• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆ ಫೋಟೋ ಶೇರ್ ಮಾಡಿ ಸಂಭ್ರಮಿಸಿದ ಸುಮಲತಾ!

Tulunadu News Posted On August 25, 2023
0


0
Shares
  • Share On Facebook
  • Tweet It

ಬೆಲೆಕಟ್ಟಲಾಗದ ಫೋಟೋ ಇವತ್ತು ಸಿಕ್ಕಿತು ಎಂದು ಸಂಭ್ರಮ ಹಂಚಿಕೊಂಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್. 2006 ರಲ್ಲಿ ಅಂಬರೀಶ್ ಅವರು ಬೆಂಗಳೂರಿನ ಕೆಎಸ್ ಸಿಎ ಸ್ಟೇಡಿಯಂನಲ್ಲಿ ಎಂ.ಎಸ್.ಧೋನಿಯವರಿಗೆ ವೈಯಕ್ತಿಕವಾಗಿ ಎರಡು ಲಕ್ಷ ರೂಪಾಯಿ ಚೆಕ್ ನೀಡಿ ಶುಭ ಹಾರೈಸಿದ ಫೋಟೋವನ್ನು ಸುಮಲತಾ ಅಂಬರೀಶ್ ಅವರು “ಎಕ್ಸ್”ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಅಂಬರೀಶ್ ಅವರು ಅದರ ಮೊದಲು ಒಮ್ಮೆ ಧೋನಿಯವರ ತಂದೆಯವರ ಸಂದರ್ಶವನ್ನು ಟಿವಿಯಲ್ಲಿ ನೋಡುತ್ತಿದ್ದರಂತೆ. ಆ ದಿನಗಳಲ್ಲಿ ಧೋನಿ ಇನ್ನು ಇಷ್ಟು ಪ್ರಸಿದ್ಧಿಗೆ ಬಂದಿರಲಿಲ್ಲ. ಉದಯೋನ್ಮುಖ ಆಟಗಾರರಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದರು. ಆಗ ಅವರನ್ನು ನೋಡಲು ಮನೆಗೆ ಅತಿಥಿಗಳು ಬರುತ್ತಿದ್ದರು. ಆದರೆ ಬಂದವರಿಗೆ ಕುಳಿತುಕೊಳ್ಳಲು ಸರಿಯಾಗಿ ಆಸನದ ವ್ಯವಸ್ಥೆ ಇರಲಿಲ್ಲ. ಈ ಮಾತನ್ನು ಧೋನಿಯವರ ತಂದೆಯವರು ಹೇಳಿದ್ದನ್ನು ಕೇಳಿ ಅಂಬರೀಶ್ ಭಾವುಕರಾಗಿದ್ದರಂತೆ.

ದೊಡ್ಡ ಕ್ರೀಡಾಪ್ರೇಮಿಯಾಗಿದ್ದ ಅಂಬರೀಶ್ ಅವರು ಕ್ರಿಕೆಟ್ ಆಟದ ಬಗ್ಗೆ ಉತ್ತಮ ಜ್ಞಾನವನ್ನು ಕೂಡ ಹೊಂದಿದ್ದರು. ಅಂಬರೀಶ್ ಅವರು ಅಂದು ಧೋನಿಯವರಿಗೆ ಚೆಕ್ ಕೊಟ್ಟು ಪ್ರೋತ್ಸಾಹಿಸಿದ ಫೋಟೋ ಕಳೆದುಹೋಗಿದ್ದು, ಬಹಳ ಕಾಲದ ನಂತರ ಸುಮಲತಾ ಅವರಿಗೆ ಸಿಕ್ಕಿದೆ. ಇದು ಆವತ್ತಿನ ದಿನಗಳನ್ನು ಅವರಿಗೆ ನೆನಪಿಸಿದೆ. ಈ ಫೋಟೋವನ್ನು ಅವರು ಧೋನಿಯವರಿಗೂ ಟ್ಯಾಗ್ ಮಾಡಿದ್ದು, “ಈ ಘಳಿಗೆ ನಿಮಗೆ ನೆನಪಿರಲಿಕ್ಕಿಲ್ಲ, ಆದರೆ ನಿಮ್ಮ ಸಾಧನೆ ನಿಜಕ್ಕೂ ದೇಶಕ್ಕೆ ಹೆಮ್ಮೆ ತರುವಂತದ್ದು” ಎಂದು ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search