• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂಡಬಿದ್ರೆಯ ಯುವಕ ರಿಲಯನ್ಸ್ ಮಿಸ್ಟರ್ ಇಂಡಿಯಾ 2017!

TNN Correspondent Posted On August 29, 2017
0


0
Shares
  • Share On Facebook
  • Tweet It

ಕರಾವಳಿ ಕರ್ನಾಟಕದಿಂದ ಹಲವಾರು ಜನ ಪ್ರತಿಭೆಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿಭಿನ್ನ ಕೇತ್ರದಲ್ಲಿ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಅದರಲ್ಲಿಯೂ ಅನೇಕರು ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚಿ ತಮ್ಮ ಅಭಿನಯದಿಂದ ಜನಮನ ಗೆದ್ದಿದ್ದಾರೆ. ಈ ಮನೋರಂಜನ ಕ್ಷೇತ್ರದಲ್ಲಿ ಹೆಸರು ಮಾಡಬೇಕಾದರೆ ಅದಕ್ಕೆ ಆಕರ್ಷಕ ಅಂಗಸೌಷ್ಟವ, ನಿಲುವು, ಮಾತಿನ ಶೈಲಿ ಮತ್ತು ತೀಕ್ಣ ನೋಟ ಕೂಡ ಮುಖ್ಯ. ಅನೇಕರು ಸಿನೆಮಾ ಕ್ಷೇತ್ರದಲ್ಲಿ ಕಾಲಿಡುವ ಮುನ್ನ ಮಾಡೆಲ್ ಆಗಿ ಕಾರ್ಯ ನಿರ್ವಹಿಸುತ್ತಾರೆ. ಮಾಡೆಲ್ ಆಗಿ ಮಿಂಚುವುದು ಕೂಡ ಸುಲಭವಲ್ಲ. ಮಾಡೆಲ್ ಕ್ಷೇತ್ರದಲ್ಲಿ ಇರುವವರಿಗೆ ತಾವು ಇದೇ ರಂಗದಲ್ಲಿ ಅತ್ಯುನ್ನತ ಸ್ಥಾನಕ್ಕೆ ತಲುಪಬೇಕಾದರೆ ಯಾವುದಾದರೂ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ ರಾಷ್ಟ್ರಮಟ್ಟದಲ್ಲಿ ಮಿಸ್ಟರ್ ಇಂಡಿಯಾ ಸ್ಪರ್ಧೆಯಲ್ಲಿ ಸಾವಿರಾರು ಜನರ ನಡುವೆ ಮೊದಲ ಸ್ಥಾನ ಪಡೆಯುವುದು ಕೂಡ ಸಲೀಸಲ್ಲ. ಅದನ್ನು ತುಳುನಾಡಿನ ಯುವಕನೊಬ್ಬ ಮಾಡಿ ತೋರಿಸಿದ್ದಾರೆ. ಆ ಯುವಕನ ಹೆಸರು ರಿತೇಶ್ ಶೆಟ್ಟಿ.
ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಾಂನಲ್ಲಿ ಇಂಜಿನಿಯರಿಂಗ್ ಮಾಡಿರುವ ರಿತೇಶ್ ಶೆಟ್ಟಿ ಮೂಲತ: ಮೂಡಬಿದ್ರೆಯವರು. ಬಾಲಾಜಿ ಸ್ಕೂಲ್ ಆಫ್ ಆಕ್ಟಿಂಗ್ ನಲ್ಲಿ ಕ್ರಿಯೇಟಿವ್ ಫೀಲ್ಡ್ ನಲ್ಲಿ ತರಬೇತಿ ಪಡೆದಿರುವ ರಿತೇಶ್ ಶೆಟ್ಟಿ 2016 ರಲ್ಲಿ ಮುಂಬೈಯಲ್ಲಿ ನಡೆದ ಮಿಸ್ಟರ್ ಬಂಟ್ ಸೌಂದರ್ಯ ಸ್ಪರ್ಧೆಯಲ್ಲಿ ಮೊದಲ 5 ಸ್ಥಾನಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಅದರ ನಂತರ 2017 ರಲ್ಲಿ ಮಿಸ್ಟರ್ ಮಂಗಳೂರು ಸ್ಪರ್ಧೆಯಲ್ಲಿ ರನ್ನರ್ ಅಪ್ ಸ್ಥಾನ ಪಡೆದುಕೊಂಡ ರಿತೇಶ್ ಶೆಟ್ಟಿ ರಿಲಯನ್ಸ್ ಕಂಪೆನಿಯವರು ಅಗಸ್ಟ್ ನಲ್ಲಿ ಹೈದ್ರಾಬಾದ್ ನಲ್ಲಿ ನಡೆಸಿದ ಮಿಸ್ಟರ್ ಇಂಡಿಯಾ 2017 ಕಿರೀಟ ಗೆಲ್ಲುವ ಮೂಲಕ ತನ್ನ ಸಾಧನೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಿಕೊಂಡಿದ್ದಾರೆ.
ಅದರೊಂದಿಗೆ ಅವರು ಮಿಸ್ಟರ್ ಯೂನಿವರಸ್ ಟೂರಿಸಂ ಇಂಡಿಯಾ 2017 ಕೂಡ ಗೆಲ್ಲುವ ಮೂಲಕ ತುಳುನಾಡಿನ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.
ಮುಂಬೈಯಲ್ಲಿ ಖ್ಯಾತ ಸಾಹಸ ನಿರ್ದೇಶಕ ಚೀತಾ ಯಜ್ಞೇಶ್ ಶೆಟ್ಟಿಯವರ ಬಳಿ ಮಾರ್ಸಲ್ ಆಟ್ಸ್ ಕಲಿತಿರುವ ರಿತೇಶ್ ಶೆಟ್ಟಿ ಪ್ರಸ್ತುತ ತುಳು ಸಿನೆಮಾವೊಂದಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಅಬುಧಾಬಿಯಲ್ಲಿ ಹೋಟೇಲ್ ಉದ್ಯಮ ನಡೆಸುತ್ತಿರುವ ರಘುನಾಥ ಶೆಟ್ಟಿ ಹಾಗೂ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಸೇವೆ ಸಲ್ಲಿಸುತ್ತಿರುವ ವಸಂತಿ ಶೆಟ್ಟಿಯವರ ಸುಪುತ್ರ ರಿತೇಶ್ ಅವರು ಡಾ|ನಿತೀನ್ ಅವರಿಂದ ವ್ಯಕ್ತಿತ್ವ ಅಭಿವೃದ್ಧಿಯ ಬಗ್ಗೆ ತರಬೇತಿ ಪಡೆದುಕೊಂಡಿರುತ್ತಾರೆ.
ಈಗಾಗಲೇ ತೆಲುಗು, ಹಿಂದಿಯಿಂದ ಸಿನೆಮಾ ಅವಕಾಶಗಳನ್ನು ಪಡೆದುಕೊಂಡಿರುವ ರಿತೇಶ್ ಶೆಟ್ಟಿಯವರು ಮುಂದಿನ ದಿನಗಳಲ್ಲಿ ಕರಾವಳಿಯ ಹೆಸರನ್ನು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಏರಿಸುವುದರಲ್ಲಿ ಸಂಶಯವಿಲ್ಲ

0
Shares
  • Share On Facebook
  • Tweet It


Mr.India Tuluvas


Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search