ಸಹಿತ ಯಾವುದೇ ಮಾಂಸಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಸಸ್ಯಹಾರ- ಮಾಂಸಹಾರ ಭಕ್ಷ್ಯಗಳಿಗೆ ಒಂದೇ ಚಮಚಾ ಬಳಸುತ್ತಾರೆಯೇ ಎಂಬ ಆತಂಕ ನನ್ನ ಮನಸ್ಸನ್ನು ಕಾಡುತ್ತದೆ” ಎಂದು ಹೇಳಿದ್ದರು. ” ನಾನು ವಿದೇಶಕ್ಕೆ ಹೋದಾಗ ಅಲ್ಲಿ ಸಸ್ಯಹಾರಿ ರೆಸ್ಟೋರೆಂಟ್ ಗಳನ್ನು ಹುಡುಕುತ್ತೇನೆ. ಮನೆಯ ಊಟವನ್ನೇ ಹೆಚ್ಚು ಇಷ್ಟಪಡುತ್ತೇನೆ. ಪ್ರಯಾಣ ಮಾಡುವಾಗ ಮನೆಯಲ್ಲಿ ತಯಾರಿಸಿದ ಆಹಾರವನ್ನೇ ತೆಗೆದುಕೊಂಡು ಹೋಗುತ್ತೇನೆ” ಎಂದು ಕೂಡ ಹೇಳಿದ್ದಾರೆ.
ಇದರಲ್ಲಿ ನಟ ಚೇತನ್ ಅವರಿಗೆ ತಪ್ಪು ಕಾಣಿಸಿದೆ. ಅದಕ್ಕಾಗಿ ಸುಧಾಮೂರ್ತಿಯವರನ್ನು ಟೀಕಿಸಿದ್ದಾರೆ. ಇವತ್ತಿಗೂ ಎಷ್ಟೋ ಜನ ಸುಧಾಮೂರ್ತಿಯವರ ಈ ನಿಲುವನ್ನು ಅನುಸರಿಸುತ್ತಿದ್ದಾರೆ. ಗೋಮಾಂಸ ನಮ್ಮ ಆಹಾರ ಪದ್ಧತಿ ಎಂದು ಹೇಳಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ದಕ್ಕೆ ತರುವವರ ಬಗ್ಗೆ ಕೆಲವರಿಗೆ ಏನೂ ಅನಿಸುವುದಿಲ್ಲ. ಅದೇ ಸುಧಾಮೂರ್ತಿಯವರು ತಾವು ಮಾಂಸಹಾರಕ್ಕೆ ಬಳಸಿರಬಹುದಾದ ಸ್ಪೂನ್ ಬಳಸಲು ಬಯಸುವುದಿಲ್ಲ ಎಂದು ಹೇಳಿದ್ದು ಚೇತನ್ ಅಂತವರಿಗೆ ತಪ್ಪು ಎಂದು ಅನಿಸುತ್ತದೆ. ಸುಧಾಮೂರ್ತಿಯವರು ಯಾವತ್ತೂ ಪ್ರಚಾರದ ಹಿಂದೆ ಹೋದವರಲ್ಲ. ಅವರು ಅಸಂಖ್ಯಾತ ಜನರಿಗೆ ತಮ್ಮ ಫೌಂಡೇಶನ್ ಮೂಲಕ ಸಾಕಷ್ಟು ಸಹಾಯ ಹಸ್ತ ಚಾಚಿದ್ದಾರೆ. ಶಾಲೆ, ಕಾಲೇಜುಗಳ ಅಭಿವೃದ್ಧಿಗೆ ಯೋಗ್ಯ ನೆರವು ನೀಡಿದ್ದಾರೆ. ಅವರ ಒಳ್ಳೆಯ ಕಾರ್ಯಗಳಿಂದ ಪ್ರಚಾರದಲ್ಲಿ ಇದ್ದಾರೆಯೇ ಹೊರತು ಒಂದೆರಡು ಸಿನೆಮಾ ಮಾಡಿ ಅಲ್ಲ ಎಂದು ಚೇತನ್ ತರದವರು ಅಂದುಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search