• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?

Tulunadu News Posted On November 28, 2023


  • Share On Facebook
  • Tweet It

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂಭತ್ತು ಸಾವಿರಕ್ಕೂ ಅಧಿಕ ನಾಡದೋಣಿಗಳಿವೆ. 30 ಸಾವಿರದಷ್ಟು ಜನರು ಮೀನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಉಡುಪಿಯಲ್ಲಿ 1600 ಕ್ಕೂ ಹೆಚ್ಚಿನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಆಳಸಮುದ್ರ ಬೋಟ್ ಗಳಿವೆ. ಇದರಿಂದ ಸಾವಿರಾರು ಕುಟುಂಬಗಳಿಗೆ ಮೀನುಗಾರಿಕೆ ಆಸರೆಯಾಗಿದೆ.

ಆದರೆ ಈ ಬಾರಿ ಮೀನುಗಾರಿಕೆ ಋತುವಿನಲ್ಲಿಯೇ ಮೀನುಗಾರರು ಸಂಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಮುಖ್ಯ ಕಾರಣ ಏನು ಎನ್ನುವುದನ್ನು ನೋಡಿಕೊಂಡು ಬರೋಣ.
ಮೀನುಗಾರಿಕಾ ಋತುವಿನ ಆರಂಭದಲ್ಲಿ ಭಾರೀ ಮಳೆ, ಚಂಡಮಾರುತದಿಂದಾಗಿ ಮೀನುಗಾರಿಕೆಗೆ ಅಡ್ಡಿಯಾಗಿತ್ತು. ಸದ್ಯ ಮೀನುಗಾರಿಕೆಗೆ ಪೂರಕ ವಾತಾವರಣವಿದ್ದರೂ ಮತ್ಸ್ಯಕ್ಷಾಮದಿಂದಾಗಿ ಮೀನೆ ಸಿಗದ ವಾತಾವರಣ ಸೃಷ್ಟಿಯಾಗಿದೆ.

ಹವಾಮಾನ ವೈಪರೀತ್ಯ, ಅವೈಜ್ಞಾನಿಕ ಮತ್ಸ್ಯಬೇಟೆ, ಅವ್ಯಾಹತವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ನಿಂದಾಗಿ ವರ್ಷದಿಂದ ವರ್ಷಕ್ಕೆ ಮೀನಿನ ಸಂತತಿ ನಶಿಸಿ ಮತ್ಸ್ಯಕ್ಷಾಮ ಹೆಚ್ಚುತ್ತಿದೆ. ಇದು ಕರಾವಳಿಯ ಮೀನುಗಾರಿಕಾ ವಲಯದ ಜತೆಗೆ ಆರ್ಥಿಕತೆಗೂ ಪೆಟ್ಟು ಕೊಡುತ್ತಿದೆ. ಅಗಸ್ಟ್ ನಿಂದ ಡಿಸೆಂಬರ್ ಅವಧಿಯಲ್ಲಿ ಮಂಗಳೂರು, ಮಲ್ಪೆ, ಗಂಗೊಳ್ಳಿ, ಮರವಂತೆ, ಭಟ್ಕಳ, ಕಾರವಾರದಲ್ಲಿ ಉತ್ತಮ ಮೀನುಗಾರಿಕೆ ನಡೆಯುತ್ತಿತ್ತು. ಆದರೆ ಈ ಬಾರಿ ಅಲ್ಪಪ್ರಮಾಣದ ಬಂಗುಡೆ ಬಿಟ್ಟರೆ ಬೂತಾಯಿ, ಅಂಜಲ್, ಪಾಂಪ್ಲೆಟ್ ತೀರಾ ವಿರಳವಾಗಿದೆ. ಬಿಳಿ ಅಂಜಲ್ ಅಪರೂಪದಲ್ಲಿ ಅಪರೂಪವಾಗಿದೆ. ಹೇರಳ ಮೀನು ಸಿಗದೇ ಇರುವುದರಿಂದ ಮೀನು ಮಾರುಕಟ್ಟೆಯಲ್ಲಿ ಮೀನಿನ ದರವೂ ಹೆಚ್ಚಳವಾಗಿದ್ದು, ಮತ್ಯ್ಥ ಪ್ರಿಯರ ಜೇಬಿಗೆ ಕನ್ನ ಹಾಕಿದೆ!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search