• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಡಿಕೆಶಿ ಕೃಷ್ಣಾಷ್ಟಮಿ!

Tulunadu News Posted On September 7, 2023
0


0
Shares
  • Share On Facebook
  • Tweet It

ಲೋಕಸಭಾ ಚುನಾವಣೆಗೆ ಏಳೆಂಟು ತಿಂಗಳು ಮಾತ್ರ ಬಾಕಿ ಇರುವಂತಹ ಈ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾರತೀಯ ಜನತಾ ಪಾರ್ಟಿಯ ಪ್ರಭಾವಿ ಮುಖಂಡರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಚಿತ್ರದುರ್ಗದ ಹಿರಿಯೂರಿನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಮನೆಯಲ್ಲಿ ಕೃಷ್ಣಾಷ್ಟಮಿಯ ಭರ್ಜರಿ ಹಬ್ಬದೂಟವನ್ನು ಅವರು ಸವಿದರು. ಪ್ರೀತಿಯಿಂದ ಹಬ್ಬಕ್ಕೆ ಕರೆದರು, ಅದಕ್ಕೆ ಬಂದೆ ಎಂದು ಡಿಕೆಶಿಯವರು ಹೇಳಿದರಾದರೂ ಅವರು ಸುಮ್ಮಸುಮ್ಮನೆ ಹಾಗೆ ಹೋಗಿ ಊಟ ಮಾಡಿ ಬರುವುದಿಲ್ಲ ಎನ್ನುವುದು ರಾಜಕೀಯದಲ್ಲಿ ಇರುವವರಿಗೆ ಗೊತ್ತಿರುವ ವಿಷಯ.

ಪೂರ್ಣಿಮಾ ಶ್ರೀನಿವಾಸ್ ಅವರ ಕೆ.ಆರ್.ಪುರಂ ನಿವಾಸಕ್ಕೆ ಭೇಟಿ ಕೊಟ್ಟ ಡಿಕೆಶಿ ಅಲ್ಲಿ ತುಂಬಾ ಹೊತ್ತು ಇದ್ದು, ಮನೆಮಂದಿಯೊಂದಿಗೆ ಫೋಟೋ ಕೂಡ ತೆಗೆದಿದ್ದಾರೆ. ಯಾವುದೇ ಆಪರೇಶನ್ ಇಲ್ಲ, ನಮ್ಮದೇನಿದ್ದರೂ ಕೋ ಆಪರೇಶನ್ ಎಂದು ಡಿಕೆಶಿ ಸಮಜಾಯಿಷಿಕೆ ನೀಡಿದರಾದರೂ ಯಥಾಪ್ರಕಾರ ಡಿಕೆಶಿಯವರ ಸಂಪರ್ಕದಲ್ಲಿರುವ ಎಲ್ಲ ಬಿಜೆಪಿ ಮುಖಂಡರು ಹೇಳುವಂತೆ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಪೂರ್ಣಿಮಾ ಸುರೇಶ್ ಹೇಳಿದರು. ಹೋಗುವುದಾದರೆ ಕದ್ದು ಮುಚ್ಚಿ ಕಾಂಗ್ರೆಸ್ಸಿಗೆ ಸೇರುವುದಿಲ್ಲ ಎಂದು ಕೂಡ ಹೇಳಲು ಮರೆಯಲಿಲ್ಲ.

0
Shares
  • Share On Facebook
  • Tweet It




Trending Now
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
  • Popular Posts

    • 1
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 2
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search