• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಗರ ಶರ್ಮಾ ಡೈರಿಯಲ್ಲಿ ಆತ ಸ್ಪಷ್ಟವಾಗಿ ಬರೆದಿದ್ದ!

Tulunadu News Posted On December 16, 2023
0


0
Shares
  • Share On Facebook
  • Tweet It

ಸಂಸತ್ತಿನ ಒಳಗೆ ಅಧಿವೇಶನದ ನಡೆಯುತ್ತಿರುವ ಹೊತ್ತಿನಲ್ಲಿ ವೀಕ್ಷಕರ ಗ್ಯಾಲರಿಯಿಂದ ಒಳಗೆ ಹಾರಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಪ್ರಧಾನ ಆರೋಪಿ ಸಾಗರ್ ಶರ್ಮಾ ಮನೆಯಲ್ಲಿ ಆತ ಬರೆಯುತ್ತಿದ್ದ ಡೈರಿ ಭಯೋತ್ಪಾದಕ ನಿಗ್ರಹ ದಳಕ್ಕೆ ಸಿಕ್ಕಿದೆ. ಅದರಲ್ಲಿ ಸಾಗರ್ ಶರ್ಮಾ ತನ್ನ ಮನದ ಭಾವನೆಗಳನ್ನು ಸ್ಪಷ್ಟವಾಗಿ ಹಿಂದಿ ಭಾಷೆಯಲ್ಲಿ ಬರೆದಿದ್ದಾನೆ.

“ಇನ್ನು ಮನೆ ಬಿಟ್ಟು ಹೋಗುವ ಸಮಯ ಬಂದಿದೆ. ಏನಾದರೂ ಹೋರಾಟ ಮಾಡಲೇಬೇಕು. ನನ್ನ ಮನಸ್ಸಿನ ಭಾವನೆಗಳನ್ನು ತಂದೆ, ತಾಯಿಗಳಿಗೆ ತಿಳಿಸಲು ಮನಸ್ಸು ಹಾತೊರೆಯುತ್ತಿದ್ದರೂ ಅವರಿಗೆ ಅದು ಮನವರಿಕೆ ಆಗಲಿಕ್ಕಿಲ್ಲ. ಈ ದಿನಕ್ಕಾಗಿ ಐದು ವರ್ಷಗಳಿಂದ ಯೋಜನೆ ಹಾಕುತ್ತಿದ್ದೇನೆ. ಬೇರೆಯವರಿಂದ ಕಿತ್ತುಕೊಳ್ಳುವವನು ಯಾವತ್ತೂ ಶಕ್ತಿವಂತನಲ್ಲ. ಸುಖ, ಸಂತೋಷ ತ್ಯಾಗ ಮಾಡಲು ತಯಾರಾಗಿರುವವನು ಮಾತ್ರ ಶಕ್ತಿವಂತ” ಹೀಗೆ ಸಾಗರ್ ಶರ್ಮಾ ಬರೆಯುತ್ತಾ ಹೋಗಿದ್ದಾನೆ. ಆ ಇಡೀ ಡೈರಿಯನ್ನು ತನಿಖೆಗೆ ಒಳಪಡಿಸಿರುವ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ಆತನ ಯೋಜನೆ, ಯೋಚನೆ ಹಾಗೂ ಷಡ್ಯಂತ್ರಗಳನ್ನು ಅರಿತುಕೊಳ್ಳುವ ಕೆಲಸದಲ್ಲಿ ನಿರತರಾಗಿದ್ದಾರೆ.

ಇತನ ಡೈರಿ ಈ ಪ್ರಕರಣಕ್ಕೆ ಮಹತ್ವಪೂರ್ಣ ತಿರುವನ್ನು ನೀಡುವ ಸಾಧ್ಯತೆ ಇದೆ. ಯಾಕೆಂದರೆ ಈ ಘಟನೆಯಲ್ಲಿ ಭಾಗಿಯಾಗಿರುವವರಿಗೂ ಸಾಗರ ಶರ್ಮಾನಿಗೂ ಹಿಂದಿನಿಂದಲೂ ಸಂಬಂಧವಿತ್ತು. ಎಲ್ಲರಿಗೂ ಏನಾದರೂ ಮಾಡಲೇಬೇಕೆಂಬ ಹಪಾಹಪಿ ಇತ್ತು. ಆದರೆ ಏನು ಮಾಡಬೇಕು ಎನ್ನುವ ಸ್ಪಷ್ಟವಾದ ದಾರಿ ಗೊತ್ತಿರಲಿಲ್ಲ. ಇಂತಹ ಮನಸ್ಥಿತಿಯಲ್ಲಿ ಸಿಲುಕಿಕೊಂಡವರು ಸೂಕ್ತ ಗುರು ಸಿಕ್ಕಿದರೆ ಸಮಾಜಕ್ಕೆ ಆಸ್ತಿಯಾಗುತ್ತಾರೆ. ಕೆಟ್ಟ ಸಂಗಡಿಗರು ಸಿಕ್ಕಿದರೆ ಭವಿಷ್ಯವನ್ನೇ ಕಳೆದುಕೊಳ್ಳುತ್ತಾರೆ. ಒಂದು ವೇಳೆ ಈ ಪ್ರಕರಣದಿಂದ ಬಿಡುಗಡೆಯಾಗಿ ಹೊರಗೆ ಬಂದ ಬಳಿಕ ಸಾಗರ್ ಶರ್ಮಾನಿಗೆ ಯಾವುದಾದರೂ ಪಕ್ಷ ವೇದಿಕೆ ನೀಡಬಹುದು. ಅದರಿಂದ ಆತನ ಬೆಳವಣಿಗೆ ಬೇರೆಯದ್ದೇ ರೀತಿಯಲ್ಲಿ ಆಗಬಹುದು. ಯಾಕೆಂದರೆ ನಮ್ಮ ದೇಶದಲ್ಲಿ ದೇಶದ ಸುರಕ್ಷತೆಗಿಂತ ರಾಜಕೀಯ ಲಾಭವೇ ಕೆಲವರಿಗೆ ಮುಖ್ಯವಾಗಿ ಹೋಗಿರುತ್ತದೆ!

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search