• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾಯಿ ಕಚ್ಚಿದರೆ 10 ಸಾವಿರ ಪರಿಹಾರಕ್ಕೆ ಹೈಕೋರ್ಟ್ ಆದೇಶ!

Tulunadu News Posted On November 15, 2023


  • Share On Facebook
  • Tweet It

ಇನ್ನು ಮುಂದೆ ಮನುಷ್ಯರಿಗೆ ನಾಯಿ ಕಚ್ಚಿದರೆ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನು ರಾಜ್ಯ ಸರಕಾರ ಪರಿಹಾರ ಮೊತ್ತವಾಗಿ ನೀಡಬೇಕು ಎನ್ನುವ ಆದೇಶವನ್ನು ಪಂಜಾಬ್ – ಹರ್ಯಾಯ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಆದೇಶ ನೀಡಬೇಕು ಎಂದು ಹೈಕೋರ್ಟ್ ನಲ್ಲಿ ಒಟ್ಟು 193 ದಾವೆಗಳು ಹೂಡಲ್ಪಟ್ಟಿದ್ದವು. ಈ ಬಗ್ಗೆ ತಮ್ಮ ತೀರ್ಪಿನಲ್ಲಿ ಅಂಶಗಳನ್ನು ಉಲ್ಲೇಖಿಸಿರುವ ನ್ಯಾಯಮೂರ್ತಿ ವಿನೋದ್ ಎಸ್ ಭಾರದ್ವಾಜ್ ಅವರು ” ಬೀದಿ ನಾಯಿಗಳ ಕಾಟದ ಬಗ್ಗೆ ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ನ್ಯಾಯಾಲಯದ ಮುಂದೆ ದಾಖಲಿಸ್ಪಡುತ್ತಿದ್ದರೂ ರಾಜ್ಯ ಸರಕಾರಗಳು ಕಣ್ಣು ಮುಚ್ಚಿ ಕುಳಿತುಕೊಂಡಿರುವುದು ಸರಿಯಲ್ಲ. ಪ್ರಕರಣದ ಬಗ್ಗೆ ಮುಖ ತಿರುಗಿಸಿ ಕುಳಿತುಕೊಂಡರೆ ಪ್ರಕರಣ ನಡೆದಿಲ್ಲ ಎಂದು ಅರ್ಥ ಅಲ್ಲ. ಜನರ ಆಕ್ರೋಶವನ್ನು ತಣಿಸಲು ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ತಿಳಿಸಿದೆ.
ನಾಯಿ ಕಚ್ಚಿದಾಗ ಅದರ ಹಲ್ಲಿನ ಗುರುತು ದೇಹದಲ್ಲಿ ಕಂಡುಬಂದರೆ ಕನಿಷ್ಟ 10000 ಸಾವಿರ ರೂಪಾಯಿ ಹಾಗೂ ಚರ್ಮದಿಂದ ಮಾಂಸ ಕಿತ್ತು ಬಂದರೆ 20000 ರೂಪಾಯಿ ಪರಿಹಾರ ನೀಡಬೇಕಾಗುತ್ತದೆ.

ಕನಿಷ್ಟ 2 ಸೆಂಟಿ ಮೀಟರ್ ಆಳದ ಗಾಯದಿಂದ ಆರಂಭವಾಗಿ ಗಾಯದ ಗಂಭೀರತೆಯ ಮೇಲೆ ಇದು ಅವಲಂಬಿತವಾಗಿ ಪರಿಹಾರ ಹೆಚ್ಚುತ್ತಾ ಹೋಗುತ್ತದೆ.

ಪರಿಹಾರವನ್ನು ನೀಡುವ ಜವಾಬ್ದಾರಿ ಸರಕಾರದಾಗಿದೆ. ಒಂದು ವೇಳೆ ತಪ್ಪು ಖಾಸಗಿ ಸಂಸ್ಥೆಗಳಿಂದ ನಡೆದರೆ ಸರಕಾರ ಸಂಬಂಧಪಟ್ಟವರಿಂದ ದಂಡದ ಮೊತ್ತ ವಸೂಲಿ ಮಾಡಬಹುದು ಎಂದು ನ್ಯಾಯಪೀಠ ತಿಳಿಸಿದೆ. ಒಟ್ಟಿನಲ್ಲಿ ಸಂತ್ರಸ್ತರಿಗೆ ಅನ್ಯಾಯವಾಗಬಾರದು ಎನ್ನುವುದು ಎಲ್ಲರ ನಿಲುವು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search