• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!

Tulunadu News Posted On September 28, 2023
0


0
Shares
  • Share On Facebook
  • Tweet It

ನಾವು ನಮ್ಮ ಜೀವನದಲ್ಲಿ ಅನೇಕ ಸಂದರ್ಭದಲ್ಲಿ ಏನಾದರೂ ಮಾಹಿತಿಗಾಗಿ ಗೂಗಲ್ ಮೊರೆ ಹೋಗುತ್ತಾ ಇರುತ್ತೇವೆ. ಗೂಗಲ್ ನಲ್ಲಿ ಏನು ಟೈಪ್ ಮಾಡಿದರೂ ಅದರಲ್ಲಿ ನಮಗೆ ಸಾಕಷ್ಟು ಮಾಹಿತಿ ಸಿಗುತ್ತದೆ. ಹಾಗಂತ ನಾವು ಇನ್ನು ಮುಂದೆ ಆತ್ಮಹತ್ಯೆ ಮಾಡ್ಕೊಳ್ಳೋದು ಹೇಗೆ ಎಂದು ಗೂಗಲ್ ಸರ್ಚ್ ಮಾಡಿದರೆ ನೀವು ಇರುವ ಸ್ಥಳಕ್ಕೆ ಪೊಲೀಸರು ಬರುವ ಸಾಧ್ಯತೆ ಇದೆ.
ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದ ಮುಂಬೈಯ ಅಂಧೇರಿಯ ಯುವಕನೊಬ್ಬ ಬದುಕಿನಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯೋಚಿಸಿದ್ದ. ಆದರೆ ಸಾಯುವುದಕ್ಕೆ ಯಾವ ಮಾರ್ಗ ಉತ್ತಮ ಎಂದು ತೀರ್ಮಾನಿಸಲು ಆತ ಗೂಗಲ್ ಸರ್ಚ್ ಮಾಡಿದ್ದಾನೆ. ಆದರೆ ಇಂಟರ್ ನೆಟ್ ಮೇಲೆ ನಿಗಾ ಇರಿಸಿರುವ ಇಂಟರ್ ಪೋಲ್ ತಕ್ಷಣ ಜಾಗೃತವಾಗಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಸಿಬ್ಬಂದಿ 2 ಗಂಟೆಯೊಳಗೆ ಆ ವ್ಯಕ್ತಿಯನ್ನು ಪತ್ತೆ ಮಾಡಿ ಕೌನ್ಸೆಲಿಂಗ್ ನಡೆಸಿದ್ದಾರೆ.
ಮಂಗಳೂರಿನಲ್ಲಿಯೂ ಎರಡು ವರ್ಷಗಳ ಹಿಂದೆ ದಂಪತಿಯೊಬ್ಬರು ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ತಾವು ಸಾಯುವುದಾಗಿ ತಿಳಿಸಿದ್ದರು. ಈ ಮಾಹಿತಿಯನ್ನು ಆಧರಿಸಿ ಪೊಲೀಸ್ ಕಮೀಷನರ್ ಆ ಮನೆಗೆ ತಲುಪುವಷ್ಟರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಗಳೂರಿನ ಚಿತ್ರಾಪುರ ಸಮುದ್ರ ಕಿನಾರೆಯ ಬೃಹತ್ ಸಮುಚ್ಚಯದಲ್ಲಿ ಈ ಘಟನೆ ನಡೆದಿತ್ತು. ತಮ್ಮ ಅಂತಿಮ ಸಂಸ್ಕಾರಕ್ಕಾಗಿ ಹಣ ಇಟ್ಟು ಹಿಂದೂ ಸಂಘಟನೆಯೊಂದಕ್ಕೆ ಅದನ್ನು ನೆರವೇರಿಸಲು ಕೋರಿದ್ದರು. ಈ ಆಧುನಿಕ ಯುಗದಲ್ಲಿ ಅಂತರ್ಜಾಲ ಅನೇಕ ಸಂದರ್ಭದಲ್ಲಿ ಬಹಳ ಉಪಯುಕ್ತವಾಗಿದ್ದು, ಕೆಲವರ ಬದುಕನ್ನು ಉಳಿಸುತ್ತದೆ. ಕೆಲವು ಸಂದರ್ಭದಲ್ಲಿ ಜೀವವನ್ನು ಕಸಿಯುತ್ತದೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search