• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ಷಯ್ ಕುಮಾರ್ ಇನ್ನು ಭಾರತೀಯ ನಾಗರಿಕ!

Tulunadu News Posted On August 15, 2023
0


0
Shares
  • Share On Facebook
  • Tweet It

ಭಾರತೀಯ ಚಿತ್ರರಂಗದ ಪ್ರಖ್ಯಾತ ನಟ ಅಕ್ಷಯ್ ಕುಮಾರ್ ಅವರು ಕೊನೆಗೂ ಭಾರತೀಯ ಪೌರತ್ವವನ್ನು ಪಡೆದುಕೊಂಡಿದ್ದಾರೆ. ದೇಶಭಕ್ತಿಯ ಕಥೆಗಳುಳ್ಳ, ಸೈನಿಕರ ಜೀವನದ ಮೇಲೆ ರಚಿತವಾದ, ಸ್ವಾತಂತ್ರ್ಯ ಯೋಧರ ಮೇಲೆ ಚಿತ್ರಿತವಾದ, ಭರತಖಂಡದ ಅನೇಕ ಚಕ್ರವರ್ತಿಗಳ ಹೋರಾಟದ ಬದುಕಿನ ಸಾರ ಹೊಂದಿರುವ ಅನೇಕ ಚಲನಚಿತ್ರಗಳಲ್ಲಿ ನಾಯಕನಟನಾಗಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ. ಆದರೂ ಅವರೇ ಒಪ್ಪಿಕೊಂಡಂತೆ ಕೆನಡಾ ದೇಶದ ಪ್ರಜೆಯಾಗಿದ್ದ ಕಾರಣ ಆಗಾಗ ಮಾಧ್ಯಮಗಳಲ್ಲಿ, ಸೋಶಿಯಲ್ ಮೀಡಿಯಾಗಳಲ್ಲಿ ಕೆನಡಾ ಕುಮಾರ್ ಎಂದು ಟ್ರೋಲ್ ಗೆ ಒಳಗಾಗುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು ಆದಾಯ ತೆರಿಗೆ ಪಾವತಿಸುವ ನಟನಾಗಿದ್ದರೂ ಅವರ ಕೆನಡಾ ಪೌರತ್ವದಿಂದಾಗಿ ಅನೇಕ ಬಾರಿ ಮುಜುಗರಕ್ಕೆ ಒಳಗಾಗಬೇಕಾಗುತ್ತಿತ್ತು.

ಕಾಕತಾಳೀಯವೋ ಎನ್ನುವಂತೆ ಅವರಿಗೆ ಭಾರತದ 77 ನೇ ಸ್ವಾತಂತ್ರ್ಯದಿನದಂದೇ ಭಾರತೀಯ ಪೌರತ್ವ ಸಿಕ್ಕಿದೆ. ಅದನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ “ದಿಲ್ ಔರ್ ಸಿಟಿಜನ್ ದೋನೋ ಹಿಂದೂಸ್ತಾನಿ, ಹ್ಯಾಪಿ ಇಂಡಿಪೆಂಡೆನ್ಸ್ ಡೇ, ಜೈ ಹಿಂದ್” ಎಂದು ಬರೆದಿದ್ದಾರೆ. ಸದ್ಯ ಓಮೈಗಾರ್ಡ್ -2 ಯಶಸ್ಸಿನಲ್ಲಿರುವ ಅಕ್ಷಯ್ ಕುಮಾರ್ ಕೈಯಲ್ಲಿ ಪ್ರತಿ ವರ್ಷ ಕನಿಷ್ಟ 4 – 5 ಸಿನೆಮಾಗಳು ಇದ್ದೇ ಇರುತ್ತವೆ!

0
Shares
  • Share On Facebook
  • Tweet It




Trending Now
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
Tulunadu News September 6, 2025
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
Tulunadu News September 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
    • ಜಿಎಸ್ ಟಿ ಮಾಸ್ಟರ್ ಸ್ಟೋಕ್: ಬಿಹಾರ ಚುನಾವಣೆಯಲ್ಲಿ ಎನ್ ಡಿಎಗೆ ಲಾಭ ಆಗಲಿದೆಯಾ?
    • ಕ್ಯಾಬಿನೆಟಿನಲ್ಲಿ ಚರ್ಚಿಸಿ ಧರ್ಮಸ್ಥಳ ಕೇಸ್ ನಿರ್ಧಾರ: ಸಂತ ನಿಯೋಗಕ್ಕೆ ಅಮಿತ್ ಶಾ ಭರವಸೆ!
    • ಬೆಂಗಳೂರು ಕಾಲ್ತುಳಿತ : 3 ತಿಂಗಳ ಬಳಿಕ ಕೊಹ್ಲಿ ಸಂತಾಪ!
    • 39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
  • Popular Posts

    • 1
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • 2
      ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • 3
      ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • 4
      ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • 5
      ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ

  • Privacy Policy
  • Contact
© Tulunadu Infomedia.

Press enter/return to begin your search