• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡದಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾದ ಸುಧೀಂದ್ರ!

Tulunadu News Posted On August 24, 2023
0


0
Shares
  • Share On Facebook
  • Tweet It

ಕನ್ನಡ ಮಾಧ್ಯಮದಲ್ಲಿ ಮಕ್ಕಳು ಕಲಿತರೆ ಪ್ರಯೋಜನ ಏನು ಎಂದು ಯೋಚಿಸುವ ಪೋಷಕರೇ ಇವತ್ತಿನ ದಿನಗಳಲ್ಲಿ ಹೆಚ್ಚು. ಆದ್ದರಿಂದ ಕೆಳಮಧ್ಯಮ ವರ್ಗದ ಪೋಷಕರು ಕೂಡ ಎಷ್ಟೇ ಕಷ್ಟವಾದರೂ ಸಾಲಸೋಲ ಮಾಡಿ ಮಕ್ಕಳನ್ನು ಇಂಗ್ಲೀಷ್ ಮೀಡಿಯಂಗೆ ಸೇರಿಸುತ್ತಾರೆ. ಅದರಲ್ಲಿಯೂ ದೊಡ್ಡ ಹೆಸರಿರುವ ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಕಲಿತರೆ ಮಾತ್ರ ಜೀವನದಲ್ಲಿ ದೊಡ್ಡ ವ್ಯಕ್ತಿಯಾಗಲು ಸಾಧ್ಯ ಎಂದು ನಂಬಿರುವ ಪೋಷಕ ವರ್ಗ ನಮ್ಮಲ್ಲಿ ದೊಡ್ಡದಿದೆ. ಆದರೆ ಬಾಲ್ಯದಲ್ಲಿ ಕಲಿಯುವ ವಿದ್ಯಾಭ್ಯಾಸಕ್ಕೂ ನಮ್ಮ ಸಾಧನೆಗೂ ತಾಳೆ ಹಾಕಲು ಸಾಧ್ಯವಿಲ್ಲ ಎಂದು ಇಸ್ರೋ ವಿಜ್ಞಾನಿಯೊಬ್ಬರು ತೋರಿಸಿಕೊಟ್ಟಿದ್ದಾರೆ. ಅವರ ಪೂರ್ಣ ಹೆಸರು ಸುಧೀಂದ್ರ ವೆಂಕಣ್ಣಚಾರ್ಯ ಬಿಂದಗಿ.
ಇವರು ಮೂಲತ: ಗದಗ ಜಿಲ್ಲೆಯ ಸೊರಟೂರು ಗ್ರಾಮದವರು. ಗದಗ ನಗರದಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದ್ದಾರೆ. ಶಾಲಾ ಹಂತದಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ್ದು, ವಿಷಯಗಳನ್ನು ಆಳವಾಗಿ ಮನವರಿಕೆ ಮಾಡಲು ಸಹಾಯವಾಯಿತು ಎಂದು ಹೇಳುವ ಇವರು ಪ್ರಾಥಮಿಕ ಶಿಕ್ಷಣ ಕನ್ನಡದಲ್ಲಿಯೇ ಆಗಬೇಕು ಎಂದು ಪ್ರತಿಪಾದಿಸುತ್ತಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ಬಿಟೆಕ್ ಪದವಿಯನ್ನು ಪಡೆದು 1986 ರಲ್ಲಿ ಇಸ್ರೋ ಸೇರಿಕೊಂಡಿದ್ದರು. ಜುಲೈ 14 ರಂದು ಚಂದ್ರಯಾನ -3 ಉಡಾವಣೆಯಾದ ವಾರದ ಬಳಿಕ ಸುಧೀಂದ್ರ ಇಸ್ರೋದಲ್ಲಿ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ.
ಗದಗದ ವೀರನಾರಾಯಣ ದೇವಸ್ಥಾನದ ಅಗ್ರಹಾರದಲ್ಲಿ ಬೆಳೆದಿರುವ ಸುಧೀಂದ್ರ ಅವರಿಗೆ ದೈವ ಬಲವೂ ಸಾಥ್ ನೀಡಿದೆ. ದೇವಸ್ಥಾನದ ವಾತಾವರಣ ಬದುಕಿನಲ್ಲಿ ಶಿಸ್ತು ಕಲಿಸಿತು ಎಂದು ಸುಧೀಂದ್ರ ಹೇಳುತ್ತಾರೆ. ಒಟ್ಟಿನಲ್ಲಿ ಚಂದ್ರಯಾನದ ಯಶಸ್ಸಿನಲ್ಲಿ ಸುಧೀಂದ್ರ ಅವರ ಪಾಲು ಕೂಡ ಇದೆ. ಆದರೆ ಈ ಸಾಧನೆಗೆ ಬಾಲ್ಯದ ಕನ್ನಡ ಶಿಕ್ಷಣ ಪೂರಕವಾಯಿತು ಎನ್ನುವುದು ಮಾತ್ರ ಕನ್ನಡಿಗರಿಗೂ ಹೆಮ್ಮೆಯ ಸಂಗತಿ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search