• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಯಿ ಕಚ್ಚಿದರೆ 10 ಸಾವಿರ ಪರಿಹಾರಕ್ಕೆ ಹೈಕೋರ್ಟ್ ಆದೇಶ!

Tulunadu News Posted On November 15, 2023
0


0
Shares
  • Share On Facebook
  • Tweet It

ಇನ್ನು ಮುಂದೆ ಮನುಷ್ಯರಿಗೆ ನಾಯಿ ಕಚ್ಚಿದರೆ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನು ರಾಜ್ಯ ಸರಕಾರ ಪರಿಹಾರ ಮೊತ್ತವಾಗಿ ನೀಡಬೇಕು ಎನ್ನುವ ಆದೇಶವನ್ನು ಪಂಜಾಬ್ – ಹರ್ಯಾಯ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಆದೇಶ ನೀಡಬೇಕು ಎಂದು ಹೈಕೋರ್ಟ್ ನಲ್ಲಿ ಒಟ್ಟು 193 ದಾವೆಗಳು ಹೂಡಲ್ಪಟ್ಟಿದ್ದವು. ಈ ಬಗ್ಗೆ ತಮ್ಮ ತೀರ್ಪಿನಲ್ಲಿ ಅಂಶಗಳನ್ನು ಉಲ್ಲೇಖಿಸಿರುವ ನ್ಯಾಯಮೂರ್ತಿ ವಿನೋದ್ ಎಸ್ ಭಾರದ್ವಾಜ್ ಅವರು ” ಬೀದಿ ನಾಯಿಗಳ ಕಾಟದ ಬಗ್ಗೆ ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ನ್ಯಾಯಾಲಯದ ಮುಂದೆ ದಾಖಲಿಸ್ಪಡುತ್ತಿದ್ದರೂ ರಾಜ್ಯ ಸರಕಾರಗಳು ಕಣ್ಣು ಮುಚ್ಚಿ ಕುಳಿತುಕೊಂಡಿರುವುದು ಸರಿಯಲ್ಲ. ಪ್ರಕರಣದ ಬಗ್ಗೆ ಮುಖ ತಿರುಗಿಸಿ ಕುಳಿತುಕೊಂಡರೆ ಪ್ರಕರಣ ನಡೆದಿಲ್ಲ ಎಂದು ಅರ್ಥ ಅಲ್ಲ. ಜನರ ಆಕ್ರೋಶವನ್ನು ತಣಿಸಲು ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ತಿಳಿಸಿದೆ.
ನಾಯಿ ಕಚ್ಚಿದಾಗ ಅದರ ಹಲ್ಲಿನ ಗುರುತು ದೇಹದಲ್ಲಿ ಕಂಡುಬಂದರೆ ಕನಿಷ್ಟ 10000 ಸಾವಿರ ರೂಪಾಯಿ ಹಾಗೂ ಚರ್ಮದಿಂದ ಮಾಂಸ ಕಿತ್ತು ಬಂದರೆ 20000 ರೂಪಾಯಿ ಪರಿಹಾರ ನೀಡಬೇಕಾಗುತ್ತದೆ.

ಕನಿಷ್ಟ 2 ಸೆಂಟಿ ಮೀಟರ್ ಆಳದ ಗಾಯದಿಂದ ಆರಂಭವಾಗಿ ಗಾಯದ ಗಂಭೀರತೆಯ ಮೇಲೆ ಇದು ಅವಲಂಬಿತವಾಗಿ ಪರಿಹಾರ ಹೆಚ್ಚುತ್ತಾ ಹೋಗುತ್ತದೆ.

ಪರಿಹಾರವನ್ನು ನೀಡುವ ಜವಾಬ್ದಾರಿ ಸರಕಾರದಾಗಿದೆ. ಒಂದು ವೇಳೆ ತಪ್ಪು ಖಾಸಗಿ ಸಂಸ್ಥೆಗಳಿಂದ ನಡೆದರೆ ಸರಕಾರ ಸಂಬಂಧಪಟ್ಟವರಿಂದ ದಂಡದ ಮೊತ್ತ ವಸೂಲಿ ಮಾಡಬಹುದು ಎಂದು ನ್ಯಾಯಪೀಠ ತಿಳಿಸಿದೆ. ಒಟ್ಟಿನಲ್ಲಿ ಸಂತ್ರಸ್ತರಿಗೆ ಅನ್ಯಾಯವಾಗಬಾರದು ಎನ್ನುವುದು ಎಲ್ಲರ ನಿಲುವು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search