• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!

Tulunadu News Posted On December 2, 2023


  • Share On Facebook
  • Tweet It

ಇಂತಹ ದುರವಸ್ಥೆಯನ್ನು ಪಾಕಿಸ್ತಾನ ಅನುಭವಿಸುತ್ತಿದೆ. ಪಕ್ಕಾ ಭಿಕ್ಷುಕರ ದೇಶವಾಗಿರುವ ಪಾಕಿಸ್ತಾನಕ್ಕೆ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಯಾರೂ ಮರ್ಯಾದೆ ಕೊಡುತ್ತಿಲ್ಲ. ಅದರಲ್ಲಿಯೂ ಇತ್ತೀಚೆಗೆ ನಡೆದ ವಿಶ್ವಕಪ್ ನಲ್ಲಿ ದಯನೀಯ ಸೋಲಿನ ಬಳಿಕ ಪಾಕಿಸ್ತಾನಕ್ಕೆ ಇನ್ನಷ್ಟು ಅವಮಾನ ಅವರ ಮಾಜಿ ಕ್ರಿಕೆಟಿಗರಿಂದಲೇ ಆಗಿದೆ. ನಿತ್ಯ ಕೆಜಿಗಟ್ಟಲೆ ಬಿರಿಯಾನಿ ತಿಂದರೆ ಮೈದಾನದಲ್ಲಿ ದೇಹ ಬಗ್ಗತ್ತಾ ಎಂದು ಅವರದ್ದೇ ಹಳೆ ಕ್ರಿಕೆಟಿಗರಿಂದ ಉಗಿಸಿಕೊಂಡು ಪಾಕ್ ತಂಡಕ್ಕೂ ಸಾಕುಸಾಕಾಗಿದೆ. ಇನ್ನು ತಂಡದ ರೂಪುರೇಶೆ ಚರ್ಚೆಯಾಗುತ್ತಿರುವ ಹೊತ್ತಿಗೆ ಕಪ್ತಾನ ಅದನ್ನು ಗಂಭೀರವಾಗಿ ತೆಗೆದುಕೊಳ್ಳದೇ ಬಿರಿಯಾನಿ ತರಹ ಏನನ್ನೋ ಮುಕ್ಕುತ್ತಿರುವ ವಿಡಿಯೋ ಕೂಡ ಇತ್ತೀಚೆಗೆ ವೈರಲ್ ಆಗಿತ್ತು. ಆಡುವುದಕ್ಕಿಂತ ತಿನ್ನಲು ಜಾಸ್ತಿ ಮಹತ್ವ ಕೊಟ್ಟ ಪಾಕಿ ಕ್ರಿಕೆಟಿಗರಿಗೆ ಈಗ ಹೊರದೇಶದಲ್ಲಿಯೂ ಅಂತಹ ಪ್ರಾಮುಖ್ಯತೆ ಸಿಗುವುದು ಡೌಟು ಎನ್ನುವುದು ಈಗ ಸಾಬೀತಾಗಿದೆ.

24 ಗಂಟೆ ಪ್ರಯಾಣ ಮಾಡಿ ಸಿಡ್ನಿಗೆ ಬಂದಿಳಿದ ಪಾಕ್ ಕ್ರಿಕೆಟಿಗರಿಗೆ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾದ ಶಿಷ್ಟಾಚಾರದ ಯಾವ ಅಧಿಕಾರಿಯೂ ಬಂದು ಎದುರುಗೊಂಡಿಲ್ಲ. ಹೋಗಲಿ, ಪಾಕಿಸ್ತಾನದ ರಾಯಭಾರಿ ಕಚೇರಿಯಿಂದ ಕನಿಷ್ಟ ಒಬ್ಬ ಗುಮಾಸ್ತನೂ ಸ್ವಾಗತಕ್ಕೆ ಬರಲಿಲ್ಲ. ಎಲ್ಲಿಯ ತನಕ ಎಂದರೆ ವಿಮಾನ ನಿಲ್ದಾಣದಲ್ಲಿ ಕ್ರಿಕೆಟಿಗರ ಲಗೇಜಿಗೆ ಕೈಕೊಡಲು ಒಬ್ಬನೇ ಒಬ್ಬ ವ್ಯಕ್ತಿ ಇರಲಿಲ್ಲ. ಕೊನೆಗೆ ತಂಡದ ಹೊಸ ಕಪ್ತಾನ ಶಾನ್ ಮಸೂದ್ ತಾವೇ ಲಗೇಜುಗಳನ್ನು ಮಿನಿ ಲಾರಿಯೊಂದಕ್ಕೆ ತುಂಬಿಸಿ ಸಹ ಆಟಗಾರರ ನೆರವಿಗೆ ಮುಂದಾದ ಫೋಟೋ ಮಾತ್ರ ಎಲ್ಲೆಡೆ ಈಗ ವೈರಲ್ ಆಗಿದೆ.

ಒಟ್ಟಿನಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲು ಪಾಕಿಸ್ತಾನ ಸಿಡ್ನಿಗೆ ಬಂದಿದೆ. ಇಲ್ಲಿಯವರೆಗೆ ಆಸ್ಟ್ರೇಲಿಯಾ ನೆಲದಲ್ಲಿ ಪಾಕಿಸ್ತಾನ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. 2019 ರ ಬಳಿಕ ಪ್ರಥಮ ಬಾರಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಇಲ್ಲಿ ಕನಿಷ್ಟ ಒಂದು ಪಂದ್ಯವನ್ನಾದರೂ ಗೆಲ್ಲುತ್ತಾ ಎಂದು ಕಾದು ನೋಡಬೇಕಿದೆ. ಯಾಕೆಂದರೆ ಕೊನೆಯ ಬಾರಿ ಆಸ್ಟ್ರೇಲಿಯ ಪ್ರವಾಸ ಕೈಗೊಂಡ ಪಾಕಿಸ್ತಾನ 2-0 ಅಂತರದಲ್ಲಿ ಸೋತಿತ್ತು. ಆಗ ಅಜರ್ ಆಲಿ ಕಪ್ತಾನರಾಗಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search