• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಮನಾಗಿ ಇದ್ದಿದ್ರೆ ಇನ್ನಷ್ಟು ಸಾಧನೆ ಮಾಡಬಹುದಿತ್ತು – ದಾನೇಶ್ ಕನೇರಿಯಾ

Tulunadu News Posted On October 26, 2023
0


0
Shares
  • Share On Facebook
  • Tweet It

ನಾನು ಮುಸ್ಲಿಮನಾಗಿ ಇದ್ದಿದ್ರೆ ಪಾಕಿಸ್ತಾನದ ಕ್ರಿಕೆಟ್ ತಂಡದ ಕಪ್ತಾನನಾಗಬಹುದಿತ್ತು. ಅದರೊಂದಿಗೆ ಕ್ರಿಕೆಟ್ ನಲ್ಲಿ ಇನ್ನಷ್ಟು ಸಾಧನೆ ಮಾಡಲು ಅವಕಾಶ ಸಿಗುತ್ತಿತ್ತು. ನಮ್ಮದೇ ತಂಡದವರ ದಾಖಲೆ ಮುರಿಯಬಹುದಿತ್ತು. ಆದರೆ ನಾನು ನನ್ನ ಸನಾತನ ಧರ್ಮ ಬಿಟ್ಟು ಹೋಗಲು ತಯಾರಿರಲಿಲ್ಲ ಎಂದು ಮಾಜಿ ಪಾಕ್ ಕ್ರಿಕೆಟಿಗ ದಾನೇಶ್ ಕನೇರಿಯಾ ಹೇಳಿದ್ದಾರೆ. ಆಜ್ ತಕ್ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು ನನಗೆ ನನ್ನ ಸನಾತನ ಧರ್ಮವೇ ಶ್ರೇಷ್ಟ. ಈ ವಿಷಯದಲ್ಲಿ ನಾನು ರಾಜಿಯಾಗಲು ಸಿದ್ಧನಿಲ್ಲ. ನನಗೆ ಮತಾಂತರವಾಗಲು ತುಂಬಾ ಒತ್ತಡ, ಆಮಿಷ ನೀಡಲಾಯಿತು. ಆದರೆ ನಾನು ಯಾವುದಕ್ಕೂ ಜಗ್ಗಲಿಲ್ಲ ಎಂದು ಕನೇರಿಯಾ ಹೇಳಿದ್ದಾರೆ. ನನಗೆ ಕೆಲಸ ಸಿಗಲಿ, ಬಿಡಲಿ, ಅದರ ಬಗ್ಗೆ ನನಗೆ ಯೋಚನೆ ಇಲ್ಲ. ಧರ್ಮ ಇದ್ದರೆ ಎಲ್ಲವೂ ಇದೆ. ಇಲ್ಲದಿದ್ದರೆ ಏನೂ ಇಲ್ಲ, ಜೈ ಶ್ರೀರಾಮ್ ಎಂದು ದಾನೇಶ್ ಕನೇರಿಯಾ ಹೇಳಿದ್ದಾರೆ.
ಪಾಕಿಸ್ತಾನದ ಅತ್ಯುತ್ತಮ ಗೂಗ್ಲಿ ಸ್ಪಿನರ್ ಎಂದೇ ಖ್ಯಾತರಾಗಿದ್ದ ದಾನೇಶ್ ಪರಬ ಶಂಕರ್ ಕನೇರಿಯಾ ಅವರಿಗೆ ಕೇವಲ 61 ಪಂದ್ಯ ಆಡಲು ಅವಕಾಶ ದೊರಕಿತ್ತು. ಸಿಕ್ಕಿದ ಕೆಲವೇ ಅವಕಾಶಗಳಲ್ಲಿ 261 ವಿಕೆಟ್ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದರು. ಆದರೆ ಅವರ ಕ್ರಿಕೆಟ್ ಪಯಣ ಬೇಗ ಕೊನೆಗೊಂಡಿತ್ತು.
ಸ್ವಾತಂತ್ರ್ಯ ಪೂರ್ವದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳ ಸಂಖ್ಯೆ 14.6% ಇತ್ತು. ಆದರೆ ಪ್ರಸ್ತುತ ಇದು 2.14% ಕ್ಕೆ ಬಂದು ಇಳಿದಿದೆ. ಅದಕ್ಕೆ ಕಾರಣ ಏನು ಎನ್ನುವುದು ದಾನೇಶ್ ಕನೇರಿಯಾ ಅವರ ಮಾತುಗಳಲ್ಲಿಯೇ ಅರ್ಥವಾಗುತ್ತದೆ.

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search