• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!

Tulunadu News Posted On December 1, 2023
0


0
Shares
  • Share On Facebook
  • Tweet It

ಚರ್ಮದ ಬಣ್ಣ ಸೌಂದರ್ಯ ಸ್ಪರ್ಧೇಯಲ್ಲಿ ಭಾಗವಹಿಸಲು ಅಡ್ಡಿ ಆಗಲಿಲ್ಲ, ಯಾಕೆ?

ಸಾನ್ ರಿಚೆಲ್ ಗಾಂಧಿ ಎಂಬ ಯುವತಿಯನ್ನು ನೋಡಿದರೆ ಯಾರೂ ಕೂಡ ಆಕೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಅಂದುಕೊಳ್ಳುವ ಸಾಧ್ಯತೆಯೇ ಇರಲಿಲ್ಲ. ಆದರೆ ಆಕೆ ಎದೆಗುಂದಲಿಲ್ಲ. ಅವಳಿಗೆ ತಾನು ಕೂಡ ಸೌಂದರ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದು ಮಾತ್ರವಲ್ಲ, ಅದರಲ್ಲಿ ಗೆಲ್ಲಬೇಕೆಂಬ ಗುರಿಯೂ ಇತ್ತು. ಹಾಗೆ ಮಿಸ್ ಪಾಂಡಿಚೇರಿ ಸ್ಪರ್ಧೆಯಲ್ಲಿ ಭಾಗವಹಿಸಿದಳು, ಅವಳಂತಹ ಕಪ್ಪು ಬಣ್ಣದ ಯುವತಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಎಂದು ಕೆಲವರು ಮೂದಲಿಸಿದರು. ಅಂತವರಿಗೆ ಈ ವೇದಿಕೆ ಅಲ್ಲ ಎನ್ನುವ ವಿರೋಧ ವ್ಯಕ್ತವಾಯಿತು. ಆದರೆ ಸಾನ್ ರಿಚೆಲ್ ಎಷ್ಟೇ ಟೀಕೆ ಬಂದರೂ ಅಂಜಲಿಲ್ಲ, ಹಿಂದೆ ಸರಿಯಲಿಲ್ಲ. ಅಂತಿಮವಾಗಿ ಆಕೆ ಮಿಸ್ ಪಾಂಡಿಚೇರಿಯಾಗಿ ಗೆದ್ದು ಬಂದಳು. ಈಗ ಆಕೆ ಮಿಸ್ ಆಫ್ರಿಕಾ ಗೋಲ್ಡನ್ 2023 ಇದಕ್ಕೆ ಸ್ಪರ್ಧಿಸಲು ತಯಾರಾಗಿದ್ದಾಳೆ.


ಅವಳ ಸಾಧನೆಯನ್ನು ನೋಡಿದರೆ ಈಗ ಯಾರು ಬೇಕಾದರೂ ಮೂಗಿನ ಮೇಲೆ ಬೆರಳಿಡುವಂತೆ ಆಗಿದೆ. ಸೌಂದರ್ಯ ಎಂದರೆ ಯಾವ ಮಾನದಂಡ ಇತ್ತೋ, ಯಾವ ವರ್ಣದವರು ಮಾತ್ರ ಭಾರತದಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರು ಎಂಬ ವಾತಾವರಣ ಇತ್ತೋ ಅದನ್ನು ತುಂಡರಿಸಿ ಯಾವ ವರ್ಣದವರು ಬೇಕಾದರೂ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಎಂದು ತೋರಿಸುವುದೇ ತನ್ನ ಗುರಿ ಎಂದು ಆಕೆ ಸಾಬೀತುಪಡಿಸಿದ್ದಾಳೆ. ಐಶ್ವರ್ಯ ರೈ ತನ್ನ ರೋಲ್ ಮಾಡೆಲ್ ಎಂದು ಹೇಳಿಕೊಳ್ಳುವ ಸಾನ್ ರಿಚೆಲ್ ಆರಂಭದಲ್ಲಿ ತನ್ನ ಕುಟುಂಬದ ವಿರೋಧ ಇದ್ದಾಗಲೂ ಅದನ್ನೆಲ್ಲಾ ವಿರೋಧಿಸಿ ಓರ್ವ ಯಶಸ್ವಿ ಮಾಡಲ್ ಆಗಿ ಮಿಂಚುತ್ತಿದ್ದಾಳೆ. ಅದರೊಂದಿಗೆ ಅನೇಕ ಪ್ರಶಸ್ತಿಗಳನ್ನು ಕೂಡ ಮುಡಿಗೇರಿಸಿಕೊಂಡಿದ್ದಾಳೆ.

0
Shares
  • Share On Facebook
  • Tweet It




Trending Now
ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
Tulunadu News August 26, 2025
ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
  • Popular Posts

    • 1
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 2
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • 3
      ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • 4
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 5
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search