• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟುಹಬ್ಬಕ್ಕೆ ಗಿಫ್ಟ್ ಬೇಡಾ, ಆರ್ಥಿಕ ಸಹಾಯ ನೀಡಿ ಎಂದ ತೇಜಸ್ವಿ ಸೂರ್ಯ!

Tulunadu News Posted On November 15, 2023
0


0
Shares
  • Share On Facebook
  • Tweet It

ನವೆಂಬರ್ 16 ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಭಾರತೀಯ ಯುವಮೊರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ 33ನೇ ಹುಟ್ಟುಹಬ್ಬ. ಈ ಬಗ್ಗೆ ‘ಎಕ್ಸ್’ ನಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ ಅವರು ತಮ್ಮ ಜನ್ಮದಿನದಂದು ತಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಿ ಶುಭಾಶಯ ತಿಳಿಸಲು ಬರಬಹುದೇ ಎಂದು ಅನೇಕರು ವಿಚಾರಿಸುತ್ತಿದ್ದಾರೆ. ನಾನು ಹುಟ್ಟುಹಬ್ಬ ಆಚರಿಸುವ ಬಗ್ಗೆ ವಿಶೇಷವಾದ ಒಲವು ಹೊಂದಿರುವುದಿಲ್ಲ. ಆದರೆ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿ ಎಂದು ತಿಳಿಸಿದ್ದಾರೆ. ತಾವು ಬೆಳಿಗ್ಗೆ 10 ಗಂಟೆಯಿಂದ 3.30 ರ ತನಕ ಕಚೇರಿಯಲ್ಲಿ ಇರುವುದಾಗಿ ತಿಳಿಸಿರುವ ತೇಜಸ್ವಿ ಸೂರ್ಯ ಅವರು ನಿಮ್ಮ ಆಗಮನವನ್ನು ಎದುರುಗೊಳ್ಳುತ್ತೇನೆ, ಆದರೆ ಅದರೊಂದಿಗೆ ನನ್ನ ಒಂದು ಸಣ್ಣ ಮನವಿ ಇದೆ ಎಂದು ತಿಳಿಸಿದ್ದಾರೆ.
ಶುಭಾಶಯ ಕೋರಲು ಆಗಮಿಸುವ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಗರಿಕರು ಯಾವುದೇ ಗಿಫ್ಟ್ ತರುವುದು ಬೇಡಾ ಎಂದು ಅವರು ವಿನಂತಿಸಿದ್ದಾರೆ. ಅದರ ಬದಲು ನಮೋವಿದ್ಯಾನಿಧಿ ಯೋಜನೆಗೆ ಆರ್ಥಿಕ ನೆರವನ್ನು ನೀಡಲು ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ. ಈ ನಿಧಿಯಲ್ಲಿ ಸಂಗ್ರಹವಾದ ಹಣದಿಂದ ಇಲ್ಲಿಯ ತನಕ 2000 ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ವೃಂದಕ್ಕೆ ಸಹಾಯ ಮಾಡಲು ತಾವು ಶಕ್ತರಾಗಿದ್ದು, ಅವರ ಫೀಸ್ ಗಳನ್ನು ಭರಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ಮಹತ್ತರ ಯೋಜನೆಯಿಂದ ಮಕ್ಕಳ ಭವಿಷ್ಯ ಉಜ್ವಲವಾಗಲಿದ್ದು, ಫೀಸ್ ಕಟ್ಟುವ ಅವರ ಸವಾಲು ಈಡೇರುತ್ತದೆ. ಅದಕ್ಕಾಗಿ ನಮೋವಿದ್ಯಾನಿಧಿ ದೊಡ್ಡ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ.
ಭರ್ತಡೇ ಗಿಫ್ಟ್ ನೀಡುವ ಬದಲು ನಿಮ್ಮ ಶಕ್ತಾನುಸಾರ ಈ ನಿಧಿಗೆ ಸಹಾಯ ಮಾಡಿದರೆ ಉತ್ತಮ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿದರೆ ಅದು ದೂರಗಾಮಿ ಪರಿಣಾಮ ನೀಡುತ್ತದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದ ಎಂದು ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ವಿಡಿಯೋ ಮಾಡಿ ಅಪಲೋಡ್ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search