• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!

Tulunadu News Posted On September 28, 2023
0


0
Shares
  • Share On Facebook
  • Tweet It

ನಾವು ನಮ್ಮ ಜೀವನದಲ್ಲಿ ಅನೇಕ ಸಂದರ್ಭದಲ್ಲಿ ಏನಾದರೂ ಮಾಹಿತಿಗಾಗಿ ಗೂಗಲ್ ಮೊರೆ ಹೋಗುತ್ತಾ ಇರುತ್ತೇವೆ. ಗೂಗಲ್ ನಲ್ಲಿ ಏನು ಟೈಪ್ ಮಾಡಿದರೂ ಅದರಲ್ಲಿ ನಮಗೆ ಸಾಕಷ್ಟು ಮಾಹಿತಿ ಸಿಗುತ್ತದೆ. ಹಾಗಂತ ನಾವು ಇನ್ನು ಮುಂದೆ ಆತ್ಮಹತ್ಯೆ ಮಾಡ್ಕೊಳ್ಳೋದು ಹೇಗೆ ಎಂದು ಗೂಗಲ್ ಸರ್ಚ್ ಮಾಡಿದರೆ ನೀವು ಇರುವ ಸ್ಥಳಕ್ಕೆ ಪೊಲೀಸರು ಬರುವ ಸಾಧ್ಯತೆ ಇದೆ.
ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದ ಮುಂಬೈಯ ಅಂಧೇರಿಯ ಯುವಕನೊಬ್ಬ ಬದುಕಿನಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯೋಚಿಸಿದ್ದ. ಆದರೆ ಸಾಯುವುದಕ್ಕೆ ಯಾವ ಮಾರ್ಗ ಉತ್ತಮ ಎಂದು ತೀರ್ಮಾನಿಸಲು ಆತ ಗೂಗಲ್ ಸರ್ಚ್ ಮಾಡಿದ್ದಾನೆ. ಆದರೆ ಇಂಟರ್ ನೆಟ್ ಮೇಲೆ ನಿಗಾ ಇರಿಸಿರುವ ಇಂಟರ್ ಪೋಲ್ ತಕ್ಷಣ ಜಾಗೃತವಾಗಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಸಿಬ್ಬಂದಿ 2 ಗಂಟೆಯೊಳಗೆ ಆ ವ್ಯಕ್ತಿಯನ್ನು ಪತ್ತೆ ಮಾಡಿ ಕೌನ್ಸೆಲಿಂಗ್ ನಡೆಸಿದ್ದಾರೆ.
ಮಂಗಳೂರಿನಲ್ಲಿಯೂ ಎರಡು ವರ್ಷಗಳ ಹಿಂದೆ ದಂಪತಿಯೊಬ್ಬರು ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ತಾವು ಸಾಯುವುದಾಗಿ ತಿಳಿಸಿದ್ದರು. ಈ ಮಾಹಿತಿಯನ್ನು ಆಧರಿಸಿ ಪೊಲೀಸ್ ಕಮೀಷನರ್ ಆ ಮನೆಗೆ ತಲುಪುವಷ್ಟರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಗಳೂರಿನ ಚಿತ್ರಾಪುರ ಸಮುದ್ರ ಕಿನಾರೆಯ ಬೃಹತ್ ಸಮುಚ್ಚಯದಲ್ಲಿ ಈ ಘಟನೆ ನಡೆದಿತ್ತು. ತಮ್ಮ ಅಂತಿಮ ಸಂಸ್ಕಾರಕ್ಕಾಗಿ ಹಣ ಇಟ್ಟು ಹಿಂದೂ ಸಂಘಟನೆಯೊಂದಕ್ಕೆ ಅದನ್ನು ನೆರವೇರಿಸಲು ಕೋರಿದ್ದರು. ಈ ಆಧುನಿಕ ಯುಗದಲ್ಲಿ ಅಂತರ್ಜಾಲ ಅನೇಕ ಸಂದರ್ಭದಲ್ಲಿ ಬಹಳ ಉಪಯುಕ್ತವಾಗಿದ್ದು, ಕೆಲವರ ಬದುಕನ್ನು ಉಳಿಸುತ್ತದೆ. ಕೆಲವು ಸಂದರ್ಭದಲ್ಲಿ ಜೀವವನ್ನು ಕಸಿಯುತ್ತದೆ.

0
Shares
  • Share On Facebook
  • Tweet It




Trending Now
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
  • Popular Posts

    • 1
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 2
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 3
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 4
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search