• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟುಹಬ್ಬಕ್ಕೆ ಗಿಫ್ಟ್ ಬೇಡಾ, ಆರ್ಥಿಕ ಸಹಾಯ ನೀಡಿ ಎಂದ ತೇಜಸ್ವಿ ಸೂರ್ಯ!

Tulunadu News Posted On November 15, 2023
0


0
Shares
  • Share On Facebook
  • Tweet It

ನವೆಂಬರ್ 16 ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಭಾರತೀಯ ಯುವಮೊರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ 33ನೇ ಹುಟ್ಟುಹಬ್ಬ. ಈ ಬಗ್ಗೆ ‘ಎಕ್ಸ್’ ನಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ ಅವರು ತಮ್ಮ ಜನ್ಮದಿನದಂದು ತಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಿ ಶುಭಾಶಯ ತಿಳಿಸಲು ಬರಬಹುದೇ ಎಂದು ಅನೇಕರು ವಿಚಾರಿಸುತ್ತಿದ್ದಾರೆ. ನಾನು ಹುಟ್ಟುಹಬ್ಬ ಆಚರಿಸುವ ಬಗ್ಗೆ ವಿಶೇಷವಾದ ಒಲವು ಹೊಂದಿರುವುದಿಲ್ಲ. ಆದರೆ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿ ಎಂದು ತಿಳಿಸಿದ್ದಾರೆ. ತಾವು ಬೆಳಿಗ್ಗೆ 10 ಗಂಟೆಯಿಂದ 3.30 ರ ತನಕ ಕಚೇರಿಯಲ್ಲಿ ಇರುವುದಾಗಿ ತಿಳಿಸಿರುವ ತೇಜಸ್ವಿ ಸೂರ್ಯ ಅವರು ನಿಮ್ಮ ಆಗಮನವನ್ನು ಎದುರುಗೊಳ್ಳುತ್ತೇನೆ, ಆದರೆ ಅದರೊಂದಿಗೆ ನನ್ನ ಒಂದು ಸಣ್ಣ ಮನವಿ ಇದೆ ಎಂದು ತಿಳಿಸಿದ್ದಾರೆ.
ಶುಭಾಶಯ ಕೋರಲು ಆಗಮಿಸುವ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಗರಿಕರು ಯಾವುದೇ ಗಿಫ್ಟ್ ತರುವುದು ಬೇಡಾ ಎಂದು ಅವರು ವಿನಂತಿಸಿದ್ದಾರೆ. ಅದರ ಬದಲು ನಮೋವಿದ್ಯಾನಿಧಿ ಯೋಜನೆಗೆ ಆರ್ಥಿಕ ನೆರವನ್ನು ನೀಡಲು ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ. ಈ ನಿಧಿಯಲ್ಲಿ ಸಂಗ್ರಹವಾದ ಹಣದಿಂದ ಇಲ್ಲಿಯ ತನಕ 2000 ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ವೃಂದಕ್ಕೆ ಸಹಾಯ ಮಾಡಲು ತಾವು ಶಕ್ತರಾಗಿದ್ದು, ಅವರ ಫೀಸ್ ಗಳನ್ನು ಭರಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ಮಹತ್ತರ ಯೋಜನೆಯಿಂದ ಮಕ್ಕಳ ಭವಿಷ್ಯ ಉಜ್ವಲವಾಗಲಿದ್ದು, ಫೀಸ್ ಕಟ್ಟುವ ಅವರ ಸವಾಲು ಈಡೇರುತ್ತದೆ. ಅದಕ್ಕಾಗಿ ನಮೋವಿದ್ಯಾನಿಧಿ ದೊಡ್ಡ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ.
ಭರ್ತಡೇ ಗಿಫ್ಟ್ ನೀಡುವ ಬದಲು ನಿಮ್ಮ ಶಕ್ತಾನುಸಾರ ಈ ನಿಧಿಗೆ ಸಹಾಯ ಮಾಡಿದರೆ ಉತ್ತಮ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿದರೆ ಅದು ದೂರಗಾಮಿ ಪರಿಣಾಮ ನೀಡುತ್ತದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದ ಎಂದು ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ವಿಡಿಯೋ ಮಾಡಿ ಅಪಲೋಡ್ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search