• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ಸಿಗರು ಹರಕೆ ಹೊತ್ತರೆ ಓಕೆ, ಬೇರೆಯವರಿಗೆ ಟೀಕೆ!

Tulunadu News Posted On August 30, 2023


  • Share On Facebook
  • Tweet It

ಯಾವುದೇ ಕಾರ್ಯ ಫಲಪದ್ರವಾಗಲಿ ಎಂದು ಬೇಡಿಕೊಂಡು ದೇವರಿಗೆ ಹರಕೆ ಹೊತ್ತಿಕೊಳ್ಳುವುದು ಅಥವಾ ಪ್ರಾರ್ಥನೆ ಸಲ್ಲಿಸುವುದು ಸನಾತನ ಸಂಸ್ಕೃತಿಯಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಆಸ್ತಿಕ ಬಾಂಧವರು ಇದನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬಂದಿದ್ದಾರೆ. ತಾವು ಬಯಸಿದ ಕಾರ್ಯಗಳು ಅನುಷ್ಟಾನಕ್ಕೆ ಬಂದ ನಂತರ ಅದನ್ನು ಈಡೇರಿಸಿದ್ದಕ್ಕಾಗಿ ದೇವರಿಗೆ ಧನ್ಯವಾದ ಅರ್ಪಿಸುವ ಅಂಗವೇ ಹರಕೆ ತೀರಿಸುವುದು. ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದವರನ್ನು ಹೀಯಾಳಿಸುವವರು ಇದ್ದಾರೆ. ಕಳೆದ ಬಾರಿ ಚಂದ್ರಯಾನ -3 ಯಶಸ್ಸಿಗಾಗಿ ಇಸ್ರೋ ವಿಜ್ಞಾನಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದಾಗ ಅದನ್ನು ಟೀಕಿಸಿದವರು ಇದ್ದಾರೆ. ಚಂದ್ರಯಾನಕ್ಕೆ ತಿರುಪತಿ ತಿಮ್ಮಪ್ಪನ ಪಾದವೇ ಗತಿ ಎಂದು ಮೂದಲಿಸಿದವರು ಇದ್ದಾರೆ. ವಿಜ್ಞಾನಿಗಳು ಚಂದ್ರಯಾನ ಯಶಸ್ಸು ಗಳಿಸಿದ ನಂತರ ದೇವರಿಗೆ ಕೃತಜ್ಞತೆ ಸಲ್ಲಿಸಲು ಹೋದಾಗಲು ವ್ಯಂಗ್ಯವಾಡಿದವರು ಇದ್ದಾರೆ.
ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಹರಕೆ ತೀರಿಸಲು ತೆರಳಿದ್ದಾರೆ. ಅಲ್ಲಿಯೇ ಗೃಹಲಕ್ಷ್ಮಿ ಯೋಜನೆ ಸುಸೂತ್ರವಾಗಿ ನಡೆಯಲು ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ಸಿಎಂ, ಡಿಸಿಎಂ ಚುನಾವಣೆಯ ಮೊದಲು ಅಧಿಕಾರಕ್ಕೆ ಬರಲು ಹರಕೆ ಹೊತ್ತಿರುವುದು ಮಾಧ್ಯಮಗಳ ಮೂಲಕ ಎಲ್ಲರಿಗೂ ಗೊತ್ತಾಗಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಚಂದ್ರಯಾನ ಯಶಸ್ವಿಯಾಗಲು ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದಾಗ ವ್ಯಂಗ್ಯ ಮಾಡಿದವರು ಈಗ ಯಾಕೆ ಮೌನವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಮಾತಿನ ಬಾಣವನ್ನು ಎಸೆದಿದ್ದಾರೆ. ಹಾಗಾದರೆ ಕಾಂಗ್ರೆಸ್ಸಿಗರು ಹರಕೆ ಹೊತ್ತರೆ, ಪ್ರಾರ್ಥನೆ ಸಲ್ಲಿಸಿದರೆ ಅದು ಓಕೆ. ಅದೇ ಬೇರೆಯವರು ಹರಕೆ ಅಥವಾ ಪ್ರಾರ್ಥನೆ ಸಲ್ಲಿಸಿದರೆ ಅದು ಹೇಗೆ ವ್ಯಂಗ್ಯ, ಟೀಕೆಗೆ ಕಾರಣವಾಗುತ್ತದೆ. ಈಗ ಯಾಕೆ ಬುದ್ಧಿಜೀವಿಗಳು, ಪ್ರಗತಿಪರರು ಮಾತನಾಡುವುದಿಲ್ಲ ಎಂದು ಹಲವರು ಕೇಳುತ್ತಿದ್ದಾರೆ. ಎಡಪಂಥಿಯರ ಈ ಮೌನ ಕೂಡ ಟೀಕೆಗೆ ಕಾರಣವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search