• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಮಿಗೆ ಅರ್ಜುನ ಪ್ರಶಸ್ತಿ

Tulunadu News Posted On December 15, 2023


  • Share On Facebook
  • Tweet It

ನ್ಯೂಜಿಲ್ಯಾಂಡ್ ವಿರುದ್ಧ ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ 54 ಕ್ಕೆ 5 ವಿಕೆಟ್ ಹಾಗೂ ಶ್ರೀಲಂಕಾ ವಿರುದ್ಧ 18 ಕ್ಕೆ 5 ವಿಕೆಟ್ ಹಾಗೂ ಸೆಮಿಫೈನಲ್ ನಲ್ಲಿ 7/57 ವಿಕೆಟ್ ಕಿತ್ತು ದಾಖಲೆ ನಿರ್ಮಿಸಿ ಪಂದ್ಯಪುರುಷ ಪ್ರಶಸ್ತಿಗಳಿಗೆ ಪಾತ್ರರಾಗಿದ್ದ ಮೊಹಮ್ಮದ್ ಶಾಮಿ ಈ ವಿಶ್ವಕಪ್ ನಲ್ಲಿ ಮಾಡಿದ ದಾಖಲೆಗಳು ಒಂದೆರಡಲ್ಲ. ಭಾರತೀಯ ಕ್ರಿಕೆಟ್ ತಂಡದಲ್ಲಿ ಒಂದೇ ವಿಶ್ವಕಪ್ ನಲ್ಲಿ ಅತೀ ಕಡಿಮೆ (17) ಇನ್ಸಿಂಗ್ಸ್ ನಲ್ಲಿ 50 ವಿಕೆಟ್ ಹಾಗೂ ವಿಶ್ವಕಪ್ ನಲ್ಲಿ ಇಲ್ಲಿಯ ತನಕ ಒಂದೇ ಇನ್ಸಿಂಗ್ಸ್ ನಲ್ಲಿ ಏಳು ವಿಕೆಟ್ ಕಿತ್ತ ಬಾಲರ್ ಆಗಿ ಮೊಹಮ್ಮದ್ ಶಮಿ ಹೊರಹೊಮ್ಮಿದ್ದಾರೆ. ಇನ್ನು ವಿಶ್ವಕಪ್ ಪಂದ್ಯಗಳಲ್ಲಿ 8 ಬಾರಿ ನಾಲ್ಕು ವಿಕೆಟ್ ಗೊಂಚಲನ್ನು ಮತ್ತು ನಾಲ್ಕು ಬಾರಿ 5 ವಿಕೆಟ್ ಗೊಂಚಲನ್ನು ಕಿತ್ತು ಹೊಸ ದಾಖಲೆಯನ್ನು ಬರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಹುಟ್ಟಿದ ಶಮಿ ಪಶ್ಚಿಮ ಬಂಗಾಲ ಪರ ರಣಜಿ ಪಂದ್ಯಗಳನ್ನು ಆಡಿ ತಮ್ಮ ಕ್ರಿಕೆಟ್ ಜೀವನವನ್ನು ಆರಂಭಿಸಿದರು. ಅದಕ್ಕಿಂತ ಮೊದಲು ಇವರು ಬಂಗಾಲದ ಮೋಹನ್ ಬಗಾನ್ ಕ್ರಿಕೆಟ್ ಕ್ಲಬ್ ಪರ ಆಡುತ್ತಿದ್ದರು. ಈಡನ್ ಗಾರ್ಡನ್ ನಲ್ಲಿ ಒಮ್ಮೆ ಸೌರವ್ ಗಂಗೂಲಿಯವರಿಗೆ ನೆಟ್ ನಲ್ಲಿ ಬೌಲಿಂಗ್ ಮಾಡಿ ಅವರ ಆಶ್ಚರ್ಯಚಕಿತರನ್ನಾಗಿಸಿದ ಶಮಿ, ಗಂಗೂಲಿಯವರ ಶಿಫಾರಸ್ಸಿನ ಮೇರೆಗೆ ಬಂಗಾಲ ರಣಜಿ ತಂಡಕ್ಕೆ ಆಯ್ಕೆಗೊಂಡಿದ್ದರು. ತಮ್ಮ ಚೊಚ್ಚಲ ಟೆಸ್ಟ್ ಮ್ಯಾಚ್ ನಲ್ಲಿ ವೆಸ್ಟ್ ವಿಂಡಿಸ್ ವಿರುದ್ಧ ಎರಡು ಇನ್ಸಿಂಗ್ಸ್ ನಲ್ಲಿ 118 ರನ್ ನೀಡಿ ಒಂಭತ್ತು ವಿಕೆಟ್ ಪಡೆದ ಶಮಿ ಭಾರತದ ಯಾವುದೇ ಆಟಗಾರ ತಮ್ಮ ಚೊಚ್ಚಲ ಟೆಸ್ಟ್ ಮ್ಯಾಚ್ ನಲ್ಲಿ ಮಾಡಿರದ ದಾಖಲೆಯನ್ನು ನಿರ್ಮಿಸಿದ್ದಾರೆ. ಹೀಗೆ ಹಲವು ದಾಖಲೆಗಳು ಶಮಿ ಹೆಸರಿನಲ್ಲಿದೆ. ಇತ್ತೀಚೆಗೆ ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಆಟಗಾರರ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಶಮಿಯವರನ್ನು ಆಲಂಗಿಸಿ ಬೆನ್ನಿಗೆ ಪ್ರೀತಿಯಿಂದ ತಟ್ಟಿರುವುದನ್ನು ಜಗತ್ತೇ ನೋಡಿದೆ. ಇಂತಹ ಶ್ರೇಷ್ಟ ಆಟಗಾರನಿಗೆ ಅರ್ಜುನ ಪ್ರಶಸ್ತಿ ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಕ್ರೀಡಾಕ್ಷೇತ್ರದ ಅತೀ ದೊಡ್ಡ ಪ್ರಶಸ್ತಿಯಾಗಿರುವ ಅರ್ಜುನ ಪ್ರಶಸ್ತಿಯಿಂದ ಅವರನ್ನು ಪುರಸ್ಕೃರಿಸಿದರೆ ಅದು ಆ ಪ್ರಶಸ್ತಿಯ ಮೌಲ್ಯವನ್ನು ಕೂಡ ಹೆಚ್ಚಿಸಿದಂತೆ ಎನ್ನುವುದು ಈ ಸಾಧಕನ ಅಭಿಮಾನಿಗಳ ಆಶಯ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search