• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಾಡುಹಗಲೇ ಶಾಲಾ ಕೊಠಡಿಯೊಳಗೆ ಪ್ರಾಂಶುಪಾಲನಿಂದ ಅತ್ಯಾಚಾರ

Tulunadu News Posted On August 5, 2023
0


0
Shares
  • Share On Facebook
  • Tweet It

ನರಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಹೆಣ್ಣುಮಗುವೊಂದನ್ನು ಅತ್ಯಾಚಾರ ಮಾಡಿದ ಖಾಸಗಿ ಶಾಲೆಯ ಪ್ರಾಂಶುಪಾಲನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಬಾಲಕಿ ಡಿಸ್ಲೆಕ್ಸಿಯಾ ಎನ್ನುವ ಕಾಯಿಲೆಯಿಂದ ಬಳಲುತ್ತಿದ್ದಳು. ಆದ್ದರಿಂದ ಅವಳು ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಳು. ಹತ್ತು ವರ್ಷವಾಗಿದ್ದರೂ ಇನ್ನು ಎರಡನೇ ತರಗತಿಯಲ್ಲಿಯೇ ಕಲಿಯುತ್ತಿದ್ದಳು. ಇದನ್ನು ಗಮನಿಸುತ್ತಿದ್ದ ಶಾಲೆಯ ಪ್ರಿನ್ಸಿಪಾಲ್ ಲ್ಯಾಂಬರ್ಟ್ ಪುಷ್ಪರಾಜ್ ಆಕೆಯನ್ನು ಬೆಳಿಗ್ಗೆ 11. 30 ರ ಸುಮಾರಿಗೆ ಶಾಲೆಯ ಖಾಲಿ ಕೊಠಡಿಯೊಳಗೆ ಕರೆದುಕೊಂಡು ಹೋಗಿ ಕೈಗೆ ಕೇಕ್ ಕೊಟ್ಟು ಅತ್ಯಾಚಾರ ಮಾಡಿದ್ದಾನೆ. ಗುರುವಾರ ಮಧ್ಯಾಹ್ನ 3.30 ರ ಸುಮಾರಿಗೆ ಶಾಲೆ ಮುಗಿಸಿ ಮನೆಗೆ ಬಂದ ಬಾಲಕಿಗೆ ತಾಯಿ ಸ್ನಾನ ಮಾಡಿಸಿ ಕರೆತರುವಾಗ ಗುಪ್ತಾಂಗದಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಈ ಬಗ್ಗೆ ತಾಯಿ ಕೇಳಿದಾಗ, ಕೊಠಡಿಯೊಳಗೆ ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾಳೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ವರ್ತೂರು ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜನನ್ನು ಬಂಧಿಸಿದ್ದಾರೆ. ಆರೋಪಿ ಈ ಹಿಂದೆ ಶಾಲೆಯ ಬೇರೆ ವಿದ್ಯಾರ್ಥಿನಿಯರಿಗೆ ಹೀಗೆ ಲೈಂಗಿಕ ಕಿರುಕುಳ ನೀಡಿದ್ದಾನೆಯೇ ಎಂದು ತನಿಖೆ ನಡೆಸಲು ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ. ಆರೋಪಿ ಪ್ರಾಂಶುಪಾಲನಿಗೆ ಸದ್ಯ 65 ವರ್ಷ ವಯಸ್ಸಾಗಿದ್ದು, ಇಂತವನ ಕೈಯಲ್ಲಿ ಮಕ್ಕಳ ಭವಿಷ್ಯವನ್ನು ಕೊಟ್ಟಿರುವುದಕ್ಕೆ ಅಲ್ಲಿ ಕಲಿಯುತ್ತಿರುವ ಇತರ ಮಕ್ಕಳ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search