• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ವಿಕ್ರಮ್ ಲ್ಯಾಂಡರ್!

Tulunadu News Posted On August 24, 2023
0


0
Shares
  • Share On Facebook
  • Tweet It

ಇಡೀ ಜಗತ್ತು ಬುಧವಾರ ಚಂದ್ರಯಾನ -3 ಕ್ಕೆ ಸಾಕ್ಷಿಯಾಯಿತು. ಭಾರತದ ಮೂಲೆಮೂಲೆಗಳಲ್ಲಿ ಇದರ ಸಂಭ್ರಮಾಚರಣೆ ನಡೆಯಿತು. ಭಾರತದ ಜನಸಾಮಾನ್ಯನಿಂದ ಹಿಡಿದು ತಾರೆಯರ ತನಕ ಎಲ್ಲರೂ ಇಸ್ರೋವನ್ನು ಮತ್ತು ಇದರ ಯಶಸ್ಸಿನ ಹಿಂದಿರುವ ಪ್ರಮುಖರನ್ನು ಕೊಂಡಾಡಿದರು. ಈ ನಡುವೆ ಇದರ ಕ್ರೆಡಿಟ್ ಪಡೆಯುವ ಕೆಲಸದಲ್ಲಿಯೂ ರಾಜಕೀಯ ನಡೆದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ನಾವು ಗಮನಿಸಿದ್ದೇವೆ.
ಈಗ ವಿಷಯ ಏನೆಂದರೆ ವಿಕ್ರಮ್ ಲ್ಯಾಂಡರ್ ಅನ್ನು ನೀವು ಬಹಳ ಸೂಕ್ಷ್ಮವಾಗಿ ಗಮನಿಸಿರಬಹುದು. ಅದೇ ಹೊತ್ತಿಗೆ ತಿರುಪತಿ ತಿಮ್ಮಪ್ಪನ ಫೋಟೋವನ್ನು ಮನದಲ್ಲಿ ಕಲ್ಪಿಸಿಕೊಳ್ಳಿ. ಬೇಕಾದರೆ ನಾವು ಈಗ ಪೋಸ್ಟ್ ಮಾಡಿದ ಫೋಟೋವನ್ನು ಕಣ್ಣಾರೆ ನೋಡಿ. ತಿರುಪತಿ ತಿಮ್ಮಪ್ಪನ ಕಿರೀಟ ಹಾಗೂ ವಿಕ್ರಮ್ ಲ್ಯಾಂಡರ್ ಬಹುತೇಕ ಒಂದೇ ರೀತಿಯಲ್ಲಿ ಕಾಣುತ್ತವೆ. ನಾಸ್ತಿಕರು ಇದನ್ನು ಅತಿರೇಕದ ಹೋಲಿಕೆ ಎಂದು ಬಣ್ಣಿಸಬಹುದು. ಆದರೆ ದೈವಿಕ ದೃಷ್ಟಿಯಿಂದ ನೋಡಿದರೆ ಇದೆರಡು ಒಂದೇ ತರಹ ಕಾಣುವುದರಲ್ಲಿ ಸಂಶಯವಿಲ್ಲ. ಚಂದ್ರಯಾನ -3 ಉಡಾವಣೆಯ ಮೊದಲು ಇಸ್ರೋ ಪ್ರಮುಖರು ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ಆರ್ಶೀವಾದವನ್ನು ಕೋರಿದ್ದರು. ಅದನ್ನು ಕೆಲವು ಎಡಪಂಥಿಯ ಚಿಂತಕರು ಟೀಕಿಸಿದ್ದರು. ಚಂದ್ರಯಾನ-3 ತಿಮ್ಮಪ್ಪನ ಪಾದಕ್ಕೆ ಎಂದು ಹಂಗಿಸಿದ್ದರು. ಕೊನೆಗೂ ಚಂದ್ರಯಾನ-3 ಯಶಸ್ಸಾಗುವುದರೊಂದಿಗೆ ದೇವರ ಆರ್ಶೀವಾದ ಈ ಯೋಜನೆಯ ಮೇಲಿತ್ತು ಎಂದು ಆಸ್ತಿಕರು ಧೈರ್ಯದಿಂದ ಹೇಳಬಹುದು. ಅದೇ ರೀತಿ ಟೀಕಾಕಾರರ ಬಾಯಿಯನ್ನು ಮುಚ್ಚಿಸಬಹುದು. ಚಂದ್ರಯಾನ -3 ಯಶಸ್ವಿಯಾಗುವ ಮೊದಲು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search