• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಕಾಂಗ್ರೆಸ್ ವಿನೂತನ ಸೂತ್ರ!

Tulunadu News Posted On December 16, 2023
0


0
Shares
  • Share On Facebook
  • Tweet It

ಕಾಂಗ್ರೆಸ್ ಪಕ್ಷ ಅಸ್ತಿತ್ವಕ್ಕೆ ಬಂದು 138 ವರ್ಷಗಳಾಗುತ್ತಿರುವ ಈ ವರ್ಷದಲ್ಲಿ ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಹಲವು ರೀತಿಯ ಮಾರ್ಗೋಪಾಯಗಳನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಆರಂಭದಲ್ಲಿ ಆನ್ ಲೈನ್ ಮೂಲಕ ಹಣ ಸಂಗ್ರಹ ಮಾಡುವ ಚಿಂತನೆಯಿದ್ದು, ಅದಕ್ಕೆ “ಡೋನೇಟ್ ಟು ದೇಶ್” ಎಂದು ಹೆಸರಿಡಲಾಗಿದೆ. ಇದು 1920 -21 ರಲ್ಲಿ ಮಹಾತ್ಮಾ ಗಾಂಧಿಜಿಯವರು ನಡೆಸಿದ ಅಭಿಯಾನ ” ತಿಲಕ್ ಸ್ವರಾಜ್ಯ ಫಂಡ್” ನಿಂದ ಪ್ರಭಾವಿತರಾಗಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.

ಉದ್ಘಾಟನಾ ಅಭಿಯಾನದಲ್ಲಿ ” ಉತ್ತಮ ಭಾರತಕ್ಕಾಗಿ ದೇಣಿಗೆ” ಎಂದು ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪಕ್ಷದ 138 ವರ್ಷಗಳ ಇತಿಹಾಸದ ಸ್ಮರಣೆಗಾಗಿ ಆ ಸಂಖ್ಯೆಯಿಂದಲೇ ಉದಾಹರಣೆಗೆ 138 ರೂ, 1380 ರೂ, 13800 ಹೀಗೆ ಆರ್ಥಿಕ ಸಹಾಯವನ್ನು ನೀಡಬಹುದಾಗಿದೆ. ಪಕ್ಷದ ಆನ್ ಲೈನ್ ಪೋರ್ಟಲ್ ಹಾಗೂ ಅಧಿಕೃತ ವೆಬ್ ಸೈಟ್ ನಿಂದ ಹಣ ಸಂದಾಯ ಮಾಡಲು ಅವಕಾಶವಿದೆ. ಡಿಸೆಂಬರ್ 18 ರಂದು ರಾಷ್ಟ್ರೀಯ ಅಧ್ಯಕ್ಷರು ಈ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.

ಈ ಆನ್ ಲೈನ್ ದೇಣಿಗೆ ಸಂಗ್ರಹ ಅಭಿಯಾನ ಡಿಸೆಂಬರ್ 18 ರಿಂದ 28 ರವರೆಗೆ ನಡೆಯಲಿದ್ದು, ನಂತರ ಮನೆ-ಮನೆ ಸಂಗ್ರಹ, ಪ್ರತಿ ಬೂತ್ ನಲ್ಲಿ 10 ಮನೆಗಳಿಂದ ಹಣ ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ. ನಾಗರಿಕರು ಕನಿಷ್ಟ 138 ರೂಗಳನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ಹೇಳಲಾಗಿದೆ. ಪಕ್ಷದ ಪದಾಧಿಕಾರಿಗಳು 1380 ರೂ ನೀಡಲು ಸೂಚಿಸಲಾಗಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search