• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿಗರು ಹರಕೆ ಹೊತ್ತರೆ ಓಕೆ, ಬೇರೆಯವರಿಗೆ ಟೀಕೆ!

Tulunadu News Posted On August 30, 2023
0


0
Shares
  • Share On Facebook
  • Tweet It

ಯಾವುದೇ ಕಾರ್ಯ ಫಲಪದ್ರವಾಗಲಿ ಎಂದು ಬೇಡಿಕೊಂಡು ದೇವರಿಗೆ ಹರಕೆ ಹೊತ್ತಿಕೊಳ್ಳುವುದು ಅಥವಾ ಪ್ರಾರ್ಥನೆ ಸಲ್ಲಿಸುವುದು ಸನಾತನ ಸಂಸ್ಕೃತಿಯಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಆಸ್ತಿಕ ಬಾಂಧವರು ಇದನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬಂದಿದ್ದಾರೆ. ತಾವು ಬಯಸಿದ ಕಾರ್ಯಗಳು ಅನುಷ್ಟಾನಕ್ಕೆ ಬಂದ ನಂತರ ಅದನ್ನು ಈಡೇರಿಸಿದ್ದಕ್ಕಾಗಿ ದೇವರಿಗೆ ಧನ್ಯವಾದ ಅರ್ಪಿಸುವ ಅಂಗವೇ ಹರಕೆ ತೀರಿಸುವುದು. ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದವರನ್ನು ಹೀಯಾಳಿಸುವವರು ಇದ್ದಾರೆ. ಕಳೆದ ಬಾರಿ ಚಂದ್ರಯಾನ -3 ಯಶಸ್ಸಿಗಾಗಿ ಇಸ್ರೋ ವಿಜ್ಞಾನಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದಾಗ ಅದನ್ನು ಟೀಕಿಸಿದವರು ಇದ್ದಾರೆ. ಚಂದ್ರಯಾನಕ್ಕೆ ತಿರುಪತಿ ತಿಮ್ಮಪ್ಪನ ಪಾದವೇ ಗತಿ ಎಂದು ಮೂದಲಿಸಿದವರು ಇದ್ದಾರೆ. ವಿಜ್ಞಾನಿಗಳು ಚಂದ್ರಯಾನ ಯಶಸ್ಸು ಗಳಿಸಿದ ನಂತರ ದೇವರಿಗೆ ಕೃತಜ್ಞತೆ ಸಲ್ಲಿಸಲು ಹೋದಾಗಲು ವ್ಯಂಗ್ಯವಾಡಿದವರು ಇದ್ದಾರೆ.
ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಹರಕೆ ತೀರಿಸಲು ತೆರಳಿದ್ದಾರೆ. ಅಲ್ಲಿಯೇ ಗೃಹಲಕ್ಷ್ಮಿ ಯೋಜನೆ ಸುಸೂತ್ರವಾಗಿ ನಡೆಯಲು ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ಸಿಎಂ, ಡಿಸಿಎಂ ಚುನಾವಣೆಯ ಮೊದಲು ಅಧಿಕಾರಕ್ಕೆ ಬರಲು ಹರಕೆ ಹೊತ್ತಿರುವುದು ಮಾಧ್ಯಮಗಳ ಮೂಲಕ ಎಲ್ಲರಿಗೂ ಗೊತ್ತಾಗಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಚಂದ್ರಯಾನ ಯಶಸ್ವಿಯಾಗಲು ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದಾಗ ವ್ಯಂಗ್ಯ ಮಾಡಿದವರು ಈಗ ಯಾಕೆ ಮೌನವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಮಾತಿನ ಬಾಣವನ್ನು ಎಸೆದಿದ್ದಾರೆ. ಹಾಗಾದರೆ ಕಾಂಗ್ರೆಸ್ಸಿಗರು ಹರಕೆ ಹೊತ್ತರೆ, ಪ್ರಾರ್ಥನೆ ಸಲ್ಲಿಸಿದರೆ ಅದು ಓಕೆ. ಅದೇ ಬೇರೆಯವರು ಹರಕೆ ಅಥವಾ ಪ್ರಾರ್ಥನೆ ಸಲ್ಲಿಸಿದರೆ ಅದು ಹೇಗೆ ವ್ಯಂಗ್ಯ, ಟೀಕೆಗೆ ಕಾರಣವಾಗುತ್ತದೆ. ಈಗ ಯಾಕೆ ಬುದ್ಧಿಜೀವಿಗಳು, ಪ್ರಗತಿಪರರು ಮಾತನಾಡುವುದಿಲ್ಲ ಎಂದು ಹಲವರು ಕೇಳುತ್ತಿದ್ದಾರೆ. ಎಡಪಂಥಿಯರ ಈ ಮೌನ ಕೂಡ ಟೀಕೆಗೆ ಕಾರಣವಾಗಿದೆ.

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
Tulunadu News May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search